nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    ಜಿಲ್ಲಾ ಸುದ್ದಿ January 19, 2026

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    By adminJanuary 19, 2026No Comments2 Mins Read
    sargur

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ ನಂತರ ಜೀವನಕ್ಕೆ ಆದರ್ಶ ಮಾರ್ಗ ತೋರಿಸಿದ ಶಿಕ್ಷಕರನ್ನು ಗುರುವಂದನಾ ಕಾರ್ಯಕ್ರಮದ ಮೂಲಕ ಗೌರವ ಅರ್ಪಿಸುತ್ತಿರುವುದು ಶ್ಲಾಘನೀಯವಾಗಿದ್ದು ಎಂದು   ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪಡುವಲ ವಿರಕ್ತ ಮಠದ ಮಹದೇವಸ್ವಾಮಿಗಳು ಹೇಳಿದರು.

    1988–89 ಸಾಲಿನಲ್ಲಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ಹಾಗೂ ಗುರುವಂದನ ಕಾರ್ಯಕ್ರಮ ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ದಿವ್ಯ ಸಾನಿಧ್ಯ ವಹಿಸಿ  ಉದ್ಘಾಟಿಸಿ ಮಾತನಾಡಿದರು.


    Provided by
    Provided by

    1988 ರಲ್ಲಿ 8ನೇ ತರಗತಿ ಸೆರಿ ಎಸ್ ಎಸ್ ಎಲ್ಸಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳು ತಾವು ಓದಿದ ಸಾಲಿನಲ್ಲಿ ಸೇರಿ ಅಕ್ಷರ ಕಳಿಸಿದ ಶಿಕ್ಷಕರಿಗೆ ಸನ್ಮಾನಿಸಿ ನೆನೆಪಿನ ಕಾಣಿಕೆ ನೀಡಿದರು.

    ಹಳೆ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ, ನೌಕರಿ ಪಡೆದ ಸಂಗತಿಯನ್ನು ಹಂಚಿಕೊಂಡರು. ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ಅವಿನಾಭಾವ ಸಂಬಂಧ ಇದೆ. ಗುರು ಬ್ರಹ್ಮ, ಗುರು ವಿಷ್ಣು ಮಹೇಶ್ವರ ಎಂದು ಗುರುಗಳನ್ನು ಗೌರವಿಸಲಾಗುತ್ತದೆ. ಮನೆಯಲ್ಲಿ ತಂದೆ ತಾಯಿ ನಂತರ ಗುರುಗಳ ಸ್ಥಾನ ಮಹತ್ವಪೂರ್ಣವಾಗಿದೆ. ಯಾವುದೇ ರೀತಿಯ ಶರತ್ತು ಬದ್ಧತೆ ಇಲ್ಲದೇ ಪ್ರೀತಿ ತೋರುವ ತಂದೆ ತಾಯಿ ನಂತರ ಎರಡನೇ ಸ್ಥಾನವೇ ಗುರುವಿನದು. ನಿಷ್ಕಲ್ಮಶ ನಿಸ್ವಾರ್ಥ ಭಾವನೆಯಿಂದ ವಿದ್ಯಾರ್ಥಿಗಳನ್ನು ಸರಿ ಮಾರ್ಗದತ್ತ ಗುರುವು ಕೊಂಡೊಯ್ಯುತ್ತಾನೆ. ಆ ಕಾರಣದಿಂದ ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶ ಗುರುವಿನ ಮಾರ್ಗ ಅನುಸರಿಸಿ ಸಾಧನೆ ತೋರಲು ಸಾಧ್ಯವಾಗಿದೆ ಎಂದರು.

    ಮಾಜಿ ಜಿಪಂ ಸದಸ್ಯ ಪಿ.ರವಿ ಮಾತನಾಡಿ, ಶಾಲಾ ದಿನಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಕಲಿಕೆ, ಆಟೋಟ, ತುಂಟತನ, ಚೇಷ್ಟೆ, ಗುರುಗಳ ಪ್ರೀತಿ ಮೆಲುಕು ಹಾಕಲು ಗುರುಗಳ ಪ್ರೀತಿ ಪ್ರೇರೇಪಿಸುತ್ತದೆ. ಮನುಷ್ಯನ ಬಾಲ್ಯಾವಸ್ಥೆಯಿಂದ ಹದಿಹರೆಯದ ತನಕ ಬದುಕು ಒತ್ತಡಮಯವಾಗಿರುತ್ತದೆ. 13, 14, 15, 16 ಮತ್ತು 40 ನೇ ವಯಸ್ಸಿನ ಆಸುಪಾಸಿನಲ್ಲಿದ್ದಾಗ ಜೀವನವು ಅದ್ಭುತವಾದ ಅನುಭವ ತೆರೆದಿಡುತ್ತದೆ. ಇಂತಹ ಸಂದರ್ಭದಲ್ಲಿ ಪ್ರೀತಿ, ವಿಶ್ವಾಸ, ಸುಖದ ಅನುಭೂತಿಯಾದಾಗ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಜೀವನದಲ್ಲಿ ಸ್ವಯಂ ಕಲಿಕೆ ಹಾಗೂ ಗುರುಗಳ ಮಾರ್ಗದರ್ಶನ ವ್ಯಕ್ತಿಯನ್ನು ಸಾಧನೆಯ ಉತ್ತುಂಗಕ್ಕೆ ಏರಿಸಬಲ್ಲದು ಎಂದರು.

    ಶಿಕ್ಷಕರು ನಿವೃತ್ತಿ ನಂತರ ಎಲ್ಲವೂ ಮುಗಿಯಿತು ಎಂದು ನಕಾರಾತ್ಮಕ ಯೋಚನೆ ಬಿಡಬೇಕು. ಸಾಧಿಸುವುದು ಇನ್ನಷ್ಟು ಇದೆ ಎಂಬ ಧನಾತ್ಮಕ ಭಾವನೆಯಿಂದ ಸಾಧಿಸುವ ಛಲ ತೊಡಬೇಕು.ಜೀವನದ ಪ್ರತಿಯೊಂದು ಕ್ಷಣವೂ ಮರೆಯಲಾಗದ ಅನುಭವ ನೀಡುತ್ತವೆ.ಆಯಾ ವಯೋಮಾನಕ್ಕೆ ತಕ್ಕಂತೆ ಆಯಾ ಕ್ಷಣಗಳು ನೆಮ್ಮದಿಯ ಅನುಭೂತಿಯ ಪ್ರೇರಣೆ ನೀಡುತ್ತವೆ.

    ತಾಲೂಕಿನ ಯುವ ಜನಾಂಗ ವಿಶೇಷವಾಗಿ ಗ್ರಾಮೀಣ ಭಾಗದ ಯುವ ಜನತೆಯಲ್ಲಿ ಬಹಳಷ್ಟು ಪ್ರತಿಭೆ ಇದೆ. ತಾಲೂಕಿನ ಪದವಿ ಪೂರ್ವ ಕಾಲೇಜಿನ ಪ್ರೌಢ ವಿಭಾಗದ ಹೈಸ್ಕೂಲ್‌ನಲ್ಲಿ ಕಲಿತ ವಿದ್ಯಾರ್ಥಿಗಳು ಕೂಡ ದೇಶ ವಿದೇಶಗಳಲ್ಲಿ ನೆಲೆಸಿ ಸಾಧನೆ ಮಾಡುವ ಶಕ್ತಿ ತುಂಬಿದ ಶಿಕ್ಷಕರು ಅಭಿನಂದನಾರ್ಹರಾಗಿದ್ದಾರೆ.

    ಸರ್ಕಾರಿ  ಹೈಸ್ಕೂಲ್‌ ವಿದ್ಯಾರ್ಥಿ ಹಾಗೂ ಶಿಕ್ಷಕರ ಸೌಹಾರ್ದ ಭಾವನೆಯಿಂದ ಉತ್ತಮ ವಿದ್ಯಾರ್ಥಿಗಳ ಸಮೂಹ ಸಮಾಜಕ್ಕೆ ನೀಡಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

    ಪದವಿ ಪೂರ್ವ ಕಾಲೇಜಿನ ಪ್ರೌಢ ವಿಭಾಗದ ಹೈಸ್ಕೂಲ್‌ 1988–89 ರ ಎಸ್‌ಎಸ್‌ಎಲ್‌ಸಿ ಬ್ಯಾಚ್‌ ವಿದ್ಯಾರ್ಥಿಗಳಿಂದ ಅಂದು ಕಲಿಸಿದ ನಿವೃತ್ತ ಹಾಗೂ ಹಾಲಿ ಸೇವೆಯಲ್ಲಿರುವ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿದ ಶಿಕ್ಷಕರು ಮುಂತಾದವರು ಮಾತನಾಡಿ, ನಾವು ಕಲಿಸಿದ ವಿದ್ಯಾರ್ಥಿಗಳು ಸುಖವಾಗಿ,ನೆಮ್ಮದಿಯಾಗಿ ಬದುಕುತ್ತಿದ್ದಾರೆ ಎಂಬುದೇ ನಮಗೆ ದೊಡ್ಡ ಕಾಣಿಕೆ ಎಂದರು.

    ಈ ಸಂದರ್ಭದಲ್ಲಿ ಹೆಳೆ ವಿದ್ಯಾರ್ಥಿಗಳು ಡಾ ಸೋಮಣ್ಣ,ಬಾಬು,ಡಾ ಟಿ ರವಿಕುಮಾರ್, ಎಸಿಪಿ ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪರಶಿವಮೂರ್ತಿ,ಕೃಷ್ಣಕುಮಾರ್, ಇದ್ದಾಯಿತ್, ರಮೇಶ್, ಗೋವಿಂದರಾಜು, ರೇಖಾ, ರೇಣುಕಾ, ಚಂದ್ರ ಕುಮಾರ್, ಬಿಇಓ ಮಹದೇವ, ಮಹದೇವಶಟ್ಟಿ, ಪ್ರಸನ್ನ, ಕುಮಾರ್, ಸರಗೂರು ಕೃಷ್ಣ, ಜಿಪಂ ಅಭಿಯಂತರರು ವಸಂತಕುಮಾರ್,ಮಹದೇವ, ಇನ್ನೂ ಹಳೆ ವಿದ್ಯಾರ್ಥಿಗಳು ಸೇರಿದಂತೆ ಕುಟುಂಬದಸ್ಥರು ಹಾಗೂ ಮುಖಂಡರು ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ…

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.