ತುಮಕೂರು: ಇಲ್ಲಿನ ವಿದ್ಯಾನಗರದಲ್ಲಿ ವಿದ್ಯಾನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಜ್ಞಾನಿ ಶ್ರೇಷ್ಠ ಡಾ.ಸಿ. ದುರ್ಗಾ ಪ್ರಸಾದ್ ರವರನ್ನು ಸನ್ಮಾನಿಸಲಾಯಿತು.
ವಿದ್ಯಾನಗರದ ನಿವಾಸಿಯೂ ಆಗಿರುವ ವಿಜ್ಞಾನಿ ದುರ್ಗಾ ಪ್ರಸಾದ್ ರವರು ವಿಶ್ವದ ಪ್ರತಿ ಶತ ಎರಡು ರ್ಸೇಂಟ್ ಶ್ರೇಷ್ಠ ವಿಜ್ಞಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರಿಂದ ಅವರನ್ನು ನಾಗದೇವತಾ ಪ್ರತಿಷ್ಠಾಪನಾ ರಜತ ಮಹೋತ್ಸವದ ಸಮಾರಂಭದಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆಡಿಟರ್ ಟಿ.ಆರ್.ಅಂಜನಪ್ಪರವರು ವಹಿಸಿದ್ದರು. ಪಾಲಿಕೆಯ ಮಾಜಿ ಸದಸ್ಯರುಗಳಾದ ಲಲಿತಾ ರವೀಶ್, ಶ್ರೀನಿವಾಸಮೂರ್ತಿ ಸೇರಿದಂತೆ ಬಡಾವಣೆಯ ಪ್ರಮುಖರು, ಸಂಘದ ಉಪಾಧ್ಯಕ್ಷರಾದ ವಾಸುದೇವ ತವಳ, ಕಾರ್ಯದರ್ಶಿ ನಿವೃತ್ತ ಪ್ರಾಚಾರ್ಯ ಕುಮಾರಸ್ವಾಮಿ, ಖಜಾಂಚಿ ಜಿ.ವಿ. ಲಕ್ಷ್ಮೀನರಸಿಂಹಯ್ಯ, ನಿರ್ದೇಶಕರಾದ ಗಂಗಾಧರಮೂರ್ತಿ, ವಿದ್ಯುತ್ ಗುತ್ತಿಗೆದಾರ ಯೋಗೀಶ್, ಕಲಾವಿದರೂ ಹಾಗೂ ನಿವೃತ್ತ ಬ್ಯಾಂಕ್ ನೌಕರರಾದ ಚಿಕ್ಕಹನುಮಂತಯ್ಯ, ಹೆಚ್ಎಂಟಿ ನಂಜುಂಡಪ್ಪ, ರವೀಶ್ ಮತ್ತಿತರರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮುನ್ನ ಆಗಮಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಯವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx