ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ರಾಜ್ಯಶಾಸ್ತ್ರ ವಿಷಯದಲ್ಲಿ 630 ಹಾಗೂ ಸಂಖ್ಯಾಶಾಸ್ತ್ರ ವಿಷಯದಲ್ಲಿ 14 ವಿದ್ಯಾರ್ಥಿಗಳು ಸೇರಿ ಒಟ್ಟು 644 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ.
ರಾಜ್ಯ ಶಾಸ್ತ್ರ ವಿಷಯಕ್ಕೆ ಒಟ್ಟು 5,465 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 4,835 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ ಸಂಖ್ಯಾಶಾಸ್ತ್ರ ವಿಷಯಕ್ಕೆ ಒಟ್ಟು 926 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 912 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4