nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ
    ಜಿಲ್ಲಾ ಸುದ್ದಿ October 19, 2025

    ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ

    By adminOctober 19, 2025No Comments3 Mins Read
    tiger capture in sargur

    ವರದಿ: ಹಾದನೂರು ಚಂದ್ರ

    ಸರಗೂರು: ತಾಲೂಕಿನ ಬಡಗಲುಪುರ ಗ್ರಾಮದ ರೈತನ ಮೇಲೆ ದಾಳಿ ನಡೆಸಿ ಕಾಡಿನತ್ತ ಓಡಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

    ಕಳೆದ ಒಂದು ವಾರದಿಂದ ಬಡಗಲುಪುರ, ಹಾದನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಜನರ ಆತಂಕ್ಕೆ ಕಾರಣವಾಗಿ ಉಪಟಳ ನೀಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಶುಕ್ರವಾರ ಕಾಡಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಆನೆಗಳನ್ನು ಕಂಡು ಗಾಬರಿಯಿಂದ ಕಾಡಿನತ್ತ ಓಡುತ್ತಿದ್ದ ಹುಲಿ, ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಹದೇವಗೌಡ ಎಂಬವರ ಮೇಲೆ ದಾಳಿ ಮಾಡಿ ಆತನ ಮುಖ ಭಾಗಕ್ಕೆ ಗಂಭೀರ ಗಾಯ ಮಾಡಿತ್ತು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಜನರು ಹುಲಿಯನ್ನು ಸೆರೆ ಹಿಡಿಯಲೇಬೇಕು ಎಂದು ಪಟ್ಟುಹಿಡಿದಿದ್ದರು.

    ನಂತರ ಶನಿವಾರ ಬೆಳಗ್ಗೆ ಮಹೇಂದ್ರ, ಅಭಿಮನ್ಯು, ಭೀಮ, ಭಗೀರಥ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆಯು ಯಾಡಿಯಾಲ ಸಮೀಪದ ಜಮೀನುವೊಂದರಲ್ಲಿ ಹುಲಿ ಇರುವ ಬಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಕ್ಯಾಮೆರಾ ಟ್ರಾಪ್ ಗಳ ಮೂಲಕ ಖಚಿತ ಮಾಹಿತಿ ಪಡೆದು ಎರಡು ಡ್ರೋನ್ ಗಳ ನೆರವಿನಿಂದ ಹುಲಿ ಇರುವ ಸ್ಥಳ ಪತ್ತೆಹಚ್ಚಿ, ಬಳಿಕ ಪಶುವೈದ್ಯ ಡಾ.ವಸೀಂ ಮಿರ್ಜಾ, ಡಾ.ರಮೇಶ್, ಶಾರ್ಪ್ ಶೂಟರ್ ರಂಜನ್ ಸಾಕಾನೆಗಳ ಮೇಲೆ ಹೋಗಿ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.

    ಕಳೆದ ಕೆಲ ದಿನಗಳಿಂದಲೂ ಹುಲಿ ಸೆರೆಗಾಗಿ ಅರಣ್ಯ ಇಲಾಖೆಯು ವಿವಿಧ ತಂಡಗಳನ್ನು ರಚಿಸಿಕೊಂಡು ಮೂರು ಕಡೆಗಳಲ್ಲಿ ಬೋನಿ ಇರಿಸಿ ಬಲೆ ಬೀಸಿತ್ತು. ಇಷ್ಟಿದ್ದರೂ ಸೆರೆಯಾಗದ ಹುಲಿ ಪತ್ತೆಗಾಗಿ ಕಾರ್ಯಾಚರಣೆ ಚುರುಕುಗೊಳಿಸಿದ ಅರಣ್ಯ ಇಲಾಖೆ, ಕ್ಯಾಮೆರಾ ಟ್ರಾಪ್ ಅಳವಡಿಸಿತ್ತು. ಶನಿವಾರ ಮಧ್ಯಾಹ್ನದ ವೇಳೆಗೆ ಹುಲಿ ಇರುವ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

    ಸದ್ಯ ಇದು 3 ವರ್ಷ ಪ್ರಾಯದ ಹೆಣ್ಣು ಹುಲಿಯಾಗಿದ್ದು, ಗಾಯಗೊಂಡಿದೆ ಎನ್ನಲಾಗಿದೆ. ಸದ್ಯ ಈ ಹುಲಿ ಸೆರೆಗೆ ಬಂಡೀಪುರ ವ್ಯಾಪ್ತಿಯ ಬಡಗಲುಪುರ ಗ್ರಾಮದ ಅಕ್ಕಪಕ್ಕದ ವಲಯಗಳ ಸಿಬ್ಬಂದಿಗಳೂ ಸೇರಿ ಸುಮಾರು 65–70 ಮಂದಿ ಸಿಬ್ಬಂದಿ, ಡ್ರೋನ್ ಕ್ಯಾಮೆರಾ ತಂಡ ಹಾಗೂ ಪಶುವೈದ್ಯರು ಜತೆಗೆ ಸ್ಥಳೀಯ ಜನರ ಸಹಕಾರದಿಂದ ಸೆರೆ ಹಿಡಿಯಲಾಗಿದ್ದು, ಹುಲಿಯ ಆರೈಕೆಗಾಗಿ ಬನ್ನೇರುಘಟ್ಟ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ಸಿಬ್ಬಂದಿಗಳ ತಂಡವನ್ನು ರಚಿಸಿ ನಿರಂತರವಾಗಿ ಕೂಂಬಿಂಗ್ ಕಾರ್ಯ ನಡೆಸಿದ್ದು 3 ಕಡೆ ಬೋನುಗಳನ್ನು ಇರಿಸಲಾಗಿರುತ್ತದೆ. ಇದರ ಫಲವಾಗಿ ಶನಿವಾರ ರಂದು ಬೆಳಿಗೆ, 08 ಗಂಟೆಯಲ್ಲಿ ಬಡಗಲಪುರ ರೈತರ ಜಮೀನಲ್ಲಿ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಹುಲಿಯು ಸೆರೆಯಾಗಿದ್ದು, ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ ರವರ ಮಾರ್ಗದರ್ಶನದಲ್ಲಿ ಇಲಾಖಾ ಪಶುವೈದ್ಯಾಧಿಕಾರಿ ವಸಿಂ ಮಿರ್ಜಾ ರವರ ನೇತೃತ್ವದಲ್ಲಿ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಹುಲಿಯನ್ನು ಸುರಕ್ಷಿತವಾಗಿ ಹಿಡಿಯಲಾಗಿದ್ದು, ಹುಲಿಯು ಹೆಣ್ಣಾಗಿದ್ದು, ಅಂದಾಜು 3 ವಯಸ್ಸು ಆಗಿರಬಹುದೆಂದು ಅಂದಾಜಿಸಲಾಗಿರುತ್ತೆ ಎಂದು ನುಗು ಅರಣ್ಯ ಇಲಾಖೆ ಅಧಿಕಾರಿ ವಿವೇಕ್ ತಿಳಿಸಿದರು.

    ಇದೇ ವೇಳೆ ಮಾತನಾಡಿದ ಬಡಗಲುಪುರ ಗ್ರಾಪಂ ಸದಸ್ಯ ಗಂಗಾಧರ್, ಕಳೆದ ಎರಡು ತಿಂಗಳಿನಿಂದ ಹುಲಿ ಉಪಟಳ ನೀಡುತ್ತಿತ್ತು. ಆಗಾಗ್ಗೆ ಜಾನುವಾರುಗಳನ್ನು ಕೊಂದು ನಾವು ಜಮೀನುಗಳಿಗೆ ಹೋಗಲಾರದಂತಹ ಸ್ಥಿತಿ ನಿರ್ಮಾಣವಾಗುವಂತೆ ಮಾಡಿತ್ತು. ಸದ್ಯ ಅರಣ್ಯ ಇಲಾಖೆ ತುಂಬ ಉತ್ಸುಕತೆಯಿಂದ ಹುಲಿ ಸೆರೆ ಹಿಡಿದಿದ್ದು, ಗ್ರಾಮಸ್ಥರಿಗೆ ಸಮಾಧಾನ ತರಿಸಿದೆ. ಇನ್ನು ಹುಲಿ ದಾಳಿಯಿಂದ ಗಾಯಗೊಳಗಾಗಿರುವ ರೈತ ಮಹದೇವಗೌಡ ಅವರಿಗೂ ಇಲಾಖೆ ಸೂಕ್ತ ಪರಿಹಾರ ನೀಡುವ ಮೂಲಕ ಅವರ ಜೀವನಕ್ಕೆ ಆಧಾರ ಕಲ್ಪಿಸಬೇಕು ಎಂದರು.

    ಇದೇ ವೇಳೆ ಬಂಡೀಪುರ ಸಿಎಫ್ ಪ್ರಭಾಕರನ್, ಎಸಿಎಫ್ ಕೆ.ವಿ.ಸತೀಶ್, ಆರ್ ಎಫ್ ಒಗಳಾದ ವೈರಮುಡಿ, ರಾಜೇಶ್, ಅಮೃತೇಷ್, ರಾಮಾಂಜನೇಯ, ಅಮೃತಾ, ಮುನಿರಾಜು, ವಿವೇಕ್, ಶಾರ್ಪ್ ಶೂಟರ್ ರಂಜನ್, ಬಿ.ಎಸ್. ಗಂಗಾಧರ್, ಬಿ.ಆರ್.ನಟರಾಜು, ಬಿ.ಕೆ.ಶಿವರಾಜು, ಅಂಗಡಿ ಶಿವರಾಜು, ಲಿಂಗರಾಜು, ಪಿ.ರಾಜೀವ್, ರಾಮಚಂದ್ರ, ಕೂಸೇಗೌಡ, ರಮೇಶ್, ರಾಮಚಂದ್ರ ಹಾಜರಿದ್ದರು.

    ಹುಲಿ ಸೆರೆಗೆ ಎರಡು ಬಾರಿ ಕಾರ್ಯಾಚರಣೆ ಮಾಡಿ ವಿಫಲವಾಗಿತ್ತು. ಈಗ ಎಲ್ಲರ ಸಹಕಾರದಿಂದ ಹುಲಿ ಸೆರೆಯಾಗಿದೆ. ಗ್ರಾಮಸ್ಥರೂ ಎಚ್ಚರಿಕೆಯಿಂದಿರಬೇಕು. ಒಬ್ಬೊಬ್ಬರೆ ಜಮೀನುಗಳಿಗೆ ಹೋಗಬಾರದು. ಜನರು ಆತಂಕ ಪಡುವುದು ಬೇಡ. ನಾವೂ ತರ್ತಾಗಿ ಕೆಲಸ ಮಾಡುತ್ತೇವೆ. ತಕ್ಷಣಕ್ಕೆ ಆನೆಗಳನ್ನೂ ಕರೆಸುವ ಪ್ರಯತ್ನ ಮಾಡುತ್ತೇವೆ. ಹುಲಿ ಸೆರೆ ಹಿಡಿಯಬೇಕಾದ ಅನಿವಾರ್ಯತೆ ಬಂದಾಗ ತಕ್ಷಣ ಕ್ರಮಕೈಗೊಳ್ಳುತ್ತೇವೆ.

    — ಪ್ರಭಾಕರನ್, ಸಿಎಫ್, ಬಂಡೀಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.