nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ
    ರಾಜ್ಯ ಸುದ್ದಿ June 22, 2024

    ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ

    By adminJune 22, 2024No Comments2 Mins Read
    presss

    ಆಧುನಿಕ ತಂತ್ರಜ್ಞಾನ ಬಳಸಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆಮಿಷಗಳನ್ನು ಒಡ್ಡಿ ವಂಚನೆ ಮಾಡುತ್ತಿರುವ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಮುಂಜಾಗ್ರತೆ ವಹಿಸುವ ಮೂಲಕ ವಂಚನೆಗೊಳಗಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು.

    ಅವರು ಇಂದು ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.


    Provided by
    Provided by

    ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತ ಸುಶಿಕ್ಷಿತರೇ ಹೆಚ್ಚು ವಂಚನೆಗೊಳಗಾಗುತ್ತಿದ್ದಾರೆ, ದೊಡ್ಡ ಜಾಲವನ್ನು ಹೊಂದಿರುವ ವಂಚಕರ ಜಾಲವು ಇಲ್ಲಸಲ್ಲದ ಆಮಿಷ ಒಡ್ಡಿ ವಿವಿಧ ರೀತಿಯಲ್ಲಿ ವಂಚನೆ ಮಾಡುತ್ತಿದ್ದು, ಯಾರೂ ಕೂಡ ಅಪರಿಚಿತರೊಂದಿಗೆ ತಮ್ಮ ವಯಕ್ತಿಕ ಮಾಹಿತಿಗಳನ್ನು ನೀಡಬಾರದು ಎಂದು ಮನವಿ ಮಾಡಿದರು.

    ಮೂರು ಪ್ರಕರಣಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ವೈರಲ್ ಮಾಡಿ ಬ್ಲಾಕ್‌ಮೇಲ್ ರೂಪದಲ್ಲಿ ವಂಚನೆ ಮಾಡಲಾಗುತ್ತಿದೆ. ಬ್ಯಾಂಕ್ ಹಾಗೂ ಇತರ ವ್ಯವಹಾರಗಳಲ್ಲಿ ವಯಕ್ತಿಕ ಮಾಹಿತಿ ಪಡೆದುಕೊಂಡು ತಂತ್ರಜ್ಞಾನ ಬಳಸಿ ಹಣ ಅಪಹರಿಸುವ ಮೂಲಕ ವಂಚನೆ ಮಾಡಲಾಗುತ್ತಿದೆ, ಡಿಜಿಟಲ್ ಅರೆಸ್ಟ್ ಎಂಬ ಸುಳ್ಳು ಮಾಹಿತಿ ನೀಡಿ ಹಣ ಸುಲಿಗೆ ಮಾಡಲಾಗುತ್ತಿದೆ. ಈ ಬಗ್ಗೆ ನಾಗರಿಕರು ಎಚ್ಚರವಹಿಸಬೇಕಾಗಿದೆ ಎಂದರು.

    2೦೦3ರಲ್ಲಿ ಮಾಹಿತಿ ತಂತ್ರಜ್ಞಾನ ಜಾರಿಗೆ ಬಂದಿದ್ದು, ಅದರ ಆಧಾರದಲ್ಲಿ ರಾಜ್ಯ ಸರ್ಕಾರ ಪ್ರತೀ ಪೊಲೀಸ್ ಠಾಣೆಯಲ್ಲಿ ಇಬ್ಬರಿಗೆ ಸೈಬರ್ ಅಪರಾಧಗಳ ಬಗ್ಗೆ ತರಬೇತಿ ನೀಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಸೈಬರ್ ಅಪರಾಧಕ್ಕಾಗಿಯೇ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಲಾಗಿದ್ದು ಡಿವೈಎಸ್‌ಪಿ ಹಂತದ ಅಧಿಕಾರಿಗೆ ತನಿಖಾಧಿಕಾರಿಯಾಗಿ ನಿಯೋಜಿಸಲಾಗಿದೆ, ಇದೀಗ ಸರ್ಕಾರ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮಟ್ಟದ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

    ಯಾವುದೇ ವ್ಯಕ್ತಿ ಅಥವಾ ಯಾವುದೇ ಸ್ಥಳದಲ್ಲಿ ಸೈಬರ್ ಅಪರಾಧದಲ್ಲಿ ತೊಂದರೆಗೊಳಗಾದವರು ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ಟ್ರೋಲ್‌ಫ್ರೀ ಮೊಬೈಲ್ ಸಂಖ್ಯೆ ೧೯೩೦ ಯನ್ನು ನಿಗಧಿಪಡಿಸಿದ್ದು, ಯಾವುದೇ ಸ್ಥಳದಿಂದ ಈ ಸಂಖ್ಯೆಗೆ ದೂರವಾಣಿ ಕರೆ ಮಾಡಿದರೆ ಎನ್‌ಸಿಸಿಆರ್‌ಪಿ( ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟ್ ಪೋರ್ಟಲ್) ಇಲ್ಲಿಗೆ ಮಾಹಿತಿ ರವಾನೆಯಾಗಿ ಅಲ್ಲಿಂದ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನೆಯಾಗಲಿದೆ ಎಂದು ವಿವರಿಸಿದರು.

    ಈ ಮಾಹಿತಿ ಆಧರಿಸಿ ಆಯಾ ಪೊಲೀಸ್ ಠಾಣೆಗಳಿಂದ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಅಥವಾ ಸಂಬಂಧಪಟ್ಟ ಜಾಲತಾಣ ಸಂಸ್ಥೆಗಳಿಗೆ ಮಾಹಿತಿ ನೀಡಿ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಬಹುದು ಮತ್ತು ವಂಚನೆ ಜಾಲತಾಣಗಳ ಆಪ್‌ಗಳು ಮೊಬೈಲ್ನ ಸಂಖ್ಯೆಗಳನ್ನು ಬ್ಲಾಕ್‌ಮಾಡುವ ಮೂಲಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದೆಂದು ಹೇಳಿದರು.

    ಈ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಸೈಬರ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಗವಿರಾಜ್ ಭಾಗವಹಿಸಿದ್ದರು, ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ತಾರಾನಾಥ್ ಉಪಸ್ಥಿತರಿದ್ದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಆಗುವ ವಿಳಂಬವನ್ನು…

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.