nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ October 7, 2025

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    By adminOctober 7, 2025No Comments2 Mins Read
    sargur

    ಸರಗೂರು‌: ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಈ ದಿನ ಜನಿಸಿದರು ಎಂಬುದಕ್ಕಾಗಿ ಈ ದಿನಕ್ಕೆ ವಾಲ್ಮೀಕಿ ಜಯಂತಿ ಎನ್ನುವ ಹೆಸರು ಬಂದಿದೆ ಎಂದು ಪಪಂ ಸದಸ್ಯ ಶ್ರೀನಿವಾಸ ತಿಳಿಸಿದರು.

    ಪಟ್ಟಣದ 9 ನೇ ವಾರ್ಡಿನ ಚಿಕ್ಕ ದೇವಮ್ಮ ಸರ್ಕಲ್ ಬಳಿ ನಾಯಕ ಸಮಾಜದ ಹಾಗೂ ಯುವಕರು ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by
    Provided by

    ಮಹರ್ಷಿ ವಾಲ್ಮೀಕಿಯವರ ಜನ್ಮದಿನವನ್ನು ಶರದ್ ಪೂರ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಆದಾಗ್ಯೂ, ಶರದ್ ಪೂರ್ಣಿಮೆಯ ದಿನದಂದು ಲಕ್ಷ್ಮಿ ಮತ್ತು ಚಂದ್ರನನ್ನು ಪೂಜಿಸಲಾಗುತ್ತದೆ.

    ವಾಲ್ಮೀಕಿ ಜಯಂತಿ ಪ್ರಖ್ಯಾತ ಋಷಿ ಮತ್ತು ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಅವರ ಜನ್ಮದಿನಕ್ಕೆ ಮೀಸಲಾದ ದಿನವಾಗಿದೆ. ಅವರು ಭಗವಾನ್ ಶ್ರೀರಾಮನ ಪರಮ ಭಕ್ತರಾಗಿದ್ದರು ಎನ್ನುವ ನಂಬಿಕೆಯಿದೆ ಎಂದರು.

    ಈ ದಿನದ ಮೂಲಕ, ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಅವರು ನೀಡಿದ ಜ್ಞಾನ ಮತ್ತು ಶಿಕ್ಷಣಕ್ಕಾಗಿ ಕೃತಜ್ಞತೆಯನ್ನು ಸಲ್ಲಿಸುತ್ತಾರೆ. ರಾಮಾಯಣದ ಮೂಲಕ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಬಗ್ಗೆ ತಿಳಿಸಿದ ಮಹಾನ್ ಸಂತರೇ ವಾಲ್ಮೀಕಿ ಮಹರ್ಷಿಗಳು.

    ಈ ಸಂದರ್ಭದಲ್ಲಿ ಶ್ರೀನಿವಾಸ್, ನವೀನ್ ಕುಮಾರ್, ವೆಂಕಟೇಶ್, ಬೆಟ್ಟನಾಯಕ, ಚನ್ನಪ್ಪನಾಯಕ, ಶಿವಣ್ಣ, ಏಕದಂತ ಗ್ರೂಪ್ಸ್ ಹಾಗೂ ವಿನಾಯಕ ಗ್ರೂಪ್ಸ್ ನ ಸದಸ್ಯರು ಹಾಗೂ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ

    ಸರಗೂರು:  ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಂಡಿದ್ದು ವಾಲ್ಮೀಕಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಸರಳವಾಗಿ ಆಚರಣೆ ಮಾಡಲಾಯಿತು.

    ಪಪಂ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ಶ್ರೀನಿವಾಸ, ಚೆಲುವ ಕೃಷ್ಣ, ನೂರಳಾಸ್ವಾಮಿ, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಮುಖಂಡರು ನವೀನ್, ಶ್ರೀನಾಥ್, ಸ್ವಾಮಿ, ಸಿಬ್ಬಂದಿ ವರ್ಗದವರು ಪಳಿನಿಸ್ವಾಮಿ, ರಾಮು, ಶಿವಪ್ರಸಾದ್, ಅರುಣ್ ಆರಾಧ್ಯ, ಅರ್ಜುನ್, ನಾಗೇಶ್, ಶಶಿ, ಹಾಗೂ ಪೌರಕಾರ್ಮಿಕರು ಇನ್ನೂ ಇತರರು ಇದ್ದರು.

    ಜೆಎಸ್ ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ವಾಲ್ಮೀಕಿ ಜಯಂತಿ:

    ಸರಗೂರು:  ಪಟ್ಟಣದ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಸರಗೂರು ವತಿಯಿಂದ ಮಂಗಳವಾರ ದಂದು ಆದಿಕವಿ ಮಹರ್ಷಿ ವಾಲ್ಮೀಕಿ ರವರ ಜಯಂತಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

    ನಂತರ ಮಾತನಾಡಿದ ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಕೆ .ಎಸ್., ರಾಮಾಯಣವನ್ನು ರಚಿಸಿದ ಕಾರಣ ವಾಲ್ಮೀಕಿಯನ್ನು “ಆದಿ ಕವಿ” (ಮೊದಲ ಕವಿ) ಎಂದು ಗೌರವಿಸಲಾಗುತ್ತದೆ. ಅವರು ಸಂಸ್ಕೃತದ ಒಬ್ಬ ಋಷಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ ಎಂದರು.

    ವಾಲ್ಮೀಕಿ ಮುನಿಯು ತಮಸಾ ನದಿಯ ದಡದಲ್ಲಿದ್ದಾಗ ಅಲ್ಲಿಗೆ ನಾರದರು ಬರುತ್ತಾರೆ. ಆಗ ಅವರು ರಾಮನ ಕಥೆಯನ್ನು ವಾಲ್ಮೀಕಿ ಮಹರ್ಷಿಗಳಿಗೆ ವಿವರಿಸುತ್ತಾರೆ. ಅದನ್ನು ವಾಲ್ಮೀಕಿ ಶ್ಲೋಕರೂಪದಲ್ಲಿ ಪ್ರಸ್ತುತ ಪಡಿಸುತ್ತಾರೆ ಎಂಬ ಮಾತು ಇದೆ. ಇದರೊಂದಿಗೆ ತಮಸಾ ನದಿಯ ದಡದಲ್ಲಿ ಸಂತೋಷದಿಂದ ಹಾರಾಡುತ್ತಿದ್ದ ಜೋಡಿ ಕ್ರೌಂಚ ಪಕ್ಷಿಗಳಿಗೆ ಬೇಡನೊಬ್ಬ ಬಾಣ ಹೂಡುತ್ತಾನೆ. ಆಗ ಗಂಡು ಪಕ್ಷಿ ಪ್ರಾಣ ಕಳೆದುಕೊಳ್ಳುತ್ತದೆ. ಹೆಣ್ಣು ಕ್ರೌಂಚ ಪಕ್ಷಿಯ ನೋವು ಕಂಡ ವಾಲ್ಮೀಕಿ ಮಹರ್ಷಿ ಬೇಡನಿಗೆ ಶೋಕದಿಂದ ಶಾಪ ಕೊಡಲು ಮುಂದಾಗುತ್ತಾರೆ, ಶಾಪವನ್ನು ಶ್ಲೋಕ ರೂಪದಲ್ಲಿ ಉದ್ಗರಿಸುತ್ತಾರೆ. ಇದು ರಾಮಾಯಣ ರಚಿಸಲು ಮೂಲವಾಯಿತು ಎಂಬ ಮಾತು ಇದೆ ಎಂದರು.

    ಈ ಸಂದರ್ಭದಲ್ಲಿ  ಪ್ರೌಢಶಾಲಾ ಮುಖ್ಯ ಶಿಕ್ಷಕ ನಾಗರತ್ನ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಯಣ್ಣ, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.