ಚಿತ್ರದುರ್ಗ: ನಾನು ಅಧಿಕಾರದಲ್ಲಿರುವವರೆಗೆ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವುದಾಗಿ ಹಿರಿಯೂರು ತಾಲ್ಲೂಕಿನ ನಗರಸಭೆ ಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷ ಜೆ.ಆರ್.ಅಜಯ್ ಕುಮಾರ್ ಹೇಳಿದರು.
ಸ್ಥಾಯಿ ಸಮಿತಿಗೆ ನನ್ನನ್ನು ಆಯ್ಕೆ ಮಾಡಿದ ಮಾಜಿ ಸಚಿವರಾದ ಡಿ.ಸುಧಾಕರ್ ಹಾಗೂ ಎಲ್ಲಾ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 31 ಜನ ಸದಸ್ಯರು ಹಾಗೂ ಐದು ಜನ ನಾಮ ನಿರ್ದೇಶಕರ ಸಹಕಾರದಿಂದ ನಾನು ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಸರ್ಕಾರಿ ಕೆಲಸಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಕೆಲಸ ನಿರ್ವಹಿಸುವುದಾಗಿ ಅವರು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಪೌರಾಯುಕ್ತರಾದ ಡಿ.ಉಮೇಶ್ , ಸಿಬ್ಬಂದಿ ವರ್ಗದವರಾದ ಜಯಣ್ಣ, ನಿರಂಜನಿ, ಅಶೋಕ್, ಸುನಿಲ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ನಗರಸಭೆ ಸದಸ್ಯರಾದ ಶಿವರಂಜನಿ, ಜಗದೀಶ್, ಮದಲಿಮೇರಿ, ಜಬೀವುಲ್ಲಾ, ಸನಾವುಲ್ಲಾ, ಈರಲಿಂಗೆಗೌಡ, ಮಮತ, ಮದಲಿಮೇರಿ, ಸುರೇಖಾ ಮಣಿ, ಹಾಗೂ ಮಾಜಿ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾದ ಸಾದತ್ ವುಲ್ಲಾ ಹಾಗೂ ಪ್ರಭುಯಾದವ್ , ಕೃಷ್ಣಪೂಜಾರಿ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ) .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB