nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ
    ಜಿಲ್ಲಾ ಸುದ್ದಿ March 27, 2024

    ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ

    By adminMarch 27, 2024No Comments2 Mins Read
    saraguru

    ಸರಗೂರು : ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ  ಬುಧವಾರ ನಡೆಯಿತು. ಜಾತ್ರೆಯಲ್ಲಿ  ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

    ತಾಲ್ಲೂಕಿನ ಹೆಗ್ಗನೂರು ಗ್ರಾ.ಪಂ. ವ್ಯಾಪ್ತಿಯ ಹೆಗ್ಗನೂರು ಗ್ರಾಮದಲ್ಲಿ ಮಂಗಳವಾರ ಆರಂಭವಾದ ಜಾತ್ರೆಯ ಎರಡನೇ ದಿನವಾದ ಬುಧವಾರ ರಂದು ಬೆಳಿಗ್ಗೆಯಿಂದಲೇ ದೇವಿಗೆ ಜಾತ್ರೆಯ ದಿನದಂದು ದೇವಸ್ಥಾನದಲ್ಲಿ ವಿಶೇಷ ಹೋಮ, ಮುಂಜಾನೆ 5 ಗಂಟೆಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ  4 ಗಂಟೆಗೆ ಭಕ್ತಾದಿಗಳಿಂದ ಉರುಳು ಸೇವೆ ಮಾಡಿ, ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ಹೆಬ್ಬಳದ ತೊರೆಯಿಂದ ಗಂಗಾ ಪೂಜೆ ಮಾಡಿ,  ನಂತರ ಅದೇ ದಿನದ 9 ಗಂಟೆಗೆ ಭಕ್ತಾದಿಗಳು ಬಾಯಿಬೀಗ ಹರಕೆ, ಮುಡಿ ಮುಗಿಸಿ ಸುತ್ತಿಗೆಗಳು, ನಂದಿಧ್ವಜ ಉಮಾ ಮಹೇಶ್ವರಸ್ವಾಮಿ ದೇವರ ರುದ್ರಾಕ್ಷಿ ಮಂಟಪದೊಂದಿಗೆ ಪೆಂಜಿನಸೇವೆ, ನಾದಸ್ವರ, ವಾದ್ಯಗೋಷ್ಠಿ, ಬ್ಯಾಂಡ್ ಸೆಟ್, ವೀರಗಾಸೆ ನೃತ್ಯ, ಗಾರುಡಿಗೊಂಬೆ, ಕೋಲಾಟ, ನೃತ್ಯವಾದ್ಯ, ಚಂಡಿವಾದ್ಯ, ಮಂಗಳವಾದ್ಯದ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ.ನಂತರ  ಮದ್ಯಾಹ್ನ 12 ಗಂಟೆಗೆ ದೇವಾಲಯ ಸೇರಲಾಗುತ್ತದೆ. ನಂತರ ಉಯ್ಯಲೆಸೇವೆ ಮೂಲಕ ಗರ್ಭಗುಡಿ ಸೇರಿಸಿ ಪಟ್ಟಕ್ಕೆ ಕುಳಿತು ಗಣಪತಿ ಪೂಜೆ, ನವಗ್ರಹ ಪೂಜೆ, ಹೋಮ, ಸಹಸ್ರನಾಮ, ಪೂರ್ಣಾಹುತಿ, ಮಂಗಳಾರತಿ ನೆರವೇರಿಸಲಾಗುತ್ತದೆ. ಮತ್ತೇ ರಾತ್ರಿ 1 ಗಂಟೆಗೆ ಗಂಗಾ ಪೂಜೆ ಮಾಡಿ ಮಹೇಶ್ವರಿ ಕಾಳಮ್ಮ ಉತ್ಸವಮೂರ್ತಿಯನ್ನು ಅಲಂಕರಿಸಿ ಅಲಂಕೃತಗೊಂಡ ಪುಷ್ಪ ರಥದಲ್ಲಿ ವಾದ್ಯಗೋಷ್ಠಿ ಸಮೇತ ರಾತ್ರಿಯಲ್ಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

    ಉಡಿ ತುಂಬುವ, ಹರಕೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ವೇಳೆಗೆ ವಿವಿಧ ಧಾರ್ಮಿಕ ವಿಧಿಗಳು ನಡೆದವು. ಇದೇ ವೇಳೆಗೆ ಭಕ್ತರ ಮೆರವಣಿಗೆಯೂ ನಡೆಯಿತು.  ಮೆರವಣಿಗೆಯಲ್ಲಿ ತಂದು ಬನ್ನಿ ಕಾಳಮ್ಮ ದೇವಸ್ಥಾನದಲ್ಲಿ ಇರಿಸಿದರು.

    ಸರಗೂರು ಪಟ್ಟದಿಂದ ಹೆಗ್ಗನೂರು ಗ್ರಾಮದ ಕಾಳಮ್ಮ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ  ಮಾಡಲಾಗಿತ್ತು.  ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿತ್ತು.

    ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ದೇವಿಯ ದರ್ಶನ ಪಡೆದರು.

    ಈ ಸಂದರ್ಭದಲ್ಲಿ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ಸೇವೆ ಟ್ರಸ್ಟ್ ಅಧ್ಯಕ್ಷ ಶಿವಣ್ಣೆಗೌಡ, ಗ್ರಾ.ಪಂ. ಅಧ್ಯಕ್ಷ ಸುಧೀರ್, ಸಮಿತಿ ಉಪಾಧ್ಯಕ್ಷ ಚಲುವೆಗೌಡ, ಎಚ್.ಕೆ.ಶಂಭುಲಿಯ್ಯ, ಕಾರ್ಯದರ್ಶಿ ಹಾಗೂ ವಕೀಲ ಸತೀಶ್ ಗೌಡ, ಖಂಜಾಚಿ ಹಾಗೂ ಪ್ರಾಂಶುಪಾಲ ರವಿಗೌಡ, ಸಹಕಾರ್ಯದರ್ಶಿ ಎಂ ಸಿ ಮೋಹನ್ ಕುಮಾರ್, ಟ್ರಸ್ಟ್ ಸದಸ್ಯರು ಗೋವಿಂದಗೌಡ, ಸೋಮೇಗೌಡ, ಮಾದಯ್ಯ, ಮಹದೇವಗೌಡ, ಎಚ್ ಸಿ ರವಿಗೌಡ, ಜಯರಾಮೇಗೌಡ, ಸಣ್ಣಕೂಸೇಗೌಡ, ಎಚ್.ಸಿ.ವೆಂಕಟಶಟ್ಟಿ, ಮಹದೇವೆಗೌಡ, ಮಾದೇಗೌಡ, ಸಲಹೆಗಾರರು ಶಿವಲಿಂಗೇಗೌಡ, ಸಣ್ಣಸ್ವಾಮಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.