ರಾಯಚೂರು: ಗಣರಾಜ್ಯೋತ್ಸವ ದಿನ, ಸಂವಿಧಾನ ದಿನಾಚರಣೆಯಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವರ್ತಿಸಿದ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದರೆ ಮಾತ್ರ ತಾನು ಧ್ವಜರೋಹಣ ಮಾಡುವುದಾಗಿ ಹೇಳಿರುವುದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರದಿಗಳ ಪ್ರಕಾರ, ಗಣರಾಜ್ಯೋತ್ಸವ ಆಚರಣೆಯ ವೇಳೆ ಗಾಂಧೀಜಿ ಭಾವ ಚಿತ್ರದ ಜೊತೆಗೆ ಅಂಬೇಡ್ಕರ್ ಚಿತ್ರವನ್ನು ಕೂಡ ಇರಿಸಲಾಗಿತ್ತು. ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಮಾಡಲು ಒಪ್ಪದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋ ತೆಗೆದು ಹಾಕಲು ಪಟ್ಟು ಹಿಡಿದಿದ್ದು, ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್ ಫೋಟೋವನ್ನು ತೆಗೆದು ಹಾಕುವ ಮೂಲಕ ಅಂಬೇಡ್ಕರ್ ಅವರಿಗೆ ಸಂವಿಧಾನ ದಿನಾಚರಣೆಯ ದಿನದಂದೇ ಅವಮಾನ ಮಾಡಲಾಗಿದೆ. ಈ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy