ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿಯ ಚನ್ನಕೇಶವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ. ಎಸ್. ಡಿ.ಎಂ.ಸಿ.ಕಾರ್ಯಾಗಾರ ತರಬೇತಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ.ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಹಾಗೂ ಮುಖ್ಯ ಶಿಕ್ಷಕ ವಿಶ್ವೇಶ್ವರಯ್ಯ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಮಾತನಾಡಿ, ಎಸ್ .ಡಿ.ಎಂ.ಸಿ ಕಾರ್ಯಾಗಾರ ತರಬೇತಿ ಮೂರನೇ ಸಭೆ ಹಮ್ಮಿಕೊಂಡಿದ್ದೇವೆ. ಕಾರ್ಯಾಗಾರವಾದರೆ, ಒಂದು ದಿನ ಮುಂಚಿತವಾಗಿ ನಮ್ಮ ಸದಸ್ಯರಿಗೆ ಮಾಹಿತಿ ತಿಳಿಸಬೇಕು. ಯಾಕೆಂದರೆ ಇಲ್ಲಿನ ಜನರು ಕೂಲಿನಾಲಿ ಮಾಡಿಕೊಂಡು ಜೀವನ ನಡೆಸಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಾರೆ ಅಂತದರಲ್ಲಿ ನಮಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಭೆ ನಡೆಸುವುದಕ್ಕೆ ಕಷ್ಟವಾಗುತ್ತದೆ. ಈ ಶಾಲೆಗೆ ಯಾರು ಶ್ರೀಮಂತರ ಮಕ್ಕಳು ಬರುವುದಿಲ್ಲ ಇಲ್ಲಿಗೆ ಎಲ್ಲಾ ಬಡವರ ಮಕ್ಕಳು ಬರುತ್ತಾರೆ ಎಂದರು.
ದೈಹಿಕ ಶಿಕ್ಷಕ ಲಕ್ಷ್ಮಿನಾರಾಯಣ್ ಸ್ವಾಗತ ಭಾಷಣ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ಸಹ ಶಿಕ್ಷಕರು ಶ್ರೀನಿವಾಸ್, ಪೃಥ್ವಿರಾಜ್, ಊರಿನ ಗ್ರಾಮಸ್ಥ ರಾಮಕೃಷ್ಣಪ್ಪ, ಹಾಗೂ ಎಷ್ಟು ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB