nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ
    ಜಿಲ್ಲಾ ಸುದ್ದಿ August 20, 2025

    ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ

    By adminAugust 20, 2025No Comments2 Mins Read
    bus

    ಸರಗೂರು:  ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ಜೊರಹಳ್ಳ ಗ್ರಾಮಕ್ಕೆ ಬಸ್ ವ್ಯವಸ್ಥೆ ಇರಲಿಲ್ಲ. ಗ್ರಾಮಸ್ಥರು ಶಾಸಕರಿಗೆ ಹಾಗೂ ಕೆಎಸ್ಸಾರ್ಟಿಸಿ ಇಲಾಖೆ ಅಧಿಕಾರಿಗಳಿಗೆ ಮನವಿಕ್ಕೆ ಸ್ಪಂದಿಸಿ. ಮಂಗಳವಾರದಂದು ಬಸ್ ವ್ಯವಸ್ಥೆ ಪ್ರಾರಂಭಿಸಲಾಯಿತು.

    ಬಸ್‌ ಗೆ ಪೂಜೆ ಸಲ್ಲಿಸಿದ ನಂತರ ಚಾಲಕ ನಿರ್ವಾಹಕರಿಗೆ ಸನ್ಮಾನಿಸಿ ನಂತರ  ಪ್ರಭಾವಿ ಮುಖಂಡ ದೇವಲಾಪುರ ನಾಗೇಂದ್ರ ಮಾತನಾಡಿ,  ಸರಗೂರು ಪಟ್ಟಣದಿಂದ ಸಾಗರೆ ಚನ್ನೀಪುರ, ಹೆಗ್ಗನೂರು ಮಾರ್ಗವಾಗಿ ಜೊರಹಳ್ಳ ಗ್ರಾಮಕ್ಕೆ ನೇರವಾಗಿ ಬಸ್‌ ಸಂಪರ್ಕ ಕಲ್ಪಿಸುವ ಕುರಿತು ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ಸ್ಪಂದಿಸಿದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಈ ಗ್ರಾಮಕ್ಕೆ  ಬಸ್‌ ಕಲ್ಪಿಸಿ ಮೂಲಕ ಕ್ರಮ ಕೈಗೊಂಡಿದ್ದಾರೆ ಎಂದರು.

    ನಾವು ಶಾಸಕ ಅನಿಲ್ ಚಿಕ್ಕಮಾದುರವರಿಗೆ ಬಸ್ ಸಮಸ್ಯೆ ಇರುವುದರಿಂದ ಅವರಿಗೆ ಮನವರಿಕೆ ಮಾಡಿಕೊಂಡು ನಂತರ ಸ್ಥಳದಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

    ಬಸ್ ಇಲ್ಲದಿದ್ದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ ಜೊರಹಳ್ಳದಿಂದ ನಾಲ್ಕೈದು ಕಿ.ಮೀ. ದೂರದಲ್ಲಿರುವ ಜೊರಹಳ್ಳ ಗೇಟ್ ಬಳಿ ಬಿ ಮಟಕರೆ ಹಾಗೂ ಹಂಚೀಪುರ ಮಾರ್ಗವಾಗಿ ಬರುವ ಬಸ್ ಯನ್ನು ಹಿಡಿದುಕೊಂಡು ಪಟ್ಟಣಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಪಟ್ಟಣಕ್ಕೆ ತೆರಳಬೇಕಾದರೆ ಸಮಸ್ಯೆ ಆಗ್ತಿತ್ತು.‌ ವಿದ್ಯಾರ್ಥಿಗಳು ನಡೆದುಕೊಂಡೇ ಶಾಲೆ ಸೇರಬೇಕಿತ್ತು.  ಇಂದಿನಿಂದ ಸರಗೂರು ಪಟ್ಟಣಯಿಂದ ಚನ್ನೀಪುರ ಗ್ರಾಮದಿಂದ ಹೆಗ್ಗನೂರು ಮಾರ್ಗವಾಗಿ ಜೊರಹಳ್ಳಕ್ಕೆ ಬಸ್ ಸಂಚಾರ ಆರಂಭವಾಗಿದೆ. ನಿತ್ಯ ಮೂರು ಹೊತ್ತು ಜೊರಹಳ್ಳ ಗ್ರಾಮಕ್ಕೆ ಬಸ್ ಬರಲಿದೆ.

    ಗ್ರಾಮಕ್ಕೆ ಬಸ್ ಬಂದಿದ್ದಕ್ಕೆ ಗ್ರಾಮಸ್ಥರಿಂದ ಹರ್ಷ:

    79  ವರ್ಷಗಳ ಬಳಿಕ ಗ್ರಾಮಕ್ಕೆ ಬಸ್ ಬಂದಿದ್ದಕ್ಕೆ ಗ್ರಾಮಸ್ಥರಲ್ಲಿ ಹರ್ಷ ಮನೆ ಮಾಡಿದೆ.‌ ಗ್ರಾಮಸ್ಥರು ತಳಿರುತೋರಣ ಕಟ್ಟಿ ಪೂಜೆ ಮಾಡಿ, ಬಸ್ನ್ನು ಬರಮಾಡಿಕೊಂಡರು. ಗ್ರಾಮಸ್ಥರನ್ನು ಹತ್ತಿಸಿಕೊಂಡು  ಇಡೀ ಗ್ರಾಮಸ್ಥರು ಬಸ್ಸಿನಲ್ಲಿ ಪ್ರಯಾಣ ಮಾಡಿ ಹರ್ಷ ವ್ಯಕ್ತಪಡಿಸಿದರು.

    ಈ ಕುರಿತು ಗ್ರಾಮಸ್ಥ ಪ್ರಸಾದ್ ಪ್ರತಿಕ್ರಿಯಿಸಿ, ‘ಬಸ್ ಇಂದಿನಿಂದ ಆರಂಭವಾಗಿದೆ. 79  ವರ್ಷಗಳಿಂದ ಸಮಸ್ಯೆ ಇತ್ತು.‌ ಎಲ್ರೂ ನಡೆದುಕೊಂಡೇ ತೆರಳಬೇಕಿತ್ತು. ವಿದ್ಯಾರ್ಥಿಗಳು ಪಾಠಿಚೀಲ ಹಾಕಿ ಐದಾರು ಕಿ.ಮೀ ದೂರ ನಡೆಯಬೇಕಿತ್ತು. ಬಸ್ ಸಮಸ್ಯೆ ಇದ್ದ ಕಾರಣ ವಿದ್ಯಾರ್ಥಿಗಳು ಮನೆ ಬಿಟ್ಟಿದ್ದರು. ಇನ್ಮೇಲೆ ಶಾಲೆಗೆ ಮಕ್ಕಳು ತೆರಳಲಿದ್ದಾರೆ. ಶಾಸಕರು ಹಾಗೂ ಸಾರಿಗೆ ಅಧಿಕಾರಿಗಳ ಅವರ ಸಹಕಾರ ಹೆಚ್ಚಿದೆ’ ಎಂದರು.

    ಶಾಸಕರು ಕರೆ ಮೂಲಕ ಮಾತನಾಡಿ, ‘ಜೊರಹಳ್ಳ ಗ್ರಾಮಕ್ಕೆ ಬಸ್ ಸಮಸ್ಯೆ ಸೇರಿದಂತೆ ಸೌಲಭ್ಯಗಳ ಕೊರತೆ ಇದೆ.  ಈ ಸುದ್ದಿಯನ್ನು ಗ್ರಾಮಸ್ಥರು ಗಮನಕ್ಕೆ ಬಂದಾದ ತಕ್ಷಣ ಕೆಎಸ್ ಆರ್ ಟಿಸಿ ಡಿಸಿ ಬಳಿ ಮಾತನಾಡಿ, ಬಸ್ ಗೆ ಚಾಲನೆ ನೀಡಿದ್ದೇನೆ. ಗ್ರಾಮಸ್ಥರು ಆ ಊರಿನಲ್ಲಿ ಬಸ್ಸೇ ನೋಡಿದ್ದಿಲ್ಲ. ಸಾಗರೆ ಚನ್ನೀಪುರ ಹೆಗ್ಗನೂರು ಮಾರ್ಗದಲ್ಲಿ ಈ ಬಸ್ ಸಂಚರಿಸಲಿದೆ. ಟ್ರಿಪ್ ಗಳು ಹೆಚ್ಚಾಗಿ ಬೇಕಾಗಿದ್ದಲ್ಲಿ ಅದನ್ನು ಹೆಚ್ಚಳ‌ ಮಾಡಿಸುತ್ತೇವೆ. ಗ್ರಾಮಕ್ಕೆ‌ ಬಸ್ ಬಂದಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಶಾಲೆಯ ಮಕ್ಕಳು ಮೂರ್ನಾಲ್ಕು ಕಿ.ಮೀ. ನಡೆಯಬೇಕಿತ್ತು, ಬಸ್ ಬಿಟ್ಟಿದ್ದು, ಸಮಸ್ಯೆ ಸರಿಪಡಿಸಿದ್ದೇವೆ’ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚೆಲುವರಾಜು ಮಾತನಾಡಿದರು.

    ಈ ಸಂದರ್ಭದಲ್ಲಿ ಯಜಮಾನರು ರಂಗಯ್ಯ, ಚಿಕ್ಕಣ್ಣ, ಗ್ರಾಮದ ಮುಖಂಡರು ವಿಷಕಂಠ, ಶ್ರೀನಿವಾಸ, ನಾಗಯ್ಯ, ಸೋಮಣ್ಣ ನಾಗೇಂದ್ರ,ರಾಮು, ಸಿದ್ದಯ್ಯ, ಚಿನ್ನಯ್ಯ, ಸೋಮಯ್ಯ, ಕೃಷ್ಣೇಗೌಡ, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.