nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026
    Facebook Twitter Instagram
    ಟ್ರೆಂಡಿಂಗ್
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    • ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ
    • ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ
    • ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ
    ಪಾವಗಡ February 9, 2025

    ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ

    By adminFebruary 9, 2025No Comments2 Mins Read
    pavagada

    ಪಾವಗಡ: ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯ ಎಸ್ ಬಿ ಕಾನ್ ಸ್ಟೇಬಲ್ ಮಟ್ಕಾ ಮತ್ತು ಇಸ್ಪೀಟ್ ದಂಧೆಕೋರರ ಜೊತೆ ಶಾಮೀಲಾಗಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ

    ಭಾನುವಾರದಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿ, ಅರಸೀಕೆರೆ ತಾಣ ವ್ಯಾಪ್ತಿಯಲ್ಲಿ ಸರಿಯಾಗಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಸುವುದಿಲ್ಲ, ಬರೀ ನಾಲ್ಕು ಜನ ದಂಧೆಕೋರರನ್ನ ಸೇರಿಸಿ ಸಭೆ ನಡೆಸುತ್ತಾರೆ. ಅಲ್ಲಿನ ಜನರಿಗೆ ಇದರ ಬಗ್ಗೆ ಜಾಗೃತಿ ಇಲ್ಲ ದಲಿತರು ಠಾಣೆಗೆ ಹೋಗಿ ದೂರು ನೀಡಲು ಹೋದರೆ ದೂರು ಸ್ವೀಕರಿಸದೆ ಅಲೆದಾಡಿಸುತ್ತಾರೆ ಮತ್ತು ಡೀಲ್ ಮಾಡಿಕೊಳ್ಳುತ್ತಾರೆ ಎಂದು ನೇರವಾಗಿ ಎಸ್ ಬಿ ಕಾನ್ ಸ್ಟೇಬಲ್ ಚೌಕ ತಾಲಿ ವಿರುದ್ಧ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರಿಗೆ ದೂರು ಹೇಳಿದರು.

    ಅದೇ ರೀತಿ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಪೇದೆ ಸದ್ದಂ ಅವರು ಕೂಡ ಮರಳು ದಂಧೆ ಗೌರವ ಜೊತೆ ಶಾಮೀಲಾಗಿ ಮರಳು ದಂಧೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಮರಳು ದಂಧೆಕೋರರಿಗೆ ನೀಡುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಸಮರ್ಪಕವಾಗಿ ತಮ್ಮ ಕರ್ತವ್ಯವನ್ನ ನಿರ್ವಹಿಸುತ್ತಿಲ್ಲ ಎಂದು ಸಭೆಯಲ್ಲಿ ದಲಿತ ಮುಖಂಡರು ಆಕ್ರೋಶದಿಂದ ಹೇಳಿದರು.

    pavagada

    ಪಾವಗಡ ಪಟ್ಟಣದಲ್ಲಿ ಪುಂಡಪೋಕರಿಗಳು ಗಾಂಜಾ ಎಣ್ಣೆ ಸೇರಿದಂತೆ ಮತ್ತಿತರ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ, ಕಾಲೇಜು ಮಕ್ಕಳಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ಬಂಗಾರಪ್ಪ ಆರೋಪಿಸಿದರು.

    ಸಭೆಯಲ್ಲಿ ಡಿವೈಎಸ್ಪಿ ಮಂಜುನಾಥ್ ಮಾತನಾಡುತ್ತಾ, ಇತ್ತೀಚಿಗೆ ನಡೆಯುತ್ತಿರುವ ಕಳ್ಳತನಗಳನ್ನು ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ಪಟ್ಟಣಕ್ಕೆ ಬಂದು ಹೋಗುವಂತಹ ಗಾಡಿಗಳನ್ನು ಪರಿಶೀಲಿಸಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದೇವೆ, ಮುಂದಿನ ತಿಂಗಳು ಅರಸೀಕೆರೆಯಲ್ಲಿ ಎಸ್ಸಿ ಎಸ್ಟಿ ಕೊಂದು ಕೊರತೆ ಸಭೆಯನ್ನು ನಡೆಸುವ ವೇಳೆ ಸ್ವತಃ ನಾನೇ ಬಂದು ಸಮಸ್ಯೆಯನ್ನು ಬಗೆಹರಿಸುತ್ತೇನೆ ಯಾವುದೇ ಸಮಸ್ಯೆಗಳು ಇದ್ದರೆ ಕೂಡಲೇ ಪೊಲೀಸರನ ಸಂಪರ್ಕಿಸಿ ತಮಗೆ ನ್ಯಾಯ ಒದಗಿಸಿಕೊಡುತ್ತಾರೆ ಎಂಬ ಭರವಸೆಯನ್ನು ನೀಡಿದರು.

    ಈ ವೇಳೆ ಸಿಪಿಐ ಸುರೇಶ್, ಪಿಎಸ್ ಐಗಳಾದ ಗುರುನಾಥ್, ವಿಜಯ್ ಕುಮಾರ್, ದಲಿತ ಮುಖಂಡರು ಹಾಗೂ ಪೊಲೀಸರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ಬೆಂಗಳೂರು: ರೂ. 2,000ಕ್ಕಿಂತ ಹೆಚ್ಚಿನ ಯುಪಿಐ (UPI) ವ್ಯಾಪಾರ ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವು ಭಾರತದ…

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026

    ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.