nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026
    Facebook Twitter Instagram
    ಟ್ರೆಂಡಿಂಗ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್
    ರಾಜ್ಯ ಸುದ್ದಿ November 17, 2022

    ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್

    By adminNovember 17, 2022No Comments2 Mins Read
    charavarthi sulli belle

    ಬೆಳಗಾವಿ: ಹಿಂದೂ ಎನ್ನುವುದನ್ನು ಅಶ್ಲೀಲ ಎಂದು ಕರೆದಾಗ ತಕ್ಕ ಉತ್ತರ ಕೊಡಲೇಬೇಕಾಗಿತ್ತು. ನನ್ನ ವಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸಹ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತಾಡಿದರೇ ಸುಮ್ಮನಿರಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲ್ ಹಾಕಿದ್ದಾರೆ.

    ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರ ಯಮಕನಮರಡಿಯಲ್ಲಿ ನಡೆದ ನಾನು ಹಿಂದೂ ಸಮಾವೇಶದಲ್ಲಿ ಮಾತನಾಡಿದ ಸೂಲಿಬೆಲೆ, ನನ್ನ ಧರ್ಮ ಮತ್ತು ತಾಯಿಯ ಬಗ್ಗೆ ಮಾತಾಡಿದವರ ಕ್ಷೇತ್ರಕ್ಕೆ ಹೋಗಬೇಕು ಅನಿಸಿತು. ಅದಕ್ಕೆ ಯಮಕನಮರಡಿಗೆ ಬಂದಿದ್ದೇನೆ. ಡಿಕ್ಷನರಿ ನೋಡಿಕೊಂಡು ಮಾತಾಡುವ ಪುಣ್ಯಾತ್ಮರಿಗೆ ಯಾವ ಡಿಕ್ಷನರಿ ಅಂತ ಮರೆತು ಹೋಗಿದೆ. ಹಿಂದೂ ಸಮಾಜ ತಿರುಗಿಬಿದ್ದರೇ ಏನಾಗುತ್ತೆ ಅನ್ನೋದು ಯಮಕನಮರಡಿಯಲ್ಲಿ ಪ್ರೂವ್ ಆಗಿದೆ ಎಂದು ವಾಗ್ದಾಳಿ ಮಾಡಿದರು.

    ಹಿಂದೂ ಈಗ ಜಾಗೃತನಾಗಿದ್ದಾನೆ, ಮೊದಲಿನಂತೆ ಇಲ್ಲ. ನಾನು ಕ್ರಿಶ್ಚಿಯನ್​ರು ಅನೇಕರ ಮತಾಂತರ ಮಾಡೋದನ್ನು ನೋಡಿದ್ದೇನೆ. ಹಿಂದೂ ಧರ್ಮ ಯಾರೂ ಯಾರನ್ನೂ ನಂಬಿ ಅಂತ ಹೇಳಲ್ಲ. ನೀವು ಹಿಂದೂನ ನಂಬ್ತಿರಾ ಅವರು ಹಿಂದೂ, ನಂಬುದಿಲ್ವಾ ಅವರು ಹಿಂದೂ. ನಾನು ಮತಾಂತರಗೊಂಡೆ ಎಂದು ಹೇಳುವುದು ರಿಲಿಜಿಯನ್​ನಲ್ಲಿ ಮಾತ್ರ. ಧರ್ಮದಲ್ಲಿ ಅದನ್ನು ಮಾಡಲು ಸಾಧ್ಯವೇ ಇಲ್ಲ ಇದೇ ಬದುಕಿನ ಶೈಲಿ ಎಂದು ಹೇಳಿದ್ದಾರೆ.

    ಕೆಲ ಧರ್ಮಗಳಲ್ಲಿ ಬೇರೆ ದೇವರ ಪೂಜೆ ಮಾಡಿದ್ರೆ ತಲೆ ಕಡಿಯುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಬೇರೆ ದೇವರ ಪೂಜೆ ಮಾಡಿದರೆ ಎಲ್ಲಾ ದೇವರು ಒಂದೇ ತಲೆಕಡಸಿಕೊಳ್ಳಬೇಡ ಅಂತಾರೆ. ಹಿಂದೂ ಧರ್ಮಕ್ಕೆ ಒಂದು ಗ್ರಂಥ ಅಂತ ಇಲ್ಲ. ಹಿಂದೂ ಧರ್ಮಕ್ಕೆ ಸಂಸ್ಥಾಪಕರಿಲ್ಲ ಇದೊಂದು ವಿಜ್ಞಾನ, ವಿಜ್ಞಾನಕ್ಕೆ ಯಾರೂ ಸಹ ಸಂಸ್ಥಾಪಕರಿರೊಲ್ಲ ಎಂದು ಹೇಳಿದರು.

    ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು ಯಾರೂ ಸಹ ಹಿಂದೂ ಧರ್ಮದ ಬಗ್ಗೆ ಮಾತಾಡಲಿಲ್ಲ. ಅವರ ಫೋಟೊಗಳನ್ನು ಹಾಕಿ ನೀವು ಹಿಂದೂ ಬಗ್ಗೆ ಮತಾಡ್ತಿರಲ್ಲ. ಹಿಂದೂ ಧರ್ಮದ ಬಗ್ಗೆ ಮಾತಾಡಿದ ಸತೀಶ್​​ರನ್ನು ಉಚ್ಛಾಟನೆ ಮಾಡ್ತೀರಾ.. ಎಂದು ಕಾಂಗ್ರೆಸ್​ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.

    8 ರಿಂದ 10 ಸಾವಿರ ವರ್ಷಗಳಿಂದ ಅಲುಗಾಡದ ಧರ್ಮ ಹಿಂದೂ ಧರ್ಮ. ಯಮಕನಮರಡಿಯಲ್ಲಿ ಯಾರೋ ಒಬ್ಬ ಎನೋ ಮಾತಾಡುತ್ತಾರೆ ಅಂತ ಅದು ಅಲುಗಾಡಲ್ಲ. ನಾನು ಚಿಕ್ಕವನಿದ್ದಾಗ ಮಲವಿಸರ್ಜನೆಗೆ ಹೋಗಬೇಕಾದರೇ ಲಂಡನ್​ಗೆ ಹೋಗ್ತಿನಿ ಅಂತಿದ್ದೆ. ನಾನು ಕಾಲೇಜಿಗೆ ಹೋದಾಗ ಟಾಯ್ಲೆಟ್ ಮೇಲೆ ವೆಲ್ ಕಮ್ ಟೂ ಪಾಕಿಸ್ತಾನ ಅಂತ ಬರೆದಿದ್ದರು. ಇವರುಗಳು ಇದನ್ನೂ ಸಹ ಡಿಕ್ಷನರಿಯಲ್ಲಿ ಲಂಡನ್​ಗೆ ಮಲವಿಸರ್ಜನೆ ಅಂತ ಅರ್ಥ ಇದೆ. ಅದೇ ಡಿಕ್ಷನರಿಯಲ್ಲಿ ಟಾಯ್ಲೆಟ್​​ಗೆ ಪಾಕಿಸ್ತಾನ ಅಂತ ಅರ್ಥ ಇದೆ ಅಂತ ಚರ್ಚೆಗೆ ಬಂದ್ರೆ ಎನ್ ಮಾಡೋಕಾಗುತ್ತೆ ಎಂದು ವ್ಯಂಗ್ಯವಾಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ತುಮಕೂರು: ದೇಶದ, ಸಮಾಜದ ಬೆಳವಣಿಗೆಗೆ ನಿರ್ಮಾತೃಗಳಾಗಿ ಎಂಜಿನಿಯರ್‌ ಗಳು ಇಂಜಿನಿಯರ್‌ಗಳು ತಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ಸರ್ಕಾರಗಳು ಬದಲಾಗುವ ವ್ಯವಸ್ಥೆಯನ್ನು…

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.