ಗುಬ್ಬಿ: ತಾಲೂಕಿನ ಕೋಡಿ ನಾಗೇನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ಮಾರ್ಚ್ 6ರಂದು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಯಿತು.
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೋಡಿ ನಾಗೇನಹಳ್ಳಿ ಗ್ರಾಮದ ಪ್ರಸಾದ್ ಪಟೇಲ್ ರವರ ತೋಟದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಂ.ಎನ್.ಕೋಟೆ ವಲಯದ ಒಕ್ಕೂಟದ ಗೌರವಾಧ್ಯಕ್ಷರಾದ ಕಿಡಿಗಣ್ಣಪ್ಪ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿಕೊಂಡರು
ಸುಮಾರು ಎರಡು ಸಾವಿರ ಸದಸ್ಯರು 500 ಜೋಡಿಗಳು ಸತ್ಯ ನಾರಾಯಣ ಸ್ವಾಮಿ ಪೂಜೆಗೆ ಭಾಗವಹಿಸಲಿದ್ದು, ಈ ಭಾಗದ ಸರ್ವ ಸದಸ್ಯರು ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಮೂಲಕ ಕಾರ್ಯ ಕ್ರಮದ ಅಭೂತಪೂರ್ವ ಸಂಗಮ ಯಶಸ್ವಿ ಗೆ ಸಹಕರಿಸಬೇಕು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಹರೀಶ್, ಮಾಜಿ ತಾ.ಪಂ.ಸದಸ್ಯ ಅ.ನಾ.ಲಿಂಗಪ್ಪ, ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಇದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB