nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ
    ತುಮಕೂರು March 21, 2022

    ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ

    By adminMarch 21, 2022No Comments2 Mins Read
    covid warriors protest

    ತುಮಕೂರು: ಕೋವಿಡ್ -19 ರ ತುರ್ತು ಪರಿಸ್ಥಿತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಅರೇ- ವೈದ್ಯಕೀಯ ಸಿಬ್ಬಂದಿಯನ್ನು 2022 ಮಾರ್ಚ್ 31 ನಂತರವು ಸೇವೆಯಿಂದ ಮುಂದುವರೆಸುವಂತೆ ಒತ್ತಾಯ ಕೊರೊನಾ ವಾರಿಯರ್ಸ್ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾತನಾಡಿದ ಕೊರೊನಾ ವಾರಿಯರ್ಸ್, ಕೋವಿಡ್ -19ರ ತುರ್ತು ಪರಿಸ್ಥಿತಿಯಲ್ಲಿ ನಮ್ಮನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಾವು ನಮ್ಮ ಕುಟುಂಬ, ಮನೆ-ಮಠ ಬಿಟ್ಟು, ನಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜೊತೆಯಲ್ಲಿಯೇ ಸೇರಿದ ಕೆಲವು ಆರೋಗ್ಯ ಸಿಬ್ಬಂದಿಗಳು ಪ್ರಾಣಭಯದಿಂದ ಹಾಗೂ ಕೊರೊನ ಮಹಾ ಮಾರಿಗೆ ಹೆದರಿ ಅರ್ಧಕ್ಕೆ ಕೆಲಸವನ್ನು ಬಿಟ್ಟು ಹೋದರು. ಆದರೆ ನಮ್ಮಲ್ಲಿ ಹಲವರಿಗೆ ಹಲವು ಬಾರಿ ಕೊರೂನಾ ಪಾಸಿಟಿವ್ ಬಂದು ಸಾವಿನ ಕದ ತಟ್ಟಿ ಸಾವಿನ ಸೋಲನ್ನು ಒಪ್ಪದೆ ಪುನಃ ಕರ್ತವ್ಯಕ್ಕೆ ಮರಳಿ ಕರ್ತವ್ಯವನ್ನು ಸಲ್ಲಿಸುತ್ತಿದ್ದೇವೆ. ಜೊತೆಗೆ ಕೂರೊನಾ ಲಸಿಕಾ ಅಭಿಯಾನದಲ್ಲಿ ಭಾರತದ ಐತಿಹಾಸಿಕ ಮೈಲುಗಲ್ಲಿನ ಸಾಧನೆಯಲ್ಲಿ ನಾವು ಸಹಾ ಭಾಗಿಯಾಗಿ ಕರ್ತವ್ಯ ಸಲ್ಲಿಸಿದ್ದೇವೆ. ಕಷ್ಟ ಕಾಲದಲ್ಲಿ ನಾವು ಸರ್ಕಾರದ ಜೊತೆಯಾಗಿ ನಿಂತು ದುಡಿಯುತ್ತಿದ್ದೇವೆ, ಮುಂದೆಯು ಸಹ ದುಡಿಯಲು ಸಿದ್ಧರಿದ್ದೇವೆ. ಆದರೆ ಈ ಹಂತದಲ್ಲಿ ಕೊರೊನ ಹೆಚ್ಚಾಗುವುದರಿಂದಲೇ ಕೊರೊನ ವಾರಿಯರ್ಸ್ ಗಳ ಕೆಲಸ ಉಳಿಯುತ್ತಿದೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಕಡಿಮೆ ಆದ ಮೇಲೆ ನಮ್ಮನ್ನು ಕೆಲಸದಿಂದ ತೆಗೆದರೆ ಕೊರೊನಾ ವಾರಿಯರ್ಸ್ ಗಳಾದ ಫಾರ್ಮಸಿ ಅಧಿಕಾರಿಗಳು, ಲ್ಯಾಬ್ ಟೆಕ್ನಿಶಿಯನ್, ಪಿ ಎಚ್ ಸಿ ಓ, ಗ್ರೂಪ್ – ಡಿ, ಸ್ವಾಬ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ಮತ್ತಿತರ ಕೊರೊನಾ ವಾರಿಯರ್ಸ್ ಗಳು ನಿರ್ಗತಿಕರಾಗಿ, ನಿರುದ್ಯೋಗಿಗಳಾಗಿ ಬೀದಿಗೆ ಬರಬೇಕಾಗುತ್ತದೆ  ಎಂದು ಆತಂಕ ವ್ಯಕ್ತಪಡಿಸಿದರು.


    Provided by
    Provided by

    ಈಗಾಗಲೇ ಪ್ರಧಾನಿ ಮೋದಿಜಿಯವರು, ಕೂರೂನಾ ವಾರಿಯರ್ಸ್ ಆಗಿ 100 ದಿನಗಳ ಕಾಲ ಸೇವೆ ಸಲ್ಲಿಸಿದವರಿಗೆ ಸೇವಾ ಭದ್ರತೆಯನ್ನು ಒದಗಿಸಿ ಮುಂಬರುವ ಸರ್ಕಾರಿ ಕೆಲಸಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅದೇಶ ಹೊರಡಿಸಿದರೆ ಸುಮಾರು 4,000 ಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ ಗಳಿಗೆ ಮತ್ತು ಅವರ ಕುಟುಂಬದವರಿಗೆ ಆಧಾರವಾಗುತ್ತದೆ. ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಂಕಿಸಂಖ್ಯೆ ಸಮೇತ ಪತ್ರಿಕೆ, ಅಂತರ್ಜಾಲ ಹಾಗೂ ಮಾಧ್ಯಮದಲ್ಲಿ ವರದಿಯಾಗಿರುವುದರಿಂದ ತಾವು ಇದನ್ನು ಪರಿಶೀಲಿಸಿ ಖಾಲಿ ಇರುವ ಸ್ಥಳಗಳಿಗೆ ಅಸ್ಪತ್ರೆಗಳಿಗೆ ನಮ್ಮ ಸೇವಾಕಾರ್ಯವನ್ನು ಹಾಗೂ ಅನುಭವವನ್ನು ಪರಿಗಣಿಸಿ ಮಾನವೀಯತೆ ದೃಷ್ಠಿಯಿಂದ ನಮ್ಮನ್ನು ಖಾಲಿ ಇರುವ ಸ್ಥಳಗಳಿಗೆ ನೇಮಿಸಿದರೆ ನಮಗೂ ಉದ್ಯೋಗ ದೊರಕಿ ನಮ್ಮೆಲ್ಲರ ಕುಟುಂಬಗಳಿಗೆ ಭದ್ರತೆ ದೊರಕಿದಂತಾಗುತ್ತದೆ. ಈಗಾಗಲೇ ಹಲವಾರು ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ತರಬೇತಿ ಮತ್ತು ಯೋಜನೆಗಳ ಬಗ್ಗೆ ಅರಿವು ಇರುವುದಿಂದ ತಾವುಗಳು ದಯಮಾಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ನಮ್ಮ ಜೀವನಕ್ಕೆ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದರು

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!

    November 18, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ಶ್ರೀಕ್ಷೇತ್ರ ಕಾಗಿನೆಲೆ: ಇಲ್ಲಿನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ನ.22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1…

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.