nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    ಜಿಲ್ಲಾ ಸುದ್ದಿ September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    By adminSeptember 27, 2025No Comments2 Mins Read
    arogya thapasana

    ಸರಗೂರು:  ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಎಸ್ ವಿವೈಎಂ ಸಂಸ್ಥೆ ಉತ್ತಮ ಅವಕಾಶ ಮಾಡಿದ್ದಾರೆ ಎಂದು ಜೆಎಸ್ಎಸ್ ವಿದ್ಯಾ ಸಂಸ್ಥೆಗಳ ಹಾಗೂ ಮೃತ್ಯುಂಜಯಪ್ಪ ಟ್ರಸ್ಟ್ ಅಧ್ಯಕ್ಷೆ ಸುಧಾ ಮೃತ್ಯುಂಜಯಪ್ಪ ಹೇಳಿದರು.

    ಪಟ್ಟಣದ ವಿವೇಕಾನಂದರ ಯೂತ್ ಮೂವ್ ಮೆಂಟ್ ಆಸ್ಪತ್ರೆ ಆವರಣದಲ್ಲಿ ಶನಿವಾರದಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ವಿವೇಕಾನಂದ ಸ್ಮಾರಕ ಆಸ್ಪತ್ರೆ ಮತ್ತು ವರ್ತಕ ಮಂಡಳಿ ಸರಗೂರು ಲಯನ್ ಕ್ಲಬ್ ಆಫ್ ಸರಗೂರು, ನೋಟರಿ ಕ್ಲಬ್ ಎಚ್.ಡಿ.ಕೋಟೆ, ಜೈನ್ ಮಿಲನ್ ಸರಗೂರು, ರಾಜಸ್ಥಾನ ಸಂಘ‌, ಲಯನ್ಸ್ ಕ್ಲಬ್,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಉಂಟಾಗಬೇಕು. ಆರೋಗ್ಯ ತಪಾಸಣೆ ಕಾರ್ಯಕ್ರಮಗಳ ಪ್ರಯೋಜನ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಎಂದರು.

    ಅಧುನಿಕ ಜೀವನಶೈಲಿ, ಆಹಾರ ಪದ್ಧತಿ ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ದುಶ್ಚಟಗಳಿಂದ ದೂರವಿದ್ದು, ಆಗಾಗ ನಿಯಮಿತ ರೋಗ ತಪಾಸಣೆಯಿಂದ ಆರೋಗ್ಯಮಯ ಜೀವನ ನಡೆಸಬೇಕು. ಗ್ರಾಮೀಣ ಭಾಗದಲ್ಲಿಈ ರೀತಿ ಶಿಬಿರವನ್ನು ವಿವೇಕಾನಂದ ಸ್ಮಾರಕ ಆಸ್ಪತ್ರೆ ಆಯೋಜಿಸಿರುವುದು ಅಭಿನಂದನರ್ಹ ಎಂದರು.

    ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ. ಆದರೆ ಅರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.

    ಐಪಿಎಸ್ ನಿವೃತ್ತಿ ಅಧಿಕಾರಿ ಚಮನ್ ಲಾಲ್ ಮಾತನಾಡಿ,  ವೈದ್ಯಕೀಯ ಚಿಕಿತ್ಸೆ ಪಡೆಯುವುದರೊಂದಿಗೆ, ಸರ್ಕಾರ ಯೋಗ ಶಿಬಿರವನ್ನು ನಡೆಸುತ್ತಿದ್ದು ಅದರ ಪ್ರಯೋಜನ ಪಡೆಯಬಹುದು ಮತ್ತು ನಾವು ಆಹಾರವನ್ನು ಸೇವಿಸುವಾಗ ಜಾಗರೋಕತೆ ವಹಿಸಬೇಕು. ಆಹಾರ ಪದ್ಧತಿ ಕೂಡ ಬಹಳ ಮುಖ್ಯ. ಆರೋಗ್ಯ ಸುಧಾರಣೆಗೆ ಯೋಗ ಮಾಡಿ ದೇಹವನ್ನು ಹಿಡಿತದಲ್ಲಿ ಇಟ್ಟುಕೊಂಡಲ್ಲಿ ಅನಾರೋಗ್ಯದಿಂದ ದೂರ ಇರಬಹುದು ಎಂದು ಹೇಳಿದರು.

    ಪ್ರತಿಯೊಬ್ಬ ವ್ಯಕ್ತಿಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರಲ್ಲಿ ಆರೋಗ್ಯದ ಕಾಳಜಿ ಅತೀ ಅಗತ್ಯ. ಆರೋಗ್ಯವಂತ ಮಹಿಳೆಯಿಂದ ಇಡೀ ಕುಟುಂಬ ಕ್ಷೇಮವಾಗಿರುತ್ತದೆ. ಮಹಿಳೆಯರು ಹೆಚ್ಚಾಗಿ ಇಂತಹ ಶಿಬಿರಗಳಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

    ಬೀಚನಹಳ್ಳಿ ಗ್ರಾಪಂ ಸದಸ್ಯ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಭಾಸ್ಕರ ಕಬಿನಿ ಮಾತನಾಡಿ, ಒಬ್ಬ ವ್ಯಕ್ತಿಗೆ ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಯಾವುದೂ ಇಲ್ಲ. ವಿವಿಧ ಕಾರಣಗಳಿಗಾಗಿ ಮನುಷ್ಯ ತಂಬಾಕು ಸೇರಿದಂತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾನೆ. ಮಾದಕ ವಸ್ತುಗಳ ಸೇವನೆಯು ಕೇವಲ ಜೀವನ ನಷ್ಟವಲ್ಲದೇ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉಪ ಮುಖ್ಯ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆಸ್ಪತ್ರೆ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮಾದಕ ವ್ಯಸನಗಳಿಗೆ ಒಳಗಾಗಿ ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯ. ಪೋಷಕರು ಈ ಬಗ್ಗೆ ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.

    ಸಂಸ್ಥೆ ಉಪ ನಿರ್ದೇಶಕರು ಡಾ.ಶಂಕರ್ ರವರು ಪ್ರಾಸ್ತಾವಿಕ ಭಾಷಣ ಮಾತನಾಡಿದರು. ಈ ಸಂದರ್ಭದಲ್ಲಿ ವರ್ತಕರ ಮಂಡಳಿ ಕಾರ್ಯದರ್ಶಿ ವೆಂಕಟೇಶ್, ಜೈನ್ ಮಿಲನ್ ನಿರ್ದೇಶಕ ಎಸ್ ಎಸ್ ಸೋಮಫ್ರಭ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವಿ. ಭಾಸ್ಕರ್, ರಾಜಸ್ಥಾನ್ ಸಂಘ ಅಧ್ಯಕ್ಷ ಡಕ್ಲರಾಮ್, ರೋಟರಿ ಕ್ಲಬ್ ಅಧ್ಯಕ್ಷ ಎನ್. ಧರ್ಮೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಬಿ.ನಾಗರಾಜು, ನೋಟರಿ ಕ್ಲಬ್ ಸತೀಶ್, ಆಸ್ಪತ್ರೆ ಉಪ ವ್ಯವಸ್ಥಾಪಕ ಬಿ.ಜಿ.ಸಂಧ್ಯಾ, ಸಂಸ್ಥೆಯ ಸಿಬ್ಬಂದಿಗಳು ಅಪ್ರೋಲ್ ಪಾಷಾ, ಎಂ.ಪಿ.ರಮೇಶ್, ಸುಧಾರಾಣಿ, ಮಮತಾ, ಶ್ರೀಕಾಂತ್, ಬಂಗಾರ ಶೆಟ್ಟಿ, ಗೋಪಾಲಕೃಷ್ಣ, ರೂಪೇಶ್, ವೆಂಕಟೇಶಸ್ವಾಮಿ, ಸತೀಶ್, ಡಾ.ಮನೋಹರ್, ಇನ್ನೂ ಮುಖಂಡರು ಸೇರಿದಂತೆ ಕಾರ್ಯಕರ್ತರು ಶಿಬಿರಕ್ಕೆ ಆಗಮಿಸಿದ ಮಹಿಳೆಯರು ಹಾಗೂ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.