nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ May 20, 2022

    ಸರಗೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

    By adminMay 20, 2022No Comments2 Mins Read
    protest

    ಸರಗೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವಂತೆ, ಹಾಗೂ ಪರಿಶಿಷ್ಟರು, ಹಿಂದುಳಿದವರ ಕಲ್ಯಾಣಕ್ಕಾಗಿ ನ್ಯಾ.ಎಚ್.ಎನ್.ನಾಗಮೋಹನ್‍ದಾ ಸ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ನಾಯಕ ಸಮಾಜದ ಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಪಟ್ಟಣದಲ್ಲಿ ತಾಲ್ಲೂಕಿನ ನಾಯಕ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಮೊದಲ ಮುಖ್ಯರಸ್ತೆ, ಎರಡನೇ ಮುಖ್ಯರಸ್ತೆ ನಂತರ ಸಂತೇಮಾಳದಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಳಿಕ ಬಸ್‍ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.  ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ತಾಹಸೀಲ್ದಾರ್ ಚಲುವರಾಜು ರವರು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.


    Provided by
    Provided by
    Provided by

    ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಬಿಜೆಪಿ ಸರಕಾರ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಂವಿಧಾನ ಬದ್ಧವಾಗಿ ಸರಕಾರ ನೀಡಬೇಕಾಗಿರುವ ಪರಿಶಿಷ್ಟರ ಶೇ.7.5, ಪರಿಶಿಷ್ಟ ಜಾತಿಗೆ ಶೇ.17 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

    ಪಪಂ ಸದಸ್ಯ ನಾಯಕ ಸಂಘ ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ,  ಸರ್ಕಾರ  ಮೀಸಲಾತಿಯನ್ನು ನೀಡದೆ ಜನಾಂಗದವರಿಗೆ ವಂಚಿಸುತ್ತಿದೆ. ಮೀಸಲಾತಿ ಪಡೆಯುವ ಸಲುವಾಗಿ ಸಮಾಜದ ಶ್ರೀಪ್ರಸನಾನಂದ ಸ್ವಾಮೀಜಿಗಳು ನೂರು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ . ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ.  ಆದ್ದರಿಂದ ಅವರ ಹೋರಾಟವನ್ನು ಬೆಂಬಲಿಸಿ ಅವರ ಮಾರ್ಗದರ್ಶನದಂತೆ ರಾಜ್ಯದಾದ್ಯಂತ  ಹೋರಾಟ ಮಾಡುತ್ತಿದ್ದೇವೆ. ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಂವಿಧಾನ ರಕ್ಷಣಾ ಸಮಿತಿಯ ಅಧ್ಯಕ್ಷ ಶಿವಣ್ಣ ಮಾತನಾಡಿ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡಬೇಕಿತ್ತು. ಆದರೆ ಇಂದು ನಾವು ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂಬ ಸ್ಥಿತಿಗೆ ಬಿಜೆಪಿ ಸರ್ಕಾರ ತಂದು ನಿಲ್ಲಿಸಿದೆ ಎಂದರು.

    ಪ್ರತಿಭಟನೆಗೆ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಸಾಥ್ ನೀಡಿದರು. ಜೊತೆಗೆ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಾಥ್ ನೀಡಿದರು.  ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಮಾತನಾಡಿದ ತಹಸೀಲ್ದಾರ್ ಚಲುವರಾಜು, ಶಾಂತಿಯುತವಾಗಿ ಪ್ರತಿಭಟನೆಯನ್ನು ನಡೆಸಿದ್ದೀರಾ?  ನಿಮ್ಮ ಮನವಿಯನ್ನು ನಾನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂಬ ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಅಂಕನಾಯಕ, ಕಾರ್ಯದರ್ಶಿ ಸಿದ್ದರಾಜು, ಸಂವಿಧಾನ ರಕ್ಷಣಾ ಸಮಿತಿಯ ಗ್ರಾಮೀಣಾ ಮಹೇಶ್, ಆದಿ ಜಾಂಬವ ಸಮಿತಿಯ ಕುರ್ಣೇಗಾಲ ಬೆಟ್ಟಸ್ವಾಮಿ, ಗೌರವಾಧ್ಯಕ್ಷ ಬಸವನಾಯಕ, ಖಜಾಂಚಿ ಎಸ್.ಎ.ನಾಗೇಂದ್ರ, ನಿರ್ದೇಶಕರಾದ ಪಾಪಣ್ಣ, ಕುನ್ನಪಟ್ಟಣ ಪಿ.ಬೆಟ್ಟನಾಯಕ, ಕುಮಾರ್, ಸತ್ಯರಾಜ್, ಕಾನೂನು ಸಲಹೆಗಾರ ಶಂಕರ್, ನಾಯಕ ಸಮಾಜದ ಟೌನ್ ಅಧ್ಯಕ್ಷ ಬೆಟ್ಟನಾಯಕ, ಮುಖಂಡರಾದ ಎಚ್.ಎಸ್.ರಮೇಶ್, ಸಿ.ಬಸವರಾಜು, ನಾಯಕ ಸಂಘ ಅಧ್ಯಕ್ಷ ಬಸವರಾಜು ನಾಯಕ ಸಂಘದ ನಿರ್ದೇಶಕ ಮತ್ತು ಸಂವಿಧಾನ ಸಂರಕ್ಷಣಾ ಸಮಿತಿ   ಉಪಾಧ್ಯಕ್ಷ ಸಾಗರೆ ಶಂಕರ್, ಸಂ ಸಂರಕ್ಷಣಾ ಸಮಿತಿ ಅಧ್ಯಕ್ಷ ಸರಗೂರು ಶಿವಣ್ಣ,  ಬಿಡುಗಲು ಶಿವಣ್ಣ, ಮುಖಂಡರು ರಮೇಶ್,  ಚನ್ನೀಪುರ ಮಲ್ಲೇಶ್, ಹಳೆಹೆಗ್ಗುಡಿಲು ಸೋಮಣ್ಣ, ನಾಯಕ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗನಾಯಕ,  ಆದಿಜಾಂಬವ ಸಂಘದ ಅಧ್ಯಕ್ಷ ವೆಂಕಟಪ್ಪ, ದಲಿತ ಮುಖಂಡರು ಕೃಷ್ಣ ಯ್ಯಹೊಸಹೆಗ್ಗುಡಿಲು ಸಿದ್ದರಾಜು., ಗ್ರಾಪಂ ಸದಸ್ಯ ಚಲುವಪ್ಪ, ನವೀನ್ ಕುಮಾರ್ ಸೋಮಣ್ಣ ಸಾಗರೆ ಸಹಿತ  ಗ್ರಾಮದ ವಿವಿಧ ಸಂಘಟನೆ ಮುಖಂಡರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    protest
    admin
    • Website

    Related Posts

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ

    September 19, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.