ಕೊರಟಗೆರೆ: ತಾಲ್ಲೂಕಿನಲ್ಲಿ ನಿನ್ನೆ ಸುರಿದ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನಿಂದ ಸಿರಾ ತಾಲ್ಲೂಕಿನ ಕಸಬಾ ಹೋಬಳಿ ಮೇಲುಕೋಟೆ ಗ್ರಾಮ ಪಂಚಾಯಿತಿಯ ಗೊಲ್ಲರಹಟ್ಟಿ ಗ್ರಾಮದ ಕುರಿಗಾಯಿ ಗಂಗಮ್ಮ ಈರಣ್ಣ ಅವರಿಗೆ ಸೇರಿದ 11 ಕುರಿ 1ಮೇಕೆ ಹಾಗೂ 1ಟಗರು ಸಿಡಿಲಿಗೆ ಬಲಿಯಾಗಿವೆ.
ವಿಷಯ ತಿಳಿದ ಕೊರಟಗೆರೆಯ ತಹಶೀಲ್ದಾರ್ ನಹಿದಾ ಜಮ್ ಜಮ್ ಹಾಗೂ ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತಕ್ಷಣ ಸ್ಥಳೀಯ ಶಾಸಕರ ಗಮನಕ್ಕೆ ತಂದು ಅವರ ಅನುಪಸ್ಥಿತಿಯಲ್ಲಿ ಕುರಿಗಾಹಿಗಳಿಗೆ 39ಸಾವಿರದ ಚೆಕ್ಕನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಜನಸ್ನೇಹಿ ಅಧಿಕಾರಿಗಳು ಇರುವವರೆಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದ್ದು, ಜನಸ್ನೇಹಿ ತಹಶೀಲ್ದಾರ್ ನಹಿದಾ ಜಮ್ ಜಮ್ ಅವರ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.