ತುರುವೇಕೆರೆ: ಬೇರೆ ಬೇರೆ ಊರುಗಳಿಂದ ಪಟ್ಟಣಕ್ಕೆ ಬರುವ ಸೀಟ್ ಆಟೋಗಳ ಕಿರಿಕಿರಿ ತಪ್ಪಿಸುವಂತೆ ಹಾಗೂ ಬಸ್ ಹತ್ತುವ ಪಾದಚಾರಿಗಳು ಅನುಭವಿಸುವ ತೊಂದರೆ ಮತ್ತು ಬೀದಿಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ತೊಂದರೆ ತಪ್ಪಿಸುವಂತೆ ವಿವಿಧ ಸಂಘಟನೆಗಳು ಜಂಟಿಯಾಗಿ ಪಟ್ಟಣ ಪಂಚಾಯಿತಿ, ಅಧ್ಯಕ್ಷರಿಗೆ ಮನವಿ ಸಲ್ಲಿಸಿತು.
ಕಾರ್ಮಿಕ ಸಂಘಟನೆಗಳು, ಬೀದಿಬದಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘ , ವ್ಯಾಪಾರಿಗಳ ಸಂಘ ನಿಯೋಗ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಮಾಯಸಂದ್ರ ವೃತ್ತ, ದಬ್ಬೆಘಟ್ಟ ವೃತ್ತ ,ಬಾಣಸಂದ್ರ ರಸ್ತೆ, ತಿಪಟೂರು ರಸ್ತೆಯಲ್ಲಿ, ನಿರಂತರವಾಗಿ ಪೊಲೀಸರನ್ನು ನಿಯೋಜನೆ ಮಾಡಿಸಿಕೊಡುವಂತೆ ಹಾಗೂ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯೆಯೆ ನೀಡಿದ, ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಿದಾನಂದ್ ಈ ಬಗ್ಗೆ ಸಭೆ ಕರೆದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಿ. ಐ. ಟಿ. ಯು. ನ ಸತೀಶ್, ಆಟೋ ಚಾಲಕರ ಸಂಘದ ಗಂಗಣ್ಣ, ಬೀದಿಬದಿ ವ್ಯಾಪಾರಿಗಳ ಸಂಘದ ಮಾರುತಿ, ಜಯಕರ್ನಾಟಕ ಪ್ರಗತಿಪರ ಸಂಘಟನೆಯ ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy