nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    • ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ
    ತುಮಕೂರು July 26, 2022

    ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

    By adminJuly 26, 2022Updated:July 27, 2022No Comments2 Mins Read
    chithrakala collge tumakuru

    ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022  ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು  ಸೋಮವಾರ ಆಯೋಜಿಸಲಾಗಿತ್ತು.

    ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು,   ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು ಬೆಳವಣಿಗೆಗಾಗಿ ನಮ್ಮ ಸಂಘ ಸದಾ ಬೆನ್ನೆಲುಬಾಗಿ ನಿಂತು ಕೆಲಸ ಮಾಡಲು ನಾವು ಸಿದ್ಧರಿದ್ದೇವೆ.  ಕಾಲೇಜನ್ನು ಉಳಿಸಿಕೊಳ್ಳಲು ನಾವು ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಇದೇ ಸ್ಥಳದಲ್ಲಿ ಕಾಲೇಜು ಮುಂದುವರಿಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಮಾತನಾಡಿ,  ಈ ಕಾಲೇಜಿನ ಕುಂದುಕೊರತೆಗಳು, ಕೆಲಸ ಕಾರ್ಯಗಳಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ತನು, ಮನ, ಧನಗಳಿಂದ ಶ್ರಮಿಸುತ್ತಿರುವುದು ನನಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ. ಅವರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಹಿರಿಯ ಹಾಗೂ ಕಿರಿಯ ಕಲಾವಿದರನ್ನು ಅತಿಥಿ ಉಪನ್ಯಾಸಕರಾದ ಎಂ.ಎನ್.ಸುಬ್ರಹ್ಮಣ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.   ಅತಿಥಿ ಉಪನ್ಯಾಸಕರಾದ   ರೂಪ ಸಿ.ಎನ್., ನೇತ್ರಮ್ಮ ಎಸ್.ಕೆ., ನಾಗರಾಜ್ ಟಿ.ಎಂ., ಸತ್ಯನಾರಾಯಣ ಟಿ.ಎಸ್. ಭಾಗವಹಿಸಿದ್ದರು.

    ಶ್ರೀವಿದ್ಯಾ ಟಿ.ಎಸ್. ಪ್ರಾರ್ಥನಾ ಗೀತೆ ಹಾಡಿದರು. ಧನುಶ್ ಎಸ್ ಮತ್ತು ಸೌಮ್ಯ ಎಸ್. ವಿದ್ಯಾರ್ಥಿಗಳು ತಮ್ಮ  ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಭಾಗವಹಿಸಿ ಸುಂದರ ವರ್ಣ ಚಿತ್ರಗಳನ್ನು ರಚಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಚಿಕ್ಕನಾಯಕನಹಳ್ಳಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆ ಕಾರ್ಯವು ತಾಲೂಕಿನಲ್ಲಿ ಶೇ.93ರಷ್ಟು ಮುಕ್ತಾಯಗೊಂಡಿದೆ…

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.