nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಂ ಅಂಗಡಿ ತೆರವಿಗೆ ಸವಿತಾ ಸಮಾಜದಿಂದ ಮುಷ್ಕರ…
    ಕೊರಟಗೆರೆ February 21, 2025

    ಮುಸ್ಲಿಂ ಅಂಗಡಿ ತೆರವಿಗೆ ಸವಿತಾ ಸಮಾಜದಿಂದ ಮುಷ್ಕರ…

    By adminFebruary 21, 2025No Comments2 Mins Read

    ಕೊರಟಗೆರೆ : ಹೊರರಾಜ್ಯದಿಂದ ತೋವಿನಕೆರೆಗೆ ಆಗಮಿಸಿ ಅನಧಿಕೃತವಾಗಿ ಪ್ರಾರಂಭ ಮಾಡಿರುವ ಸೆಲೂನ್ ಅಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಸವಿತಾ ಸಮಾಜದಿಂದ ತಮ್ಮ 12 ಅಂಗಡಿ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ಕಳೆದ 3 ದಿನದಿಂದ ಮುಚ್ಚಿ ಮುಷ್ಕರಕ್ಕೆ ಕರೆ ನೀಡಿರುವ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ಹೊರ ರಾಜ್ಯದಿಂದ ಬಂದಿರುವ ಮುಸ್ಲಿಂ ಕುಟುಂಬವೊಂದು ಕ್ಷೌರದ ಅಂಗಡಿ ತೆರೆದಿದ್ದಾರೆ. ಇದರಿಂದ ಭಜಂತ್ರಿ ಸಮುದಾಯದ ಕುಟುಂಬಗಳಿಗೆ ಆರ್ಥಿಕವಾಗಿ ನಷ್ಟವಾಗಲಿದೆ ಎಂದು ಆರೋಪಿಸಿ, 3 ದಿನದಿಂದ ಸವಿತಾ ಸಮಾಜದ ಅಂಗಡಿ ಮಾಲೀಕರಿಂದ ಮುಷ್ಕರಕ್ಕೆ ಕರೆ ನೀಡಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.


    Provided by
    Provided by

     ಸವಿತಾ ಸಮಾಜದ ಆಗ್ರಹ ಏನು?

    ಗ್ರಾಮ ಪಂಚಾಯಿತಿಯಿಂದ ಪರವಾನಗಿ ಪಡೆಯದೇ  ಅನಧಿಕೃತವಾಗಿ ಮುಸ್ಲಿಂ ಕುಟುಂಬ ಸೆಲೂನ್ ತೆಗೆದಿದ್ದಾರೆರೇ. ಮುಸ್ಲಿಂ ಅಂಗಡಿ ಮಾಲೀಕ ಗ್ರಾಹಕರಿಂದ ಕಡಿಮೆ ಹಣ ಪಡೆದು ಕಟ್ಟಿಂಗ್ ಶೇವಿಂಗ್ ಮಾಡ್ತಾನೇ. ವಾರದಲ್ಲಿ 1 ದಿನವು ರಜೆಯಲ್ಲದೇ ಪ್ರತಿನಿತ್ಯ ಅಂಗಡಿ ತೆರೆಯುತ್ತಾರೆ. ನಾವು ಪೂರ್ವ ಕಾಲದಿಂದಲೂ ಇದೇ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೇವೆ. ನಮಗೇ ಇವರಿಂದ ಪ್ರತಿನಿತ್ಯವು ನಷ್ಟವಾಗುತ್ತಿದೆ. ಆದ್ದರಿಂದ ಇವರ ಅಂಗಡಿ ಖಾಲಿ ಮಾಡಿಸಿ ನಮಗೇ ಅನುಕೂಲ ಕಲ್ಪಿಸಬೇಕು ಎಂಬುದು ಕೊರಟಗೆರೆ ಸವಿತಾ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

     ಅಂಗಡಿ ಮುಚ್ಚಿಸಿದ ಮುಖಂಡರು:

    ತೋವಿನಕೆರೆಯ ಮುಸ್ಲಿಂ ಕುಟುಂಬದ ಅಂಗಡಿಯನ್ನು ಅನಧಿಕೃತವಾಗಿ ಮಾಡುತ್ತಿದ್ದಿರಾ ಎಂದು ಆರೋಪಿಸಿ ಸವಿತಾ ಸಮಾಜದ ಮುಖಂಡರು ಖುದ್ದಾಗಿ ತೆರಳಿ ನಾವು ನಮ್ಮ ಅಂಗಡಿಗಳನ್ನು ಮುಚ್ಚಿದ್ದೇವೆ. ನೀವು ನಿಮ್ಮ ಅಂಗಡಿ ಮಳಿಗೆಯನ್ನು ಮುಚ್ಚಿ. ಗ್ರಾಮ ಪಂಚಾಯಿತಿ ಪರವಾನಗಿ ಇಲ್ಲದೇ ಅಂಗಡಿ ಮಳಿಗೆ ತೆರೆಯಬಾರದು ಎಂದು ಮುಚ್ಚಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಮುಸ್ಲಿಂ ಕುಟುಂಬದ ಅಳಲು:

    ನಾವು ಕಳೆದ 15 ವರ್ಷದಿಂದ ಕೊರಟಗೆರೆ ಪಟ್ಟಣದಲ್ಲಿ ವಾಸವಿದ್ದೇವೆ. ನಮ್ಮದು ಸ್ವಂತ ಮನೆ ಮತ್ತು ಅಂಗಡಿಗಳಿವೆ. ಪಪಂ ಮತ್ತು ಗ್ರಾಮ ಪಂಚಾಯಿತಿಯಿಂದ ನಮಗೇ ಆಧಾರ್, ಐಡಿ ಮತ್ತು ರೇಷನ್ ಕಾರ್ಡ್ ನೀಡಿದ್ದಾರೇ. ನಮಗೇ ಗೊತ್ತಿರೋದು ಸೆಲೂನ್  ಕೆಲಸ ಬಿಟ್ಟರೇ ಬೇರೆನೂ ನಮಗೇ ಗೊತ್ತಿಲ್ಲ. ದುಡಿದು ತಿನ್ನುವ ಕೈಗಳಿಗೆ ಸುಮ್ಮನೇ ತೊಂದರೇ ನಮ್ಮ ಜೀವನ ನಡೆಯೋದು ಹೇಗೆ. ಗ್ರಾಮೀಣ ಭಾಗದ ಬಡ ಗ್ರಾಹಕರಿಂದ 10ರೂ ಕಡಿಮೆ ಪಡೆದುಕೊಂಡರೇ ತಪ್ಪೇನು ಹೇಳಿ ಎಂದು ತಮ್ಮ ಅಳಲನ್ನು ತೋಡಿಕೊಂಡರು.

     ತೋವಿನಕೆರೆ ಗ್ರಾಪಂ ಪಿಡಿಓ ಸ್ಪಷ್ಟನೆ:

    ಕೊರಟಗೆರೆಯ ಸವಿತಾ ಸಮಾಜ ಸಂಘದಿಂದ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ. ಸವಿತಾ ಸಮಾಜದ ಮುಖಂಡರ ಮನವಿಯನ್ನು ಪರಿಶೀಲನೆ ನಡೆಸುತ್ತೇವೆ. ಅನಧಿಕೃತವಾಗಿ ಅಂಗಡಿ ಪ್ರಾರಂಭ ಮಾಡಿದ್ದರೆ ನೊಟೀಸ್ ಜಾರಿಮಾಡಿ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆ. ಗ್ರಾಮ ಪಂಚಾಯಿತಿ ಅಂಗಡಿ ಪ್ರಾರಂಭಕ್ಕೆ ಪರವಾನಗಿ ಪಡೆಯೋದು ಕಡ್ಡಾಯ ಎಂದು ತೋವಿನಕೆರೆ ಪಿಡಿಓ ಲಕ್ಷ್ಮಿ ನಾರಾಯಣ್ ಸ್ಪಷ್ಟನೆ ನೀಡಿದರು.

    ತೋವಿನಕೆರೆಯಲ್ಲಿ ಸವಿತಾ ಸಮಾಜದ 12 ಅಂಗಡಿಗಳಿವೆ. ಮುಸ್ಲಿಂ ಕುಟುಂಬ ಕಳೆದ 4 ವರ್ಷದ ಹಿಂದೆ ಒಂದೇ ಒಂದು ಸೆಲೂನ್ ಅಂಗಡಿ ತೆರೆದು ಜೀವನ ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ಕೆಲಸ ಮಾಡುವುದು ಹೊಟ್ಟೆ ಪಾಡಿಗಾಗಿಯೇ ಎಲ್ಲರೂ ಒಟ್ಟಾಗಿ ಇಂತಿಷ್ಟು ಹಣ ಎಂದು ನಿಗದಿ ಮಾಡಿ ನಾಮಫಲಕ ಅಳವಡಿಸಿ ಆದೇಶ ಮಾಡಿ ಎಲ್ಲರಿಗೂ ದುಡಿಮೆಗೆ ಅನುಕೂಲ ಕಲ್ಪಿಸಬೇಕಾದ ಜವಾಬ್ದಾರಿಯನ್ನು ಅಧಿಕಾರಿ ವರ್ಗ ತೆಗೆದು ಕೊಳ್ಳಬೇಕಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.