nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Facebook Twitter Instagram
    ಟ್ರೆಂಡಿಂಗ್
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು
    ತುಮಕೂರು January 26, 2022

    ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು

    By adminJanuary 26, 2022No Comments2 Mins Read
    ganarajyothsava

    ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ  73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜರಗಿತು.

    ಮಹಾತ್ಮ ಗಾಂಧೀಜಿ ಹಾಗೂ  ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಿ.ಸಿ.ಬಾರಕೇರ ಧ್ವಜಾರೋಹಣ ಮಾಡಿದರು.


    Provided by

    ಬಳಿಕ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನಕ್ಕೆ ಅಪಾರವಾದ ಗೌರವವಿದೆ. ನಮ್ಮ ಸಂವಿಧಾನದಲ್ಲಿನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲ ಭಾರತೀಯರಿಗೂ ನೀಡಿದ ಶುಭದಿನವಿದು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ಗೌರವಕ್ಕೆ ಚ್ಯುತಿ ಬಾರದಂತೆ  ನಡೆದುಕೊಳ್ಳುವ ಮೂಲಕ  ದೇಶ ಭಕ್ತಿಯನ್ನು ನಿತ್ಯ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು.

    ನಮ್ಮ ಕಾಲೇಜಿನಲ್ಲಿ  ಕಳೆದ 28 ವರ್ಷಗಳಿಂದ ಉತ್ತಮ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಚಿತ್ರ ಕಲಾ ಪದವಿ ರ್ಯಾಂಕ್ ಪಡೆಯುತ್ತಿದ್ದಾರೆ. ಆದರೆ, ಈ ಕಾಲೇಜಿಗೆ ಅನೇಕ ಮೂಲಭೂತ ಶೈಕ್ಷಣಿಕ ಸೌಲಭ್ಯಗಳಿಲ್ಲ. ಜೊತೆಗೆ ಯಾವುದೇ ಸಿಬ್ಬಂದಿ ಹುದ್ದೆಗಳ ಮಂಜೂರಾತಿಯೂ ಇಲ್ಲ. ಈವರೆಗೆ ಕಾಲೇಜು ನಿರ್ವಹಣೆಗೂ ಯಾವುದೇ ಅನುದಾನಗಳನ್ನು ಒದಗಿಸಿಲ್ಲ ಇಂತಹ ಸ್ಥಿತಿ, ಕಾಲೇಜಿಗೆ ಶಾಪದಂತೆ ಕಾಡುತ್ತಿದೆ ಎಂದು ಪ್ರಾಂಶುಪಾಲರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ಕಾಲೇಜಿನಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಚಾಚೂ ತಪ್ಪದೇ ನಡೆಸಿಕೊಂಡು ಬರಲಾಗುತ್ತಿದೆ. ಚಿತ್ರಕಲಾ ಪದವಿ ಶಿಕ್ಷಣ ಪಡೆದವರಿಗೆ ಶೇ.85ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿವೆ. ಇದೊಂದು ಕೌಶಲ್ಯಾಧಾರಿತ ಶಿಕ್ಷಣವಾಗಿದೆ. ಚಿತ್ರಕಲಾ, ಪದವಿಯ ಸರ್ಕಾರಿ ಉದ್ಯೋಗ ಪಡೆಯಲು ಹಾಗೂ ಸ್ವಂತ ಉದ್ಯೋಗ ಕೈಗೊಳ್ಳುವ ವೃತ್ತಿ ಶಿಕ್ಷಣವನ್ನು ಈ ಪದವಿ ಶಿಕ್ಷಣವು ಒಳಗೊಂಡಿದೆ ಎಂದು ಅವರು ವಿವರಿಸಿದರು.

    ಬಡವರ ಮಕ್ಕಳು ಕಲಿಯುವ ಈ ಸರ್ಕಾರಿ ಕಾಲೇಜಿನ ನರಕ ಯಾತನೆ ಮಾತ್ರ ಯಾವ ಜನಪ್ರತಿನಿಧಿಗಳಿಗಾಗಲಿ ಜಿಲ್ಲಾಡಳಿತಕ್ಕಾಗಲಿ, ಇಲಾಖಾ ಅಧಿಕಾರಿಗಳಿಗಾಗಲಿ ಕೇಳಿಸದಂತಾಗಿರುವುದು ಇಂದಿನ ಶಿಕ್ಷಣ ವ್ಯವಸ್ಥೆಗೆ ಈ ಕಾಲೇಜು ನಿದರ್ಶನವಾಗಿದೆ. ಈ ಕಾಲೇಜಿನ ಬಗ್ಗೆ ನಿರ್ಲಕ್ಷ್ಯ ಧೋರಣೆ ಸಲ್ಲದು ಎಂದು ಅವರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ವರದಿ: ಯತೀಶ್ ಕುಮಾರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ಚಿತ್ರದುರ್ಗ: ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಏನು ಹೆಡ್ ಮಾಸ್ಟ್ರಾ?…

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.