nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಸಂಘ ಮತ್ತಷ್ಟು ಗಟ್ಟಿಯಾಗಬೇಕು: ಡಾ.ಪಿ.ಸಾಯಿನಾಥ್
    ಜಿಲ್ಲಾ ಸುದ್ದಿ January 20, 2025

    ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಸಂಘ ಮತ್ತಷ್ಟು ಗಟ್ಟಿಯಾಗಬೇಕು: ಡಾ.ಪಿ.ಸಾಯಿನಾಥ್

    By adminJanuary 20, 2025No Comments4 Mins Read
    p sainath

    ತುಮಕೂರು: ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸೂಕ್ತ ಸಂದರ್ಭದಲ್ಲಿ ಸಿಗಬೇಕಾದರೆ ಪತ್ರಕರ್ತರ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ಆ ಮೂಲಕ ಪತ್ರಿಕಾ ಸ್ವಾತಂತ್ರ, ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮ್ಯಾಗ್ನೇಸ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಡಾ.ಪಿ.ಸಾಯಿನಾಥ್ ತಿಳಿಸಿದ್ದಾರೆ.

    ನಗರದ ಶ್ರೀಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ 39ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡುತಿದ್ದ ಅವರು, ಪತ್ರಿಕಾ ಒಕ್ಕೂಟಗಳು ಅವನತಿಯಾದರೆ ಸ್ವಾತಂತ್ರ ಪತ್ರಿಕೋದ್ಯಮ ಸತ್ತ ಹಾಗೆ. ಆದ್ದರಿಂದ ಪತ್ರಕರ್ತರು ಮತ್ತು ಸಂಘಟನೆಗಳು ಸಂಯುಕ್ತವಾಗಿ ಇಂತಹ ವೇದಿಕೆಗಳ ಹೋರಾಟ ನಡೆಸುವ ಅಗತ್ಯವಿದೆ ಎಂದರು.


    Provided by
    Provided by

    ಸಮ್ಮೇಳನಗಳು, ಕಾರ್ಯಾಗಾರಗಳಲ್ಲಿ, ಪತ್ರಕರ್ತರ ಸಮಸ್ಯೆಗಳ, ಹಕ್ಕು ಬಾಧ್ಯತೆಗಳನ್ನು ಚರ್ಚಿಸಲು ಇಂತಹ ವೇದಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಿಕೋದ್ಯಮ ಮತ್ತು ಪತ್ರಕರ್ತರ ನಡುವೆ ಸಾಕಷ್ಟು ವೈರುಧ್ಯವಿದೆ. ಉದ್ಯಮ ಬದಲಾವಣೆಗಳನ್ನು ಕಾಣುತ್ತಿದೆ. ವೃತ್ತಿಪರ ಪತ್ರಕರ್ತರ ಬದುಕು ಹಸನಾಗಲು ಸರಕಾರಗಳನ್ನು ಮನವೊಲಿಸುವ ತೀವ್ರ ಹೋರಾಟಗಳನ್ನು ಸಮ್ಮೇಳನಗಳಲ್ಲಿ ರೂಪಿಸಬೇಕೆಂದು ಪಿ.ಸಾಯಿನಾಥ್ ಸಲಹೆ ನೀಡಿದರು.

    ಬಂಡವಾಳ ಶಾಹಿ ಮಾಧ್ಯಮ ದೊರೆಗಳು ಪತ್ರಿಕಾ ಕ್ಷೇತ್ರದ ಹಿಡಿತವನ್ನು ಸಾಧಿಸುತ್ತಿದ್ದಾರೆ. ಇದು ವಾಕ್ ಸ್ವಾತಂತ್ರವನ್ನು ಹತ್ತಿಕ್ಕುವ ಕೆಲಸವಾಗಿದೆ. ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಕೆಲಸಗಳನ್ನು ಮಾಡಿಸುವುದರ ಮೂಲಕ ಯುವ ಪತ್ರಕರ್ತ ಸಮೂಹದ ಭವಿಷ್ಯವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಸಾಯಿನಾಥ್ ತಿಳಿಸಿದರು.

    ಸ್ವಾತಂತ್ರ ಪತ್ರಕೋದ್ಯಮವನ್ನು ಮುಕ್ತವಾಗಿ ಆಸ್ವಾದಿಸುವ ಅವಕಾಶಕ್ಕೆ ಸರಕಾರಗಳು ಕೊಡಲಿ ಪೆಟ್ಟು ನೀಡುತ್ತಿವೆ. ಇದು ಅಭಿವೃದ್ದಿ ಪತ್ರಿಕೋದ್ಯಮಕ್ಕೆ ಕತ್ತು ಹಿಸುಕುವ ಕೆಲಸವಾಗಿದೆ ಎಂದು ದೂಷಿಸಿದ ಅವರು, ದೇಶದ ಪತ್ರಿಕೋದ್ಯಮ ಪರಿಸ್ಥಿತಿ ಅವನತ್ತಿಯತ್ತ ಸಾಗಿದೆ.ಇದಕ್ಕೆ ನಮ್ಮನಾಳುವ ಸರಕಾರಗಳು ಜಾರಿಗೆ ತರುತ್ತಿರುವ ಕಾರ್ಪೋರೇಟ್ ಸಂಸ್ಕೃತಿ ಮತ್ತು ಬಂಡವಾಳ ಶಾಹಿ ಹಾಗೂ ವ್ಯಾಣಿಜ್ಯೀಕರಣದ ಪರಿಣಾಮಗಳು ಕಾರಣವಾಗಿವೆ. ಭಾರತದಲ್ಲಿ ನೈಜ ಪತ್ರಿಕೋದ್ಯಮ ಕುಸಿಯುತ್ತಿದೆ.ಇದಕ್ಕೆ ಮೇಲಿನ ಎಲ್ಲವೂ ಕಾರಣವಾಗಿದೆ ಎಂದು ಸರಕಾರದ ಧೋರಣೆಗಳನ್ನು ಖಂಡಿಸಿದರು.

    ಕೊರೊನ ಸಂದರ್ಭದಲ್ಲಿ ಆದ ಲಾಕ್‌ಡೌನ್‌ ನಿಂದ ಸುಮಾರು 90ರಷ್ಟು ಪತ್ರಕರ್ತರು ತಮ್ಮ ಕೆಲಸ ಕೊಳೆದುಕೊಂಡರು, ಉದ್ಯೋಗ ಭದ್ರತೆಯೇ ಇಲ್ಲದಂತಾಯಿತು. ರೈತರು ಸುಮಾರು 1000ಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸಿ, 750ಕ್ಕೂ ಹೆಚ್ಚು ಜನ ಸಾವನ್ನಪ್ಪಿದರು. ಆದರೆ ಶೇ60ರಷ್ಟು ಭಾರತದ ಮಾಧ್ಯಮಗಳು ಮೋದಿ, ಅಂಬಾನಿ, ಅದಾನಿಯ ಜಪ ಮಾಡುತ್ತಿದ್ದವು. ಮಾನವೀಯ ವರದಿಗಳನ್ನು ನಿರ್ಲಕ್ಷಿಸಲಾಯಿತು. ಜಗತ್ತಿನ ಮಾಧ್ಯಮದ ದಿಕ್ಕಿಗೂ ಭಾರತದ ಮಾಧ್ಯಮ ದೃಷ್ಟಿಕೋನಕ್ಕೂ ಅಜಗಜಾಂತರ ವ್ಯತ್ಯಾಸವನ್ನು ಕಾಣುತ್ತಿದ್ದೇವೆ ಎಂದರು.

    ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿ, ಸಮ್ಮೇಳನದ ಪತ್ರಕರ್ತರ ವೃತ್ತಿ ಬದುಕಿನ ಗುಣಮಟ್ಟ ಹೆಚ್ಚಿಸಲು ಪೂರಕವಾಗಿವೆ. ಶಾಸಕ ಬಿ.ಸುರೇಶಗೌಡ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. 200 ವರ್ಷಗಳ ಹಿಂದಿನಿಂದಲೂ ಪತ್ರಿಕೋದ್ಯಮ ನಡೆದುಕೊಂಡು ಬಂದಿದೆ. ಹಲವಾರು ಬದಲಾವಣೆಗಳಾಗಿವೆ. ಅಚ್ಚುಮೊಳೆಯಿಂದ ಕಂಪ್ಯೂಟರ್, ಅರ್ಟಿಪಿಷಿಯಲ್ ಇಂಟಲಿಜೆನ್ಸ್ ಬಂದಿದೆ. ಆದರೆ ಪತ್ರಕರ್ತರ ಸ್ಥಿತಿಗತಿ ಬದಲಾಗಿಲ್ಲ. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪತ್ರಕರ್ತರಲ್ಲಿ ಹಲವಾರು ವೈರುದ್ಯಗಳಿವೆ. ಬರವಣಿಗೆಯಲ್ಲಿ ಆಸಕ್ತಿ ಇರುವವರೆ ಈ ಕ್ಷೇತ್ರಕ್ಕೆ ಬರುತ್ತಾರೆ. ಪತ್ರಕರ್ತರ ಸ್ಥಿತಿಗತಿಗಳ ಬದಲಾವಣೆಗೆ ಗಂಭೀರ ಚಿಂತನೆ ಅಗತ್ಯವಿದೆ ಎಂದರು.

    ಸಮಾಜದ ಆಗುಹೋಗುಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಪತ್ರಕರ್ತರಿಗೆ, ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕಿದೆ. ಟೀಕೆಗಳು ಸಹಜ, ಆದರೆ ಪತ್ರಕರ್ತರು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದು ಸಮ್ಮೇಳನದಲ್ಲಿ ಚರ್ಚೆಯಾಗಬೇಕಿದೆ. ಅಭಿವೃದ್ದಿ,ತನಿಖಾ ಪತ್ರಿಕೋದ್ಯಮ ಮರೆಯಾಗಿದೆ. ಬಳಿ ಹೇಳಿಕೆಗಳು ಹಾಗೂ ಪ್ರತಿ ಹೇಳಿಕೆಗಳಿಗೆ ಸೀಮಿತವಾಗಿದೆ. ಮಾಧ್ಯಮಗಳಿಗೆ ನಿಜವಾದ ಸವಾಲಾಗಿರುವುದು ಸೋಷಿಯಲ್ ಮೀಡಿಯಾ. ಪತ್ರಿಕೆಗಳಿಗೆ ಇಂದಿಗೂ ವಿಶ್ವಾಸಾರ್ಹತೆ ಉಳಿಸಿ ಕೊಂಡಿವೆ. ಅದನ್ನು ಕಾಪಾಡಿಕೊಂಡು ಹೋಗಬೇಕಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್‌ ಪಾಸ್ ಪ್ರಕ್ರಿಯೆ ಚಾಲನೆಯಾಗಲಿದೆ. ಮುಂದಿನ 15 ದಿನದಲ್ಲಿ ಜಾರಿಗೆ ಬರಲಿದೆ. ಆರೋಗ್ಯ ವಿಮೆ ಎಷ್ಟು ಮುಖ್ಯ ಎಂಬುದನ್ನು ಕರೋನ ತೋರಿಸಿಕೊಟ್ಟಿದೆ. ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ ಆರೋಗ್ಯ ವಿಮೆಗೆ ಚಾಲನೆ ಸಹ ನೀಡಿದೆ. ಎಪಿಎಲ್, ಬಿಪಿಎಲ್ ಇಲ್ಲದೆ ಅರೋಗ್ಯಭಾಗ್ಯ 2 ತಿಂಗಳಲ್ಲಿ ಕೈಗೂಡಲಿದೆ. ಸೂರು ನೀಡುವ ವಿಚಾರದಲ್ಲಿ ಜಿಲ್ಲಾಡಳಿತಗಳು ಜಾಗ ಗುರುತಿಸಿ ಕೊಟ್ಟರೆ ಅದನ್ನು ಪತ್ರಕರ್ತರಿಗೆ ನೀಡಲು ಸಿದ್ದವಿದೆ ಎಂದು ಕೆ.ವಿ.ಪ್ರಭಾಕರ್ ನುಡಿದರು.

    ಶಾಸಕ ಸಿ.ಬಿ.ಸುರೇಶಬಾಬು ಮಾತನಾಡಿ, ಖಡ್ಗಕ್ಕಿಂತ ಲೇಖನಿ ಹರಿತ ಎಂಬುದನ್ನು ಪದೇ ಪದೇ ಪತ್ರಕರ್ತರು ಸಾಬೀತು ಪಡಿಸುತ್ತಿದ್ದಾರೆ. ಸಮಾಜದ ದೃಷ್ಟಿಕೋನ ಸರಿಯಾಗಬೇಕಾದರೆ ಇದು ಮತ್ತಷ್ಟು ಹರಿತವಾಗಬೇಕು. ವೃತ್ತಿ ಬದ್ದತೆಯ ಜೊತೆಗೆ, ವೃತ್ತಿ ಘನತೆಯನ್ನು ಉಳಿಸಿಕೊಳ್ಳಬೇಕು. ಕಾರ್ಯಾಂಗ, ಶಾಸಕಾಂಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಾಧ್ಯಮಗಳ ಕೆಲಸ ಮಾಡುತ್ತಿವೆ. ಸೋಷಿಯಲ್ ಮೀಡಿಯಾ ಹೆಚ್ಚು ಸಕ್ರಿಯವಾಗಿರುವ ಇಂದಿನ ಕಾಲದಲ್ಲಿ ಸೋಷಿಯಲ್ ಮೀಡಿಯಾದಿಂದ ಆಗುವ ಅಪಾಯಕಾರಿ ಬೆಳವಣಿಗೆಗಳನ್ನು ತಡೆಯುವ ನಿಟ್ಟಿನಲ್ಲಿಯೂ ಸಕ್ರಿಯವಾಗಬೇಕು. ಮಾಧ್ಯಮದಲ್ಲಿ ಕೆಲಸ ಮಾಡುವವರ ಜೊತೆಗೆ, ಪತ್ರಿಕಾ ವಿತರಕರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ ಎಂದರು.

    ಶಾಸಕ ಬಿ.ಸುರೇಶಗೌಡ ಮಾತನಾಡಿ, ಪ್ರಜಾಪ್ರಭುತ್ವ ವಿವಿಧ ಅಂಗಗಳ ಜೊತೆಗೆ ಕೆಲಸ ಮಾಡುವ ಮಹತ್ವದ ಅಂಗವಾಗಿದೆ. ಆಡಳಿತ ಪಕ್ಷದ ನಿಜವಾದ ವಿರೋಧಪಕ್ಷ ಎಂದರೆ ಅದು ಮಾಧ್ಯಮ. 10 ವರ್ಷಗಳಿಂದಲೂ ಟಿ.ವಿ. ನ್ಯೂಸ್ ನೋಡುತ್ತಿಲ್ಲ. ಆದರೆ ಪತ್ರಿಕೆಗಳನ್ನು ಓದುತ್ತೇನೆ. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡಿಸಬೇಕಾದ ಧರ್ಮ ಪತ್ರಿಕಾಧರ್ಮ. ಆದರೆ ಕೆಲವ ಪತ್ರಿಕೆಗಳು ಆಡಳಿತ ಪಕ್ಷದ ಜೊತೆಗೆ ಕೈಜೋಡಿಸಿರುವುದು ವಿಪರ್ಯಾಸ. ಇದು ಬದಲಾಗಬೇಕು. ವೈಯುಕ್ತಿಕವಾಗಿ ಹೇಳಿದ ಮಾತುಗಳನ್ನು ಸಾರ್ವಜನಿಕಗೊಳಿಸಿ, ನನ್ನ ಸೋಲಿಗೆ ಕಾರಣವಾಯಿತು. ರಾಜಕಾರಣಿಗಳಿಗೆ ಇದು ಸಹಜ. ಆದರೆ ಜನರ ನಂಬಿಕೆ ಕಳೆದುಕೊಳ್ಳಬಾರದು. ಸಮಾಜ ರೂಪಿಸುವ ಕೆಲಸ ಮಾಧ್ಯಮಗಳಿಂದ ಆಗಬೇಕು. ಸೂಕ್ಷ ಕಣ್ಣಿನಿಂದ ಪ್ರತಿ ಸುದ್ದಿಗಳನ್ನು ಪರಾಮರ್ಶಿಸುವ ಕೆಲಸ ಆಗಬೇಕಿದೆ. ಹಿಂಸೆಯ, ವ್ಯಕ್ತಿಯ ವೈಭವೀಕರಣದಿಂದ ಮಾಧ್ಯಮಗಳ ಘನತೆಗೆ ಕುಂದುಂಟಾಗುತ್ತಿದೆ. ತಾಜಾ ಸುದ್ದಿಗಳ ಹುಡುಕುವುದೇ ಓದುಗನಿಗೆ ದೊಡ್ಡ ಸವಾಲಾಗಿದೆ ಎಂದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ ಮಾತನಾಡಿ, ಕಾರ್ಯಾಂಗದ ಕಣ್ಣು ಮತ್ತು ಕಿವಿ ತೆರೆಸುವ ಕೆಲಸವನ್ನು ಸದಾ ಕಾಲ ಮಾಧ್ಯಮಗಳು ಮಾಡುತ್ತಲೇ ಬಂದಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಈ ಕೆಲಸವನ್ನು ಮುದುವರೆಸಿ ಕೊಂಡು ಹೋಗುವ ಸವಾಲು ಎಲ್ಲಾ ಪತ್ರಿಕೆಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಬಿಡಿಯಾಗಿದ್ದರೆ ಏನು ಸಾಧ್ಯವಿಲ್ಲ . ರಾಜ್ಯದಲ್ಲಿ ಸುಮಾರು 10 ಸಾವಿರದಷ್ಟಿರುವ ಪತ್ರಕರ್ತರು ಒಗ್ಗೂಡಿದರೆ ಏನು ಸಾಧನೆ ಮಾಡುಬಹುದು ಎಂಬುದಕ್ಕೆ ಇಂದಿನ ಸಮ್ಮೇಳನವೇ ಸಾಕ್ಷಿಯಾಗಿದೆ. ತುಮಕೂರು ಜಿಲ್ಲಾ ಪತ್ರಕರ್ತರು ಒಂದು ತಂಡವಾಗಿ ಕೆಲಸ ಮಾಡಿ, ಸಮ್ಮೇಳನ ಯಶಸ್ವಿಯಾಗಲು ದುಡಿದಿದ್ದಾರೆ ಎಂದರು.

    ಶಾಸಕರಾದ ಬಿ.ಸುರೇಶಗೌಡ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್,ಕೆ ಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಡಾ.ನಾಗಣ್ಣ, ಕಾಯರ್ ಬೋರ್ಡ್ ನ ನಟರಾಜು, ಬಾಲಭವನದ ಅಧ್ಯಕ್ಷ ನಾಯ್ಡು, ರಾಷ್ಟ್ರೀಯ ಮಂಡಳಿ ಸದಸ್ಯರಾದ ಟಿ.ಎನ್.ಮಧುಕರ್,  ಡಿ.ಎಂ.ಸತೀಶ್, ಅನುಶಾಂತರಾಜು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.