ತುಮಕೂರು: ಬೆಳಗ್ಗೆ ಎಳನೀರು ಮಾರಾಟ, ರಾತ್ರಿ ದ್ವಿಚಕ್ರವಾಹನಗಳ ಕಳ್ಳತನದ ಕಳ್ಳಾಟ ನಡೆಸಿರೋ ಘಟನೆ ತುಮಕೂರಲ್ಲಿ ನಡೆದಿದೆ.
ತುಮಕೂರಿನಲ್ಲಿ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, 4.6 ಲಕ್ಷ ರೂ ಮೌಲ್ಯದ ದ್ವಿಚಕ್ರವಾಹನಗಳನ್ನು ಪೊಲೀಸ್ ರು ವಶಕ್ಕೆ ಪಡಿಸಿಕೊಂಡಿದ್ದಾರೆ.
ತುಮಕೂರು ತಾಲೂಕು ನಾಗವಲ್ಲಿಯ ಗಂಗರಾಜು ಎಂಬವರ ಹೋಂಡಾ ಶೈನ್ ಬೈಕ್ ಕದ್ದಿದ್ದ ಬೈಕ್ ಕಳ್ಳರು ಸಿಕ್ಕಿ ಬಿದ್ದಿದ್ದು, ಎನ್ ಆರ್ ಕಾಲೋನಿಯ ಸುದೀಪ್ (24 ), ರಾಮಮೂರ್ತಿ ಹಾಗೂ ಕಂಬತ್ತನಳ್ಳಿಯ ರಂಗನಾಥ್ ಎಂಬವ ಮೂವರನ್ನು ಹೆಬ್ಬೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ತುಮಕೂರು ಜಿಲ್ಲೆಯ ಹೆಬ್ಬೂರು ಪೊಲೀಸ್ ಠಾಣೆಯ 1, ಕ್ಯಾತಸಂದ್ರ ಪೊಲೀಸ್ ಠಾಣೆಯ 1, ಜಯನಗರ ಪೊಲೀಸ್ ಠಾಣೆಯ 1, ತಿಲಕ್ ಪಾರ್ಕ್ ಪೊಲೀಸ್ ಠಾಣೆಯ 1. ಹೊಸ ಬಡಾವಣೆ ಪೊಲೀಸ್ ಠಾಣೆಯ 1 ಹಾಗೂ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ಸುದೀಪ್ ಮತ್ತು ರಂಗನಾಥ ವಿರುದ್ಧ ತುಮಕೂರು ನಗರ, ಗ್ರಾಮಾಂತರ ಹಾಗೂ ಹೊಸಬಡಾವಣೆ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ದಾಖಲಾಗಿದೆ.
ಅರೋಪಿ ಎ2 ರಂಗನಾಥ ಮತ್ತು ಎ3 ರಾಮಮೂರ್ತಿ ವಿರುದ್ಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296