ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರು ಮತ್ತೆ ಎಡವಟ್ಟು ಮಾಡಿದ್ದು ವಾಹನ ತಪಾಸಣೆ ವೇಳೆ ವೃದ್ಧ ಬೈಕ್ ನಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಚಾಮರಾಜಪುರಂ ನ ನಿವಾಸಿ ಬಸವರಾಜು ಬೈಕ್ ನಿಂದ ಬಿದ್ದು ಗಾಯಗೊಂಡ ವೃದ್ಧ. ಮೈಸೂರಿನ ಆರ್ ಟಿಓ ವೃತ್ತದಲ್ಲಿ ಕೆ ಆರ್ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು . ಹೆಲ್ಮೆಟ್ ಹಾಕದ ವೃದ್ಧನಿಗೆ ಬ್ಯಾರಿಕೇಡ್ ಅಡ್ಡಗಟ್ಟಿ ನಿಲ್ಲಿಸಲು ಟ್ರಾಫಿಕ್ ಪೊಲೀಸರು ಯತ್ನಿಸಿದ್ದು, ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೈಕ್ ನಿಂದ ಬಿದ್ದು ವೃದ್ಧನಿಗೆ ಗಂಭೀರ ಗಾಯಗಳಾಗಿದೆ.
ಮರದ ಹಿಂದೆ ಅವಿತು ಹಿಡಿಯಲು ಪೊಲೀಸರು ಯತ್ನಿಸಿದ ಪರಿಣಾಮ ಈ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರತಿದಿನ ವಾಹನ ತಪಾಸಣೆ ಹೆಸರಿನಲ್ಲಿ ವಾಹನ ಸವಾರರಗೆ ಪೋಲಿಸರು ಕಿರಿಕರಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಕೆಲಕಾಲ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy