ಬೇಗೂರು: ಡಿಎಸ್ ಎಸ್ ಅಲ್ಪಸಂಖ್ಯಾತರ ಅಧ್ಯಕ್ಷರು ಬೆಂಗಳೂರು ಇವರ ನೇತೃತ್ವದಲ್ಲಿ ರವಿ ಸಿಂಗ್ ಹಾಗೂ ನಿಧಿ ಆಹುಜ, ಜಗನ್, ವಾಹಿದ್, ಜಗನ್ ಹಾಗೂ ಶಾಲಾ ಸಿಬ್ಬಂದಿಯ ಉಪಸ್ಥಿತಿಯಲ್ಲಿ ಹುಳಿಮಾವಿನ ಸಮರ್ಥನಂ ವಿಕಲಚೇತನ ಮಕ್ಕಳ ಶಾಲೆ’ಯಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಯಿತು.
ಅಬ್ದುಲ್ ಬೇಗೂರು ಈಗಾಗಲೇ ಅನೇಕ ರೀತಿಯಲ್ಲಿ ಸಾಮಾಜಿಕ ಸೇವೆಗಳಲ್ಲಿ ತೊಡಗಿದ್ದು, ಕೋವಿಡ್ ಸಮಯದಲ್ಲಿ ಅನೇಕರಿಗೆ ನಾನಾ ವಿಧದಲ್ಲಿ ಸಹಾಯವನ್ನು ಮಾಡಿದ್ದಾರೆ. ಅಬ್ದುಲ್ ಬೇಗೂರು, ರವಿ ಸಿಂಗ್, ನಿಧಿ ಅಹುಜ ಈ ಮೂವರು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ರವಿ ಸಿಂಗ್ ಅವರ ಧರ್ಮಪತ್ನಿ ನಿಧಿ ಆಹುಜ ಅವರು ಕೂಡ ಈ ಸಾಮಾಜಿಕ ಕೆಲಸಗಳಿಗೆ ಕೈ ಜೋಡಿಸಿದ್ದಾರೆ.
ಎಲ್ಲರೂ ನಮ್ಮ ಹೊಟ್ಟೆ ತುಂಬಿದರೆ ಸಾಕು ಎಂದು ಸುಮ್ಮನಿರುತ್ತಾರೆ. ಆದರೆ ಈ ಸಾಮಾಜಿಕ ಸೇವೆಯನ್ನು ಮಾಡುತ್ತಿರುವ ಕೈಗಳು ಹಸಿದವರ ಹೊಟ್ಟೆ ತುಂಬಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB