nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ
    ತುಮಕೂರು October 16, 2024

    ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ

    By adminOctober 16, 2024No Comments2 Mins Read
    SCP TSP Scheme

    ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 19ರಂದು ಮಧ್ಯಾಹ್ನ 2:30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ನೇರವಾಗಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು.


    Provided by
    Provided by

    ಸ್ವೀಕೃತ ಅಹವಾಲುಗಳನ್ನು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಸಮಿತಿಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರಲ್ಲದೆ, ಕಳೆದ 2021–22, 2022–23, 2024–24, ಹಾಗೂ 2024ನೇ ಸೆಪ್ಟೆಂಬರ್ ಮಾಹೆವರೆಗಿನ ಸಮರ್ಪಕ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಿರಬೇಕೆಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.