nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಗೆ ಭರ್ಜರಿ ಮೆರವಣಿಗೆ ಮೂಲಕ ಅದ್ದೂರಿ ಸ್ವಾಗತ!
    ಜಿಲ್ಲಾ ಸುದ್ದಿ May 29, 2023

    ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಗೆ ಭರ್ಜರಿ ಮೆರವಣಿಗೆ ಮೂಲಕ ಅದ್ದೂರಿ ಸ್ವಾಗತ!

    By adminMay 29, 2023No Comments2 Mins Read
    laksmee hebbalkar

    ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

    ಕಾಂಗ್ರೆಸ್‌ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಶಾಸಕರಾದ ರಾಜು ಸೇಠ್‌, ಬಾಬಾ ಸಾಹೇಬ್‌ ಪಾಟೀಲ, ವಿಶ್ವಾಸ ವೈದ್ಯ, ಮಹೇಂದ್ರ ತಮ್ಮಣ್ಣವರ್, ಮಾಜಿ ಶಾಸಕ ಶಾಮ್‌ ಘಾಟಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್‌ ಮುಖಂಡರು ನೂತನ ಸಚಿವರಿಗೆ ಸಾಥ್‌ ನೀಡಿದರು.


    Provided by
    Provided by

    ಮುಗಿಲು ಮುಟ್ಟಿದ ಸಂಭ್ರಮ: ಕರ್ನಾಟಕ ಸರಕಾರದಲ್ಲಿ ನೂತನವಾಗಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್‌ ಮುಖಂಡರು, ಅಭಿಮಾನಿಗಳು, ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ ನಗರದ ವಿವಿಧೆಡೆ ನಡೆದ ಮೆರವಣಿಗೆಯಲ್ಲಿ ನೂತನ ಸಚಿವರನ್ನು ನೋಡಿದ ಜನರು ಕೈ ಬೀಸಿ ಶುಭ ಹಾರೈಸಿದರು.

    ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು: ನಗರದ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಹೂ ಮಾಲೆ ಅರ್ಪಿಸುವ ಸಮಯದಲ್ಲಿ ಅವರ ಅಪಾರ ಅಭಿಮಾನಿಗಳು ಪಟಾಕಿ ಸಿಡಿಸಿ ಜಯಘೋಷ ಹಾಕುವುದರ ಮೂಲಕ ಸಂಭ್ರಮಿಸಿದರು. ಜಿಲ್ಲೆಯ ನಾನಾ ಕಡೆಗಳಿಂದ ಕಾಂಗ್ರೆಸ್‌ ಪಕ್ಷ ದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹೂ ಮಾಲೆಗಳನ್ನು ಸಮರ್ಪಿಸಿ ಶುಭ ಕೋರಿದರು.

    ಗಮನ ಸೆಳೆದ ಸ್ವಾಗತ ಕೋರುವ ಕಟೌಟ್ ಗಳು: ನಗರದ ರಾಣಿ ಚನ್ನಮ್ಮ ವೃತ್ತ, ಗೋವಾವ್ಹೇಸ್ ನ ವಿಶ್ವಗುರು ಬಸವೇಶ್ವರ ವೃತ್ತ ಬಳಿ ಹಾಗೂ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ದೊಡ್ಡ ಗಾತ್ರದ ಕಟೌಟ್ ಗಳು ರಾರಾಜಿಸಿದವು. ಅಲ್ಲದೇ ಸಂಕಮ್ ಹೋಟೆಲ್ ರಸ್ತೆ, ಅಶೋಕ ವೃತ್ತ ಸಂಗೊಳ್ಳಿ ರಾಯಣ್ಣ ವೃತ್ತ, ಕೋರ್ಟ್ ರಸ್ತೆ, ಅಂಬೇಡ್ಕರ್ ರಸ್ತೆ ಸೇರಿ ನಗರದ ಪ್ರಮುಖ‌ ರಸ್ತೆಗಳಲ್ಲಿ ಶುಭಾಶಯ ಮತ್ತು ಸ್ವಾಗತ ಕೋರುವ ಕಟೌಟ್ ಗಳು ಎಲ್ಲರ ಗಮನ ಸೆಳೆದವು.

    ಬೈಕ್ ರ್ಯಾಲಿ: ನಗರಕ್ಕೆ ಆಗಮಿಸಿದ ನೂತನ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಲು ಅವರ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ತೆರೆದ ವಾಹನದಲ್ಲಿ ನೂತನ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಮೆರವಣಿಗೆ ನಡೆಸಿದ್ದು, ಕಾಂಗ್ರೆಸ್‌ ಭವನದಿಂದ ರಾಣಿ ಚನ್ನಮ್ಮ ವೃತ್ತ , ಡಾ. ಬಿ.ಆರ್.ಅಂಬೇಡ್ಕರ್, ಧರ್ಮವೀರ ಸಂಭಾಜಿ ಮಹಾರಾಜ, ವಿಶ್ವಗುರು ಬಸವೇಶ್ವರ, ಸಂಗೊಳ್ಳಿ ರಾಯಣ್ಣ ಸೇರಿ ಮುಂತಾದ ಮಹಾಪುರುಷರ ಪುತ್ಥಳಿಗಳಿಗೆ ನೂತನ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರು ಗೌರವ ಅರ್ಪಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.