ಮಧುಗಿರಿ: ಇದ್ದ ಸಂಪರ್ಕ ಸೇತುವೆ ಮಳೆಯಿಂದಾಗಿ ಮುರಿದು ಬಿದ್ದು ಒಂದು ವರ್ಷವಾಗಿದೆ ಈ ಊರಿಗೆ ಸಂಪರ್ಕ ಸೇತುವೆ ಇಲ್ಲದೆ ಜನರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದ್ದು, ಈವರೆಗೆ ಸಂಪರ್ಕ ಸೇತುವೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾವಗಡ-ತುಮಕೂರು ಮಾರ್ಗದ ರಸ್ತೆಯನ್ನು ತಡೆದು ಪ್ರತಿಭಟಿಸಿದ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿ ಲಕ್ಲಿಹಟ್ಟಿ ಗ್ರಾಮದ ಜನರು, ಸಂಪರ್ಕ ಸೇತುವೆ ಇಲ್ಲದ ಕಾರಣ ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಿದರು.
ತೀವ್ರವಾಗಿ ಮಳೆ ಸುರಿಯುತ್ತಿದ್ದು, ಜೀವ ಹಾನಿ ಆಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ವರದಿ: ಮಂಜುಸ್ವಾಮಿ. ಎಂ.ಎನ್ .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz