nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು: ಗಂಟೆಗಟ್ಟಲೇ ಕಾದರೂ ಬಸ್ಸೇ ಇಲ್ಲ ಸಾರಿಗೆ ಇಲ್ಲದೆ ಸೊರಗುತ್ತಿರುವ ‘ಸರಗೂರು’ 
    ರಾಜ್ಯ ಸುದ್ದಿ November 12, 2021

    ಮೈಸೂರು: ಗಂಟೆಗಟ್ಟಲೇ ಕಾದರೂ ಬಸ್ಸೇ ಇಲ್ಲ ಸಾರಿಗೆ ಇಲ್ಲದೆ ಸೊರಗುತ್ತಿರುವ ‘ಸರಗೂರು’ 

    By adminNovember 12, 2021No Comments2 Mins Read
    ksrtc

    ವರದಿ: ಚಂದ್ರಹಾದನೂರು

    ಮೈಸೂರು: ಇವತ್ತೇನಾದ್ರೂ ಕೋರೋನಾ ಲಾಕ್ ಡೌನ್ ನಾ ಅಥವಾ ಕರ್ನಾಟಕ ಬಂದ್ ಗಿಂದ್ ಏನಾದ್ರೂ ಆಗಿದ್ದೀಯಾ ಬಸ್ ಸ್ಟ್ಯಾಂಡ್ ನಲ್ಲಿ ಒಂದು ಕೆಂಪು ಬಸ್ ಕೂಡ ಕಾಣ್ತಿಲ್ವಲ್ಲ ಅಂತಿದ್ದೀರಾ. ಆಗಿದ್ರೇ ನಿಮ್ಮ ಊಹೆ ತಪ್ಪು ಸ್ವಾಮಿ. ಈ ತಾಲೂಕಿನಲ್ಲಿ ಬೃಹತ್ ಬಸ್ ನಿಲ್ದಾಣ ಇದೆ ಆದ್ರೂ ಕೂಡ ಪ್ರತಿದಿನ ಲಾಕ್ ಡೌನ್, ಬಂದ್ ಆಗಿರುವ ವಾತಾವರಣವೇ ಕಣ್ಣಿಗೆ ಕಾಣೋದು. ನಿಲ್ದಾಣಕ್ಕೆ ಬಂದೌರೆಲ್ಲ ಗಂಟೆಗಟ್ಟಲೇ ಕಾದರೂ ಬಸ್ಬರಲೇ ಇಲ್ಲ.ಈಗಲಾದ್ರೂ ಬಸ್ ಬರುತ್ತಾ ಸ್ವಾಮಿ ಎಂದು ಕೇಳೋದೇ ಆಯ್ತು.


    Provided by
    Provided by

    ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಾರಿಗೆ ಸೌಲಭ್ಯ ಇಲ್ಲ ಅಂತ ಸುದ್ದಿ ಆಗೋದುಂಟು. ಅದ್ರೇ ಇದು ಒಂದು ತಾಲೂಕು ತಾಲೂಕಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲ ಅಂದ್ರೇ ನೀವು ನಂಬುವಿರ. ಆದರೂ ನೀವು ನಂಬಲೇ ಬೇಕು. ಹೌದು ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ಪ್ರತಿದಿನ ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೇ ಜನರು ಹೈರಾಣಾಗಿದ್ದಾರೆ.ಅದಕ್ಕೆ ಪ್ರತ್ಯಕ್ಷ ಉದಾಹರಣೆ ಅಂದ್ರೇ ಇದು ನೋಡಿ.

    ಬಸ್ ಸಿಗದೇ ಅನಾರೋಗ್ಯಪೀಡಿತ ಅಪ್ಪನನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಲೇ ಇಲ್ಲ. ಹರಸಾಹಸ ಪಟ್ಟು ದುಪ್ಪಟ್ಟು ಹಣ ಕೊಟ್ಟು ಕರೆದುಕೊಂಡು ಹೋದರೂ ಅಪ್ಪನಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಚಿಕಿತ್ಸೆ ಸಿಕ್ಕಿತು.

    ಅಲ್ಲಿನ ವೈದ್ಯರು ಒಳ್ಳೇಯವರಾಗಿದ್ದರಿಂದ ಆ ದಿನ ತಡವಾಗಿಯಾದರು ಚಿಕಿತ್ಸೆ ದೊರೆಯಿತು. ತಂದೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಲ್ಲಿ ಅನುಭವಿಸಿದ ಕಷ್ಟದ ಕ್ಷಣವನ್ನ ನಾಗರಾಜು. ಎಸ್. ಆರ್ ಅವರು ಹಂಚಿಕೊಂಡಿದ್ದಿಷ್ಟು.

    ಆರೋಗ್ಯ ಸರಿ ಇಲ್ಲದ ಕಾರಣ ನಮ್ಮ ತಂದೆ ರಾಮನಾಯಕ ಅವರನ್ನು ಮೈಸೂರಿನ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗಬೇಕಿತ್ತು. ಆಸ್ಪತ್ರೆಯಲ್ಲಿ ವೈದ್ಯರ ಭೇಟಿಗಾಗಿ ಸಮಯ ನಿಗದಿಯಾಗಿತ್ತು. ಆದ್ದರಿಂದ ತಂದೆಯವರನ್ನು ಕರೆದುಕೊಂಡು ಸರಗೂರು ಬಸ್ ನಿಲ್ದಾಣಕ್ಕೆ ಆಗಮಿಸಿದ್ದೆ. ಒಂದು ಗಂಟೆ ಆಯ್ತು, ಎರಡು ಗಂಟೆ ಆಯ್ತು, ಮೂರು ಗಂಟೆ ಕಾಲ ಕಾದರೂ ಯಾವುದೇ ಬಸ್ ಗಳು ಬಸ್ ನಿಲ್ದಾಣಕ್ಕೆ ಬರಲಿಲ್ಲ.

    ಕೊನೆಗೆ ಖಾಸಗಿ ವಾಹನದ ಮೂಲಕ ಹ್ಯಾಂಡ್ಪೋಸ್ಟ್ ತಲುಪಿದೆ. ಅಲ್ಲೂ ಸಹ ಮೈಸೂರಿಗೆ ಹೋಗುವ ಬಸ್ ಗಾಗಿ ಕಾದು ಕಾದು ಸುಸ್ತಾದೆ. ಅಂತಿಮವಾಗಿ ದುಬಾರಿ ಹಣ ನೀಡಿ ಮತ್ತೊಂದು ಖಾಸಗಿ ವಾಹನದ ಮೂಲಕ ಮೈಸೂರಿನ ಆಸ್ಪತ್ರೆಗೆ ತೆರಳಿದೆ. ಆದರೆ ಅಷ್ಟರಲ್ಲಾಗಲೇ ಆಸ್ಪತ್ರೆಯಲ್ಲಿ ನಮಗೆ ನೀಡಿದ್ದ ನೊಂದಣಿ ಸಮಯ ಮುಗಿದಿತ್ತು. ಒಳ್ಳೇಯ ವೈದ್ಯರು ಇದ್ದ ಕಾರಣ ತಡವಾದರೂ ತಂದೆಗೆ ಚಿಕಿತ್ಸೆ ನೀಡಿದರು.

    ಹಲವು ತಿಂಗಳಿನಿಂದಲೂ ಸರಗೂರು ಹಾಗೂ ಹ್ಯಾಂಡ್ಪೋಸ್ಟ್ ನಲ್ಲಿ ಬಸ್ ಗಳು ಸಮಯಕ್ಕೆ ಬಾರದಿದ್ದರಿಂದ ಸಾಕಷ್ಟು ಜನ ಅದರಲ್ಲೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಗೂರಿನಿಂದ ಮೈಸೂರಿಗೆ ಅಲ್ಲದೇ ಮೈಸೂರು ಕಡೆಯಿಂದ ಸರಗೂರಿಗೂ ಬಸ್ ವ್ಯವಸ್ಥೆ ಇಲ್ಲ. ಸಂಬಂಧಪಟ್ಟವರು ಈ ಬಗ್ಗೆ ಯಾವುದೇ ಗಮನ ಹರಿಸದಿರುವುದರಿಂದ ಜನಸಾಮಾನ್ಯರು, ಪ್ರಯಾಣಿಕರು ಅತೀವ ತೊಂದರೆ ಅನುಭವಿಸುವಂತಾಗಿದೆ.

    ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಬೇಕಿದೆ. ಕೂಡಲೇ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲವನ್ನು ತಪ್ಪಿಸಬೇಕಿದೆ ಎಂದು ಕಾನೂನು ವಿದ್ಯಾರ್ಥಿ ಮನೋಜ್ ಒತ್ತಾಯಿಸಿದ್ದಾರೆ

    ಒಟ್ಟಾರೆ ಹೇಳೋದಾಗರೇ ಸರಗೂರಿನ ಜನ ಸರ್ಕಾರಕ್ಕೆ ಸಾರಿಗೆ ಮೂಲಕ ಹಣ ಕೊಡ್ತೇವೆ ಅಂದರೂ ಸಹ ಸರಿಯಾದ ಸಮಯಕ್ಕೆ ಬಸ್ ನಿಲ್ದಾಣಕ್ಕೆ ಬಸ್ ಬರುತ್ತಿಲ್ಲ. ಪ್ರತಿದಿನ ಸರಗೂರಿನಲ್ಲಿ ಸಾರಿಗೆ ವ್ಯವಸ್ಥೆಯದ್ದೇ ಒಂದು ಗೋಳು ಆಗಿಬಿಟ್ಟಿದೆ.ಉಳ್ಳವರು ದುಪ್ಪಟ್ಟು ಹಣಕೊಟ್ಟು ಖಾಸಗೀ ವಾಹನದಲ್ಲಿ ತೆರಳುತ್ತಾರೆ. ಇಲ್ಲದವರು ಅಷ್ಟೊಂದು ಹಣ ಕೊಡಕಾಗುತ್ತಾ ನೀವೇ ಹೇಳಿ ಸ್ವಾಮಿ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು…

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.