ದಿ ವೀಕ್ ನಿಯತಕಾಲಿಕೆ ಮತ್ತು ಮಲಯಾಳ ಮನೋರಮಾ ದೈನಿಕದ ದೆಹಲಿ ರೆಸಿಡೆಂಟ್ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
68 ವರ್ಷದ ಅವರು ಇತ್ತೀಚೆಗೆ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ವೆಂಟಿಲೇಟರ್ನಲ್ಲಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.