nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವರ್ ಸಮಸ್ಯೆ, ಪಡಿತರ ರೇಷನ್ ಗಾಗಿ ರಾತ್ರಿಯಿಡೀ ಕಾದು ಕುಳಿತ ಸಾರ್ವಜನಿಕರು
    ಕೊರಟಗೆರೆ October 23, 2024

    ಸರ್ವರ್ ಸಮಸ್ಯೆ, ಪಡಿತರ ರೇಷನ್ ಗಾಗಿ ರಾತ್ರಿಯಿಡೀ ಕಾದು ಕುಳಿತ ಸಾರ್ವಜನಿಕರು

    By adminOctober 23, 2024No Comments3 Mins Read
    koratagere (1)

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ ಈ ತಿಂಗಳು ವ್ಯತ್ಯಯವಾಗುವ ಸಾಧ್ಯತೆ ಕಂಡು ಬರುತ್ತಿತ್ತು, ಸರ್ವರ್ ಸಮಸ್ಯೆಯಿಂದ ಜನತೆ ಬೆಳಿಗ್ಗೆಯಿಂದ ರಾತ್ರಿವರೆಗೂ ನ್ಯಾಯಬೆಲೆ ಅಂಗಡಿಗಳ ಮುಂದೆ ರೇಷನ್ ಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯವಸ್ಥೆಯ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ.


    Provided by
    Provided by

    ಕೊರಟಗೆರೆ ತಾಲೂಕಿನಲ್ಲಿ 85 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರತಿ ತಿಂಗಳು 5 ನೇ ತಾರೀಖಿನಿಂದ ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರಿ ಗೋಡನ್ ಗಳಿಂದ ರೇಷನ್ ಸರಬರಾಜು ಆದರೆ, 30ನೇ ತಾರೀಕಿನ ಒಳಗೆ ವಿತರಣೆಯಾಗುತ್ತಿತ್ತು. ಆದರೆ ಈ ಬಾರಿ ಸರ್ವರ್ ಸಮಸ್ಯೆಯಿಂದ ಎರಡು ಮೂರು ದಿನಗಳಿಂದ ಬಿಪಿಎಲ್ ಕಾರ್ಡುದಾರರು ನ್ಯಾಯಬೆಲೆ ಅಂಗಡಿಯ ಮುಂಭಾಗ ಕುಳಿತು ಸರ್ವರ್ ಸಮಸ್ಯೆಯಿಂದ ಹಿಂತಿರುಗಿ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿ ವ್ಯವಸ್ಥೆಯ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

    ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಂದರೆ ಬಡತನ ರೇಖೆಗಿಂತ ಕೆಳಗಿನವರಿಗೆ (ಬಿಪಿಎಲ್ ಕಾರ್ಡುದಾರರು) ಈ ಸಲ ಸಮಯಕ್ಕೆ ಪಡಿತರ ದೊರೆಯುವುದು ಸಂದೇಹ, 5 ಕೆ.ಜಿ. ನಂತರ ಮತ್ತೈದು ಕೆಜಿ ಗಳಿಗೆ ಇದುವರೆಗೆ ಅಕ್ಕಿ ಬದಲು ನೇರ ನಗದು ಯೋಜನೆ ಪ್ರಕಾರ, ಖಾತೆಗೆ ನೇರ ಹಣ ಜಮೆ ಮಾಡುತ್ತಿರುವಾಗಲೂ ಸಮಯಕ್ಕೆ ಅದನ್ನು ಜಮೆ ಮಾಡದೆ ಸಮಸ್ಯೆ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈಗ ಪಡಿತರ ವಿತರಣೆಯಲ್ಲೂ ಅಸಡ್ಡೆ ತೋರಿದಂತೆ ಕಾಣತೊಡಗಿದೆ ಎಂದು ಬಿಪಿಎಲ್ ಕಾರ್ಡುದಾರರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ಅನ್ನಭಾಗ್ಯದ ಫಲಾನುಭವಿಗಳಿಗೆ ಈ ಬಾರಿ ಪಡಿತರ ವಿತರಣೆ ತಡವಾಗಲಿದೆ. ಬಿಪಿಎಲ್ ಕಾರ್ಡುದಾರರಿಗೆ ಅನ್ನಭಾಗ್ಯ ಯೋಜನೆ ಪ್ರಕಾರ ಪ್ರತಿಯೊಬ್ಬರಿಗೆ ಹೆಚ್ಚುವರಿ 5 ಕಿಲೋ ಅಕ್ಕಿ ನೀಡುವ ಬದಲು ನಗದು ಹಣ ಒದಗಿಸುವ ಪ್ರಕ್ರಿಯೆ ಪ್ರತಿ ತಿಂಗಳು ವಿಳಂಬವಾಗುವುದು ಸರ್ವೆ ಸಾಮಾನ್ಯವಾಗಿದ್ದು, ಈ ತಿಂಗಳು ಎಲ್ಲ ಕಾರ್ಡುದಾರರಿಗೂ ನಿಗದಿತ ಪಡಿತರ ವಿತರಣೆಯೇ ವಿಳಂಬವಾಗುವ ಸಾಧ್ಯತೆ ಇದೆ, ಇದಕ್ಕೆ ಸರ್ವರ್ ಸಮಸ್ಯೆ ಕಾರಣವಾಗಿದ್ದು, ಇಲಾಖೆಯ ಕೆಲವೊಂದು ಸಮಸ್ಯೆಗಳಿಂದ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ, ಇವೆಲ್ಲಾ ಸಮಸ್ಯೆಗಳಿಂದ ಪಡಿತರ ಅಂಗಡಿಗಳಲ್ಲಿ ಬೆಳಗ್ಗೆ 8 ರಿಂದ ರಾತ್ರಿ 10 ಗಂಟೆ ವರೆಗೆ ಪಡಿತರ ವಿತರಣೆ ಮಾಡಲು ಆಹಾರ ಇಲಾಖೆ ಪಡಿತರ ವಿತರಕರಿಗೆ ಸೂಚನೆ ನೀಡಿದೆ. ರಜಾ ದಿನಗಳಲ್ಲೂ ಪಡಿತರ ವಿತರಣೆ ಇರಲಿದೆ ಎಂದು ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

    ಸರ್ವರ್ ಸಮಸ್ಯೆ ನಿರ್ವಹಣೆಗೆ ಹೊಸ ವ್ಯವಸ್ಥೆಗೆ ಮುಂದಾದ ಇಲಾಖೆ:

    ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ತನ್ನ ಗಣಕಯಂತ್ರ ವ್ಯವಸ್ಥೆಯ ಸರ್ವರ್ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವ ಕಾರಣ ಈ ತಿಂಗಳು ರಾಜ್ಯದಲ್ಲಿ ಪಡಿತರ ವಿತರಣೆ ವಿಳಂಬವಾಗಲಿದೆ ಈಗಾಗಲೇ ತಿಂಗಳ ಕೊನೆಗೆ ಬಂದಿದ್ದು, ಇನ್ನೂ ಶೇಕಡ 5 ಕಾರ್ಡುದಾರರಿಗೂ ಪಡಿತರ ವಿತರಣೆಯಾಗಿಲ್ಲ, ಅಕ್ಟೋಬರ್ 31ರೊಳಗೆ ಪಡಿತರವನ್ನು ಎಲ್ಲ ಕಾರ್ಡುದಾರರಿಗೆ ಹಂಚಿಕೆ ಮಾಡುವ ದೊಡ್ಡ ಸವಾಲಿನ ಕೆಲಸ ಬಾಕಿ ಇದೆ ಎಂದು ನ್ಯಾಯ ಬೆಲೆ ಅಂಗಡಿ ಮಾಲೀಕರು ಗೊಣಗಾಡುವುದು ಸರ್ವೇಸಾಮಾನ್ಯವಾಗಿದೆ.

    ರಾತ್ರಿ 10 ಗಂಟೆ ವರೆಗೆ ಕಾದ ರೇಷನ್ ಕಾರ್ಡ್ ಪಡಿತರದಾರರು

    ರೇಷನ್ ಸಮಸ್ಯ ನಡುವೆ ನ್ಯಾಯ ಬೆಲೆ ಅಂಗಡಿಗಳ ಮುಂಭಾಗ ರೇಷನ್ ಗಾಗಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರು ಬೆಳಗ್ಗೆಯಿಂದ ಊಟ ತಿಂಡಿ ಬಿಟ್ಟು ರಾತ್ರಿ ಹತ್ತು ಗಂಟೆವರೆಗೂ ತಮ್ಮ ರೇಷನ್ ಗಾಗಿ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಕಾದು ಕುಳಿತ ರೇಷನ್ ದಾರರು ರಾತ್ರಿ 10 ಗಂಟೆಯಾದರೂ ಸರ್ವರ್ ಸಮಸ್ಯೆಯಿಂದ ಎಲ್ಲರಿಗೂ ವಿತರಣೆ ಯಾಗದಿದ್ರು, ನ್ಯಾಯಬೆಲೆ ಅಂಗಡಿ ಮುಂಭಾಗ ಬಿಟ್ಟು ಕದಲದೆ ಚಾಪೆ ಹಾಕಿಕೊಂಡು ಇಲ್ಲೇ ಮಲಗುತ್ತಿವೆ ಎನ್ನುವ ಪರಿಸ್ಥಿತಿಯಲ್ಲಿ ವಾತಾವರಣ ನಿರ್ಮಾಣವಾಗಿ ನ್ಯಾಯ ಬೆಲೆ ಅಂಗಡಿ ಮಾಲೀಕರುಗಳು ರೇಷನ್ ಕಾರ್ಡದಾರರನ್ನು ಒಲೈಸುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ.

    ಪಡಿತರ ವಿತರಣೆಯ ಪ್ರಕ್ರಿಯೆ ಹಾಗೂ ಸಮಸ್ಯೆ ಬಗ್ಗೆ ವಿವರಣೆ

    ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡುವಾಗ ಅವರು ಪ್ರತಿಕಾರ್ಡುದಾರರ ಹೆಬ್ಬೆಟ್ಟಿನ ಗುರುತು ಪಡೆದು ಅದು ದೃಢೀಕರಣವಾದ ಬಳಿಕ ಪಡಿತರ ವಿತರಣೆ ಮಾಡುವುದು ವಾಡಿಕೆ, ಇದು ಒಂದು ನಿಮಿಷದಲ್ಲಿ ಮುಗಿಯುವ ಪ್ರಕ್ರಿಯೆ, ಈಗ ಇದೇ ಪ್ರಕ್ರಿಯೆಗೆ 20–30 ನಿಮಿಷ ಬೇಕಾಗಿದೆ, ಸರ್ವರ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದೇ ಇದಕ್ಕೆ ಕಾರಣ. ಹೀಗಾಗಿ ಪಡಿತರ ಪಡೆಯಲು ಸರದಿ ನಿಲ್ಲುವ ಕಾರ್ಡುದಾರರ ಸಂಖ್ಯೆ ಹೆಚ್ಚಾಗಿದೆ, ಈ ದಿನಾಂಕದ ಸಮಯಕ್ಕೆ ಪ್ರತಿ ತಿಂಗಳು ಶೇಕಡ 60 ರಿಂದ 75 % ವಿತರಣೆಯಾಗುತ್ತಿದ್ದಿದ್ದು ಸಾಮಾನ್ಯವಾಗಿದ್ದು ಈಗ ಶೇಕಡ 5 ಪರ್ಸೆಂಟ್ ಸಹ ಮುಕ್ತಾಯವಾಗದಿರುವುದು ನ್ಯಾಯಬೆಲೆ ಅಂಗಡಿ ಅಲ್ಲದೆ ರೇಷನ್ ದಾರರಿಗೂ ದೊಡ್ಡ ಸಮಸ್ಯೆಯಾಗಿ ತಲೆ ನೋವಾಗಿ ಪರಿಣಮಿಸಿದೆ.

    ಇದು ಇಡೀ ರಾಜ್ಯದ ಸಮಸ್ಯೆ:

    ನ್ಯಾಯ ಬೆಲೆ ಅಂಗಡಿಗಳ ಸರ್ವರ್ ಸಮಸ್ಯೆ ಇಡೀ ರಾಜ್ಯದಲ್ಲಿ ತಲೆದೂರಿದ್ದು ಇಡೀ ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದ ಈ ತಿಂಗಳು ಬಿಪಿಎಲ್ ರೇಷನ್ ದಾರರ ಜೊತೆಗೆ ಮಾಲೀಕರು ಸಹ ಸಮಸ್ಯೆಯಿಂದ ಪರಿತಪಿಸುತ್ತಿದ್ದು, ಒಂದು ರೇಷನ್ ಕಾರ್ಡ್ ಹೆಬ್ಬೆಟ್ಟಿನ ಗುರುತು ಪಡೆಯಲು ಲ್ಯಾಪ್ಟಾಪ್ ಹಾಗೂ ಕಂಪ್ಯೂಟರ್ ಗಳ ಮುಂದೆ ಅರ್ಧ ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಸುತ್ತುತ್ತಿರುವುದನ್ನೇ ನೋಡಲು ತಲೆ ನೋವಾಗಿ ಪ್ರಣಮಿಸಿದ್ದು ಈ ಸಮಸ್ಯೆಯಿಂದ ಯಾವಾಗ ಹೊರಬರುತ್ತೇವೆ ಎಂದು ಗೊಣಕಾಡುವಂತಾಗಿದೆ.

    ರಾಷ್ಟ್ರೀಯ ದತ್ತಾಂಶದಿಂದ ರಾಜ್ಯದತ್ತಾಂಶಕ್ಕೆ ಬದಲು:

    ಆಹಾರ ಇಲಾಖೆಯ ಸಿಸ್ಟಮ್ ಗಳ ನಿರ್ವಹಣಾ ವ್ಯವಸ್ಥೆಯನ್ನು ರಾಷ್ಟ್ರೀಯ ದತ್ತಾಂಶ ಕೇಂದ್ರ ನೋಡುತ್ತಿತ್ತು, ಅದನ್ನು ಈಗ ರಾಜ್ಯ ದತ್ತಾಂಶ ಕೇಂದ್ರಕ್ಕೆ ವರ್ಗಾವಣೆ ಮಾಡುತ್ತಿದ್ದು, ಇದಕ್ಕೆ ಸಮಯ ಹಿಡಿಯುತ್ತದೆ. ಹೀಗಾಗಿ ವಿಳಂಬವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿ ತಿಳಿಸಲಾಗುತ್ತಿದ್ದು, ಈ ಸಮಸ್ಯೆ ಪೂರ್ಣ ನಿರ್ವಹಣೆಯಾಗುವವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದ ನರಳುವ ಬದಲು ಈ ಹಿಂದಿನ ಸರ್ವರ್ ಅಳವಡಿಸಿದರೆ ಬಹಳಷ್ಟು ಉಪಯೋಗವಾಗಲಿದೆ ಎನ್ನಲಾಗುತ್ತಿದೆ.


     

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.