ಗುಬ್ಬಿ: ತಾಲೂಕಿನ ಕೊಪ್ಪ ವಲಯದ, ಚಂಗಾವಿ ಕಾರ್ಯಕ್ಷೇತ್ರದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ , ಕೊಪ್ಪ ವಲಯದ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮತ್ತು ಕೊಪ್ಪ ವಲಯದ ನಾಗರಿಕ ಸಹಯೋಗದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯನ್ನು ನೆರವೇರಿಸಲಾಯಿತು.
ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಚಂಗಾವಿ ಗ್ರಾಮದ ಮುಖಂಡರಾದ ಕೇಶವ ದೀಪ ಪ್ರಜ್ವಲನೆ ಮೂಲಕ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುಬ್ಬಿ ತಾಲೂಕಿನ ಯೋಜನಾಧಿಕಾರಿ ಹರೀಶ್ ಆರ್ .ಎಸ್. ,ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸರಳವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಮ್ಮ, ಲತಾ, ಚಂಗಾವಿ ಒಕ್ಕೂಟದ ಅಧ್ಯಕ್ಷರಾದ ಯಶೋಧ ಕೊಡಿಗೆಹಳ್ಳಿ, ಒಕ್ಕೂಟದ ಅಧ್ಯಕ್ಷರಾದ ಯಶೋಧ, ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್, ಸೇವಾಪ್ರತಿನಿಧಿಗಳಾದ ಕರಿಯಮ್ಮ, ಮಂಜುಳ, ಕಾಳಯ್ಯ, ಚಿಕ್ಕಣ್ಣ,ಶಿವರಾಜ್ ಹಾಗೂ ಕೊಪ್ಪ ವಲಯದ ಸರ್ವ ಸದಸ್ಯರು ಭಾಗವಹಿಸಿದ್ದರು.
ವರದಿ: ಮಂಜುನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB