ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಪಾವಗಡ ಇದರ ವತಿಯಿಂದ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೋಟಗುಡ್ಡ ಸಹನಾ ಶಾಲೆಯ P. ಗೀತಾ ಲಕ್ಷ್ಮಿ ಹಾಗೂ ತನುಜಾ ಶ್ರೀ. E ಇವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತರನ್ನು ಹಾಗೂ ಮಾರ್ಗದರ್ಶಿ ಶಿಕ್ಷಕರಾದ ತಿಪ್ಪೇಸ್ವಾಮಿ ರವರನ್ನು ECO ರಂಗನಾಥ್, ವಿಜ್ಞಾನ ಸಂಘದ ಕಟ್ಟಾ ನರಸಿಂಹ ಮೂರ್ತಿ, ಹನುಮಂತರೆಡ್ಡಿ ಹಾಗೂ ಸಹನಾ ಶಾಲಾ ಆಡಳಿತ ಅಧಿಕಾರಿಗಳಾದ ಎನ್. ಶ್ರೀನಿವಾಸ್ ರವರು ಅಭಿನಂದಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q