nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    ಜಿಲ್ಲಾ ಸುದ್ದಿ November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    By adminNovember 13, 2025No Comments3 Mins Read
    sargur

    ಸರಗೂರು: ತಾಲೂಕಿನ ಕೋಡಂಬಹಳ್ಳಿ ಗ್ರಾಮದ ರೈತರ ಬಾಳೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಲಕ್ಷಾಂತರ ರೂ. ಮೌಲ್ಯದ ಬೆಳೆಯನ್ನು ನಾಶ ಮಾಡಿವೆ.

    ತಾಲೂಕಿನ ಹೂವಿನಕೊಳ ಗ್ರಾಮದ ಜವರಯ್ಯ ಎಂಬುವರ ಜಮೀನಿನಲ್ಲಿ 3 ಎಕರೆ ಜಮೀನು  ಬಾಳೆ ಬೆಳೆದು ಆನೆ ಹಾವಳಿ ಹೆಚ್ಚಾಗಿದ್ದು ಸಂಪೂರ್ಣ ನಾಶ ಮಾಡಿರುವ ಘಟನೆ ಸೋಮವಾರ  ರಾತ್ರಿ ನಡೆದಿದೆ. ಕಾಡಾನೆ ಹಿಂಡು ಬಾಳೆ ತೋಟ ನಾಶಪಡಿಸಿವೆ ಎಂದು ರೈತ ಜವರಯ್ಯ ಅಳಲು ತೋಡಿಕೊಂಡರು


    Provided by
    Provided by

    ಇನ್ನು 15 ದಿನದಲ್ಲಿ ಕಟಾವಿಗೆ ಬಂದಿದ್ದ 500 ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಮಾಡಿವೆ. ಸುಮಾರು ₹5 ಲಕ್ಷದಷ್ಟು ನಷ್ಟವಾಗಿದೆ ಎಂದು ತೋಟದ ಮಾಲಿಕ ಜವರಯ್ಯ ತಿಳಿಸಿದ್ದಾರೆ.

    ಗ್ರಾಮದಲ್ಲಿ ಐದಾರು ಆನೆಗಳ ಹಿಂಡಿದ್ದು ಎರಡು ಆನೆ ಮಾತ್ರ ತೋಟಕ್ಕೆ ನುಗ್ಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

    ವರ್ಷ ಪೂರ್ತಿ ಹಗಲು ರಾತ್ರಿ ದುಡಿದು ಬೆಳೆದ ಬೆಳೆ ರೈತನ ಕೈಗೆ ಬಂದ ತುತ್ತು ಕೈಗೆ ಬಾರದಂತಾಗಿದೆ. ಅರಣ್ಯದಂಚಿನ ಗ್ರಾಮದ ರೈತರ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆಗಳ ಮೇಲೆ ದಾಳಿಯಿಟ್ಟು ಬೆಳೆಗಳನ್ನು ನಾಶ ಮಾಡುತ್ತಲೆ ಇವೆ. ಇದರಿಂದ ಈ ಪ್ರದೇಶದಲ್ಲಿನ ರೈತರು ಆರ್ಥಿಕ ನಷ್ಟದ ಜತೆಗೆ ನಿತ್ಯ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜೀವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ‌.

    ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟದ ವ್ಯಾಪ್ತಿಯ ಲಂಕೆ, ಹೂವಿನಕೊಳ, ಹುಣಸಹಳ್ಳಿ, ಕುಂದೂರು, ಮನುಗನಹಳ್ಳಿ, ಪುರದಕಟ್ಟೆ ಗ್ರಾಮದಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ರೈತರ ಬೆಳೆಗಳ ಮೇಲೆ ಆನೆಗಳು ದಾಳಿ ನಡೆಸುತ್ತಲೇ ಇವೆ. ತಡರಾತ್ರಿ ಗಜಪಡೆಗಳು ಗ್ರಾಮದ ಜವರಯ್ಯ ಎಂಬುವರ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯನ್ನು ನಾಶಪಡಿಸಿದ್ದು, ಅಲ್ಲದೇ ಉಳಿದ ರೈತರ ಜಮೀನಿನಲ್ಲಿದ್ದ ಹಲಸು, ಜೋಳ, ತೆಂಗು,ಮಾವಿನ ಗಿಡಗಳನ್ನು ಕೂಡ ನೆಲಸಮ ಮಾಡಿವೆ.

    ಆಗ್ರಹ:

    ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳು ಅರಣ್ಯದಂಚಿನ ಗ್ರಾಮವಾದ್ದರಿಂದ ಆನೆಗಳು ನಿತ್ಯ ರೈತರ ಜಮೀನು ಮತ್ತು ತೋಟಗಳ ಮೇಲೆ ದಾಳಿ ಮಾಡುತ್ತಿವೆ. ರೈತರು ಮಳೆ ಇಲ್ಲದ ಕಾಲದಲ್ಲಿ ಬ್ಯಾಂಕ್‌ಗಳಲ್ಲಿ ಸಾಲ ಸೋಲ ಮಾಡಿ ಬೇಸಾಯಮಾಡಿ ಬೆಳೆದು ಬೆಳೆ ಕೈಗೆಬರುವಾಗ ದಾಳಿ ಮಾಡಿ ತಿಂದು ಹಾಕುತ್ತಿವೆ. ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದ್ದು, ಅವುಗಳ ದಾಳಿ ತಡೆಗಟ್ಟದಿದ್ದಲ್ಲಿ ರೈತರು ವಿಷ ಕುಡಿಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಅಲ್ಲದೆ, ಆನೆಗಳ ದಾಳಿಯಿಂದ ನಾಶವಾಗಿರುವ ಬೆಳೆಗಳಿಗೆ ಈಗಿನ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹ ಪಡಿಸಿದ್ದಾರೆ.

    ಗ್ರಾಮಸ್ಥರು ಕಿಡಿ:

    ಆನೆಗಳು ರೈತರ ಜಮೀನು, ತೋಟ ಮತ್ತು ಗ್ರಾಮದಂಚಿಗೆ ಬಾರದಂತೆ ಸೋಲಾರ್‌ ಫೆನ್ಸಿಂಗ್‌ ಹಾಕಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ. ಹಲವಾರು ಬಾರಿ ಕಾಡುಪ್ರಾಣಿಗಳ ದಾಳಿ ನಡೆಯುತ್ತಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಯಾವುದೇ ಕ್ರಮಕೈಗೊಂಡಿಲ್ಲ. ಅರಣ್ಯ ಇಲಾಖೆ ಆನೆಗಳನ್ನ ಓಡಿಸಲು ಪಟಾಕಿ ಸಿಡಿಸಿ ಪ್ರಯತ್ನ ಪಡುತ್ತಿದ್ದಾರೆ, ಹೊರತು ಅವುಗಳನ್ನು ಕಾಡಿಗಟ್ಟಲು ಪ್ರಯತ್ನ ಪಡುತ್ತಿಲ್ಲ ಆನೆಗಳು ಮಾತ್ರ ಅಲ್ಲಿಂದಿಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡುತ್ತಲೇ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಲೇ ಇವೆ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದರು.

    ರೈತ ಜವರಯ್ಯ ಮಾತನಾಡಿ, ಇಂದು ಏಲಕ್ಕಿ ಬಾಳೆ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಬಂದಿದೆ. ಪ್ರತಿ ಕೆಜಿಗೆ 80–100ರೂ ಬೆಲೆ ಇದೆ. ಇಂತಹ ಸಂದರ್ಭದಲ್ಲಿ ಸಾಲ ಮಾಡಿ ಮಳೆ ಇಲ್ಲದ್ದಿದಾಗ ಕಷ್ಟಪಟ್ಟು 4 ಲಕ್ಷ ಕ್ಕೂ ಹೆಚ್ಚು ಹಣ ಖರ್ಚು ಮಾಡಿ ಬಾಳೆ ಬೆಳೆದಿದ್ದೆ ಬೆಳೆ ಕಟಾವಿಗೆ ಬಂದಿತ್ತು. ಇಂತಹ ಸಮಯದಲ್ಲಿ ಆನೆಗಳು ದಾಂಗುಡಿ ಇಟ್ಟು ಬೆಳೆ ಹಾಳು ಮಾಡಿವೆ ಇದರಿಂದ ನಮ್ಮ ಬದುಕು ಮೂರಾಬಟ್ಟೆಯಾಗಿದ್ದು, ನಮಗೆ ದಾರಿ ಕಾಣದಾಗಿದೆ ಜತೆಗೆ ಆರ್ಥಿಕವಾಗಿ ನಷ್ಟವಾಗಿದ್ದು, ಮಾಡಿದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಸರಕಾರ ಕೊಡುವ ಪರಿಹಾರ ಯಾವುದಕ್ಕೂ ಸಾಲದು ಇದರಿಂದ ರೈತ ಆತ್ಮಹತ್ಯೆಹಾದಿ ಹಿಡಿಯಬೇಕಾಗಿದೆ. ಈ ಬಗ್ಗೆ ಸರಕಾರವಾಗಲಿ, ಯಾವುದೇ ಇಲಾಖೆಯ ಅಧಿಕಾರಿಗಳಾಗಲಿ ರೈತರ ನೆರವಿಗೆ ಬಂದು ಕೈಹಿಡಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದರಿಂದ ಆನೆಗಳ ಆಗಾಗ್ಗೆ ರೈತರ ಕೃಷಿ ಭೂಮಿ ಮೇಲೆ ದಾಂಗುಡಿ ಇಡುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂದರು.

    ಪರಿಹಾರಕ್ಕೆ ಒತ್ತಾಯ:

    ಆನೆದಾಳಿಯಿಂದ ಲಕ್ಷಾಂತರ ರೂ. ಮೌಲ್ಯದ ರೈತರ ಬೆಳೆ ನಾಶವಾದರೂ ಸರಕಾರದಿಂದ ಮಾತ್ರ ಕೆಲವೇ ಸಾವಿರ ರೂ. ಮಾತ್ರ ಪರಿಹಾರವಾಗಿ ನೀಡಿ ಕೈತೊಳೆದುಕೊಳ್ಳುತ್ತಿದೆ. ರೈತರ ಬವಣೆ ಹೇಳತೀರದಾಗಿದೆ ವರ್ಷಾನುಗಟ್ಟಲೇ ಕಷ್ಟಪಟ್ಟು ಬೆಳೆಸಿದ ಬೆಳೆಗಳನ್ನು ಆನೆಹಿಂಡು ಒಂದೇ ದಿನದಲ್ಲಿ ನಾಶ ಮಾಡುತ್ತಿರುವುದರಿಂದ ರೈತರು ಕಂಗಲಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಇನ್ನೂ ಮುಂದಾದರು, ಅರಣ್ಯಾಧಿಕಾರಿಗಳು ಕಾಡುಪ್ರಾಣಿಗಳ ದಾಳಿಗೆ ಮುಕ್ತಿ ನೀಡಬೇಕಿದೆ ಗ್ರಾಮದ ಮುಖಂಡರಾದ ಮಹೇಶ್ ,ಮತ್ತು ನಾಗರಾಜು ಒತ್ತಾಯಿಸಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.