ಮೈಸೂರು: ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕರೆ ಕೊಟ್ಟಿದ “ಮೈಸೂರ್ ಬಂದ್” ಬೆಂಬಲಿಸಿ, ಕರ್ನಾಟಕ ರಾಜ್ಯ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿತು.
ಘೋಷಣೆಗಳನ್ನು ಕೂಗುತ್ತಾ ಮೈಸೂರಿನ ಸಿ.ಟಿ.ಬಸ್ ನಿಲ್ದಾಣ, ಸೈಬರ್ ಬಸ್ ನಿಲ್ದಾಣ, ಅಶೋಕ ರಸ್ತೆ, ಸಯ್ಯಾಜಿರಾವ್ ರಸ್ತೆ, ಅರಸು ರಸ್ತೆ ಮೂಲಕ ಇಡೀ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ ನಡೆಸಲಾಯಿತು.
ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಿದ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಎರಡನೇ ಭೀಮಾಕೋರೆಂಗಾವ್ ಯುದ್ಧಕ್ಕೆ ಸಜ್ಜಾಗಬೇಕಿದೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರತಿಭಟನೆಯಲ್ಲಿ ಸಂಶೋಧಕರಾದ ನಂಜುಂಡಸ್ವಾಮಿ, ಪ್ರವೀಣ್ ಕುಮಾರ್, ಅಮ್ಮ ರಾಮಚಂದ್ರ, ರಾಜೇಂದ್ರ, ಮಾರುತಿ, ಬಳ್ಳಾರಿ ಹನುಮಂತಪ್ಪ ಮತ್ತು ವಿದ್ಯಾರ್ಥಿಗಳ ಕರುಣ, ಮನು ಕುಮಾರ್, ಅಭಿಷೇಕ್, ರಾಹುಲ್, ಅಮಿತ್, ವಿಜಯ್, ಶಿವರಾಜ್, ಸಂತೋಷ್, ಅರುಣ್ ಮಣಿ ಮಟ್ಟದಕಟ್ಟೆ. ಇನ್ನು ಮುಂತಾದ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಜೊತೆಗೆ ಮೈಸೂರಿನ ದಲಿತ ಸಂಘಟನೆಗಳು ವಿದ್ಯಾರ್ಥಿ ಸಂಘಟನೆಗಳು ರೈತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದವು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB