ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಆಚರಣಾ ಸಮಿತಿ ಭಾನುವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು.
ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು. ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಪಡುವಲು ವಿರಕ್ತಮಠದ ಮಹಾದೇವಸ್ವಾಮೀಜಿ, ಭರತೇಶ್ ಗುರೂಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸರಗೂರು ತಾಲೂಕು ಅಧ್ಯಕ್ಷ ಕೆ.ಎಂ.ವೀರಭದ್ರಪ್ಪ, ಬಸವ ಬಳಗದ ಅಧ್ಯಕ್ಷ ಹಂಚೀಪುರ ಗಣಪತಿ, ಮುಖಂಡರಾದ ಜಯಪ್ರಕಾಶ್, ಆಚರಣಾ ಸಮಿತಿ ಅಧ್ಯಕ್ಷ ನವೀನ್ಕುಮಾರ್ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು–ಎಸ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ ೨ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು.
ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು, ಹನುಮನ ಭಕ್ತರ ಕೈಯಲ್ಲಿ ಕೆಸರಿ ಬಾವುಟಗಳು ರಾರಾಜಿಸಿದವು. ಇದಲ್ಲದೆ ಭಕ್ತರು ಹನುಮನ ಧ್ಯಾನ, ಶ್ಲೋಕಗಳನ್ನು ಪಠಣ ಮಾಡಿ, ವಿವಿಧ ಘೋಷಣೆ ಕೂಗುತ್ತಾ ದಾರಿಯುದ್ದಕ್ಕೂ ಜೈಕಾರ ಹಾಕಿದರು. ವಾದ್ಯಗೋಷ್ಠಿಗಳು ಮೊಳಗಿದವು. ಹಳೆ ಹೆಗ್ಗುಡಿಲು ನೀಲಕಂಠ ತಂಡದಿಂದ ವೀರಗಾಸೆ ನೃತ್ಯ ಪ್ರದರ್ಶನವಾಯಿತು. ಅಲ್ಲಲ್ಲಿ ಮಜ್ಜಿಗೆ, ಪಾನಕ ವಿತರಿಸಲಾಯಿತು. ಇದರೊಂದಿಗೆ ಮುಸ್ಲಿಂ ಬಾಂಧವರೂ ಮಜ್ಜಿಗೆ ವಿತರಣೆ ಮಾಡಿದ್ದು, ವಿಶೇಷವಾಗಿತ್ತು.
ಮುಖಂಡರಾದ ಜಯಪ್ರಕಾಶ್ ಮಾತನಾಡಿ, ಎಲ್ಲರೂ ಒಗ್ಗೂಡಿ ಹನುಮನ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸ ತಂದಿದೆ. ಸದೃಢ, ಸಮಾನತೆ ಭಾರತವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಯುಕವಕರ ಮೇಲಿದೆ. ಹೀಗಾಗಿ ಎಲ್ಲರೂ ಶ್ರಮಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಿದರೆ ಒಳಿತು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿನಯ್, ನೂರಾಳಸ್ವಾಮಿ, ಉಮಾರಾಮಚಂದ್ರ, ಮಾಜಿ ಮೇಯರ್ ಶಿವಕುಮಾರ್, ಮೈಸೂರು ರಕ್ಷಣಾ ವೇದಿಕೆಯ ಅಧ್ಯಕ್ಷ ಮೈಕಾ ಪ್ರೇಮ್ಕುಮಾರ್, ಮುಖಂಡರಾದ ಮೊತ್ತ ಬಸವರಾಜಪ್ಪ, ಶ್ರೀನಾಥ್, ಬಿಜೆಪಿ ಟೌನ್ ಅಧ್ಯಕ್ಷ ಚನ್ನಪ್ಪ, ಸಿ.ಕೆ.ಗಿರೀಶ್, ಹಂಚೀಪುರ ಗುರುಸ್ವಾಮಿ, ಮುಖಂಡರಾದ ದಡದಹಳ್ಳಿ ಡಿ.ಜಿ.ಶಿವರಾಜು, ಭಜರಂಗಿ ರಾಮು, ಗುರುಸ್ವಾಮಿ, ರವಿಕುಮಾರ್, ಮಂಜುನಾಥ್, ಗೋಬಿರಂಗಸ್ವಾಮಿ, ಶಿವಕುಮಾರ್, ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ನಂಜಪ್ಪ, ಬಸವರಾಜು, ಆನಂದ ಮೈಲಾರಿ, ಉಮೇಶ್, ಅಭಿ, ರಮೇಶ್, ನವೀನ್, ಶ್ರೀವತ್ಸ, ಶೇಷ, ಬಂಕವಾಡಿ ಶ್ರೀಪಾಲ್ ಸ್ಯಾಂಡಿ, ಆರ್ಯಮಹೇಶ್, ಪೇಂಟ್ನಾಗರಾಜು, ಬಿಡುಗಲು ರಾಜು, ಫೈನಾನ್ಸ್ ಎಸ್.ಎ.ನಾಗೇಂದ್ರ, ಎಸ್.ಎಚ್.ರಮೇಶ್, ಜಯಂತ್, ಮುತ್ತಣ್ಣ, ಸಂತೋಷ್, ರೂಪೇಶ್, ಮಹೇಶ್, ಕನ್ನಡಪ್ರಮೋದ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಸಮಿತಿ ಸದಸ್ಯರು, ಮುಖಂಡರು ಹಾಜರಿದ್ದರು. ಶೋಭಾಯಾತ್ರೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.
ಟ್ರ್ಯಾಕ್ಟರ್ಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಶೋಭಯಾತ್ರೆ ನಡೆಸಲಾಯಿತು. ಕೇಸರಿ ಟೀ ಶರ್ಟ್, ಶಾಲು ತೊಟ್ಟು ಗುಂಪು ಗುಂಪಾಗಿ ಮೆರವಣಿಗೆಯಲ್ಲಿ ಭಕ್ತರು ಸಾಗಿದರು.
ಭಕ್ತರಿಗೆ ರಸ್ತೆಯುದ್ದಕ್ಕೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


