nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗುವಿನ ಸುರಕ್ಷತೆ ನಿರ್ಲಕ್ಷ್ಯಿಸಿದ ಶಾಲಾ ಆಡಳಿತ ಮಂಡಳಿಗೆ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿದ ತಾಯಿ!
    ಸ್ಪೆಷಲ್ ನ್ಯೂಸ್ January 10, 2024

    ಮಗುವಿನ ಸುರಕ್ಷತೆ ನಿರ್ಲಕ್ಷ್ಯಿಸಿದ ಶಾಲಾ ಆಡಳಿತ ಮಂಡಳಿಗೆ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿದ ತಾಯಿ!

    By adminJanuary 10, 2024No Comments2 Mins Read
    law
    • ಶಿವಕುಮಾರ್‌ ಮೇಷ್ಟ್ರುಮನೆ

     

    ತುಮಕೂರು/ಸ್ಪೆಷಲ್‌ ರಿಪೋರ್ಟ್: ತನ್ನ ಮಗುವಿನ ಸುರಕ್ಷತೆಯನ್ನು ನಿರ್ಲಕ್ಷ್ಯಿಸಿ, ಬೇಜವಾಬ್ದಾರಿಯಿಂದ ನಡೆದುಕೊಂಡು ಪ್ರತಿಷ್ಠಿತ ಶಾಲೆಯ ಆಡಳಿತ ಮಂಡಳಿಗೆ ಮಗುವಿನ ತಾಯಿ, ವೃತ್ತಿಯಲ್ಲಿ ವಕೀಲರಾಗಿರುವ ಹೆಚ್‌.ಎನ್‌. ಮಂಜುಳ ಅವರು ಕಾನೂನಿನ ರುಚಿ ತೋರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.


    Provided by
    Provided by

    ಇದು ಅಂತಿಂಥ ನಿರ್ಲಕ್ಷ್ಯ ಅಲ್ಲ, ಪ್ರತಿದಿನವೂ ಒಂದೊಂದು ವಿಚಾರದಲ್ಲಿ ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವಂತಹ ಸಂದರ್ಭವನ್ನು ಶಾಲಾ ಆಡಳಿತ ಮಂಡಳಿ ಸೃಷ್ಟಿಸುತ್ತಿದ್ದು, ಇದರಿಂದಾಗಿ ರೋಸಿಹೋದ ಮಗುವಿನ ತಾಯಿ ಶಾಲಾ ಆಡಳಿತ ಮಂಡಳಿಗೆ ತಾಯಿ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿದ್ದಾರೆ.

    ವೃತ್ತಿಯಲ್ಲಿ ವಕೀಲರಾಗಿರುವ ಹೆಚ್‌.ಎನ್‌. ಮಂಜುಳ ಅವರು ತಮ್ಮ ಮಗ ತುಷಾರ್‌ ಸಿಂಹನನ್ನು “ಚೈತನ್ಯ ಟೆಕ್ನೋ ಸ್ಕೂಲ್‌” ಗೆ 1ನೇ ತರಗತಿಗೆ ದಾಖಲಿಸುತ್ತಾರೆ. ಶಾಲೆಯು ತನ್ನ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತದೆ ಎಂದು ಅವರು ಬಲವಾಗಿ ನಂಬಿದ್ದರು.  ಹೀಗಾಗಿ 10 ಸಾವಿರ ರೂಪಾಯಿಗಳನ್ನು ಪಾವತಿಸಿ ಶಾಲೆಗೆ ದಾಖಲು ಮಾಡಿದ್ದರು.

    ಶಾಲೆಯ ಆವರಣದ ಹೊರಗಿದ್ದ ಮಗು!

    ಶಾಲೆ ಆರಂಭವಾದಾಗ ಮಗುವನ್ನು ಶಾಲಾ ಸಮಯಕ್ಕೆ ಶಾಲೆಯಲ್ಲಿ ಬಿಟ್ಟು, ಮಧ್ಯಾಹ್ನ 12 ಗಂಟೆಗೆ ಕರೆದುಕೊಂಡು ಹೋಗುವಂತೆ ಶಾಲಾ ಮುಖ್ಯಸ್ಥರು ತಿಳಿಸಿದ್ದರು. ಅದರಂತೆ ಮಂಜುಳ ಅವರು ಮಗುವನ್ನು ಕರೆದುಕೊಂಡು ಬರಲು ಶಾಲೆಗೆ ತೆರಳಿದಾಗ ಅವರಿಗೆ ಅಲ್ಲಿ ಆಘಾತ ಕಾದಿತ್ತು. ಮಗು ಶಾಲೆಯ ಆವರಣದ ಹೊರಗಡೆ ಯಾವುದೇ ರಕ್ಷಣೆ ಇಲ್ಲದಂತೆ ನಿಂತಿತ್ತು. ಇದನ್ನು ನೋಡಿ ಕಂಗಾಲಾದ ಅವರು ಕೂಡಲೇ ಶಾಲಾ ಸಿಬ್ಬಂದಿ ವರ್ಗವನ್ನು ವಿಚಾರಿಸಲು ನೋಡಿದಾಗ, ಅಲ್ಲಿ ಯಾರೂ ಸಹ ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ… ಶಾಲಾ ಮುಖ್ಯಸ್ಥರು ಕೂಡ ಆ ಸಮಯದಲ್ಲಿ ಅಲ್ಲಿ ಇರಲಿಲ್ಲ. ನಂತರ ಮಗುವನ್ನು ಮನೆಗೆ ಕರೆದುಕೊಂಡು ಬಂದರು.

    2ನೇ ದಿನ ಮಗು ಯಾಕೆ ಬಂದಿಲ್ಲ ಅಂತ ಕೇಳಿದ್ರು?

    2ನೇ ದಿನ ಮಂಜುಳ ಅವರು ಮಧ್ಯಾಹ್ನ ಮಗುವನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬಂದರು. ಮನೆಗೆ ಬಂದು ಸ್ವಲ್ಪ ಹೊತ್ತಿನಲ್ಲೇ ಅವರಿಗೆ ಶಾಲೆಯ ಸಿಬ್ಬಂದಿಯೊಬ್ಬರು ಕರೆ ಮಾಡಿ, “ನಿಮ್ಮ ಮಗು ಈ ದಿನ ಯಾಕೆ ಶಾಲೆಗೆ ಬಂದಿಲ್ಲ” ಎಂದು ಪ್ರಶ್ನಿಸಿದ್ದಾರೆ. ಸಿಬ್ಬಂದಿಯ ಪ್ರಶ್ನೆಯಿಂದ ಮಂಜುಳ ಅವರು ಅಚ್ಚರಿಗೀಡಾಗಿದ್ದಾರೆ. ಅಲ್ಲದೇ ಸಿಬ್ಬಂದಿಯ ಬೇಜವಾಬ್ದಾರಿಯ ಬಗ್ಗೆ ಅವರು ಪ್ರಶ್ನಿಸಿ, “ನಿಮ್ಮ ಬೇಜವಾಬ್ದಾರಿತನ ಎಷ್ಟಿದೆ,  ನಾನು ಈಗ ತಾನೆ ಮಗುವನ್ನು ಶಾಲೆಯಿಂದ ಕರೆದುಕೊಂಡು ಬಂದಿದ್ದೇನೆ. ನೀವು ಹೀಗೆನಾ ನಮ್ಮ ಮಕ್ಕಳನ್ನು ರಕ್ಷಣೆ ಮಾಡೋದು” ಎಂದು ಪ್ರಶ್ನಿಸಿದ್ದಾರೆ.

    3ನೇ ದಿನ ಶಾಲೆಯಲ್ಲಿ ಮಗುವೇ ಇಲ್ಲ!

    ಮೂರನೇ ದಿನ ಮಗುವನ್ನು ಕರೆದುಕೊಂಡು ಹೋಗಲು ತಾಯಿ ಮಂಜುಳ ಅವರು ತೆರಳಿದಾಗ ಅಲ್ಲಿ ತಮ್ಮ ಮಗುವೇ ಇರಲಿಲ್ಲ. ಇದರಿಂದ ತೀವ್ರ ಆತಂಕಕ್ಕೊಳಗಾದ ಅವರು ಮಗು ಎಲ್ಲಿ ಎಂದು ವಿಚಾರಿಸಿದಾಗ, ಮಗುವಿನ ಬಗ್ಗೆ ಯಾರೂ ಸಹ ಉತ್ತರ ನೀಡಲು ತಯಾರಿರಲಿಲ್ಲ, ಇದಾದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಮಗುವನ್ನು ಬೇರೊಂದು ರೂಟ್‌ ನ ವಾಹನಕ್ಕೆ ಹತ್ತಿಸಿ ಕಳುಹಿಸಲಾಗಿದೆ ಎಂದು ಇನ್ನೊಬ್ಬ ಸಿಬ್ಬಂದಿ ಬಂದು ಹೇಳಿದ್ದಾರೆ.

    ನಂತರ ಸುಮಾರು 30 ನಿಮಿಷಗಳ ಕಾಲ ಸ್ಥಳದಲ್ಲಿ ಕಾಯುವಂತೆ ಮಾಡಿದ ಸಿಬ್ಬಂದಿ ಬಳಿಕ ಮಗುವನ್ನು ಕರೆತಂದು ಬಿಟ್ಟಿದ್ದಾರೆ.  ಇದರ ಬಗ್ಗೆ ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಾಗ, “ಇಲ್ಲಿ ಅತೀ ಹೆಚ್ಚು ಮಕ್ಕಳು ಇರೋದರಿಂದಾಗಿ ಇಂತಹ ಅವಘಡಗಳು ಇಲ್ಲಿ ಆಗಿಂದಾಗ್ಗೆ ಸಂಭವಿಸುತ್ತಿರುತ್ತವೆ”  ಎಂದು ಬೇಜವಾಬ್ದಾರಿಯಿಂದ ಉತ್ತರಿಸಿದ್ದಾರೆ.

    ಕಾನೂನು ಸಮರಕ್ಕಿಳಿದ ತಾಯಿ!

    ಶಾಲಾ ಆಡಳಿತ ಮಂಡಳಿಯ ಬೇಜವಾಬ್ದಾರಿಯ ನಡೆಯಿಂದ ರೋಸಿಹೋದ ತಾಯಿ ಮಂಜುಳ ಕಾನೂನು ಹೋರಾಟಕ್ಕೆ ತೀರ್ಮಾನಿಸಿದರು. ಅಂತೆಯೇ, ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದ್ದು, ತನಗಾದ ಅನ್ಯಾಯಕ್ಕೆ ಪರಿಹಾರ ಹಾಗೂ ತಾನು ಕಟ್ಟಿದ ಶುಲ್ಕವನ್ನು ಪಾವಸ್‌ ಕೊಡಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದರು.

    ಈ ಬಗ್ಗೆ ಗ್ರಾಹಕರ ನ್ಯಾಯಾಲಯವು  ವಿಚಾರಣೆಯನ್ನು ನಡೆಸಿ, ದೂರುದಾರರು ಸಲ್ಲಿಸಿದ್ದ ಶುಲ್ಕವನ್ನು ವಾಪಸ್‌ ಕೊಡುವಂತೆ, ಹಾಗೂ ಪರಿಹಾರವಾಗಿ  8 ಸಾವಿರ ರೂಪಾಯಿ ಹಾಗೂ  ವ್ಯಾಜ್ಯ ಪರಿಹಾರ ಶುಲ್ಕವಾಗಿ 8 ಸಾವಿರ ರೂ.ಗಳನ್ನು  ನೀಡುವಂತೆ ಆದೇಶಿಸಿದೆ.  ಒಂದು ವೇಳೆ ಪರಿಹಾರವನ್ನು 45 ದಿನಗಳೊಳಗಾಗಿ ನೀಡದೇ, ಆದೇಶವನ್ನು ಪಾಲಿಸದೇ ಇದ್ದಲ್ಲಿ ದಿನಕ್ಕೆ 100 ರೂಪಾಯಿಯಂತೆ ದಂಡ ಪಾವತಿಸಬೇಕೆಂದು ಆದೇಶ ಮಾಡಿರುತ್ತದೆ.

    ದೂರುದಾರರ ಪರವಾಗಿ ವಕೀಲರಾದ ಎಂ.ಎಸ್.ಗಣೇಶ್‌, ಆರ್‌.ತಿಪ್ಪೆಸ್ವಾಮಿ, ಶಿವಕುಮಾರ್‌ ಮೇಷ್ಟ್ರುಮನೆ ವಾದ ಮಂಡಿಸಿದರು.

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.