nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗ ಶಿಬಿರ ಸದುಪಯೋಗವಾಗಲಿ: ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ಅಭಿಮತ
    ಪಾವಗಡ September 25, 2024

    ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗ ಶಿಬಿರ ಸದುಪಯೋಗವಾಗಲಿ: ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ಅಭಿಮತ

    By adminSeptember 25, 2024No Comments2 Mins Read
    health camp

    ಪಾವಗಡ: ಉತ್ತಮವಾದ ಆರೋಗ್ಯವನ್ನು ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುತ್ತಿದ್ದು ಸಾರ್ವಜನಿಕರು ಈ ಶಿಬಿರಗಳಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಪಾವಗಡ ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದರು.

    ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಪಾವಗಡ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಇತ್ತೀಚಿನ ದಿನಗಳಲ್ಲಿ ತಿನ್ನುವ ಆಹಾರ, ಕುಡಿಯುವ ನೀರು, ಉಸಿರಾಡುವ ಗಾಳಿ ಕಲುಷಿತವಾಗಿದೆ ಪ್ರಸ್ತುತ ದಿನಗಳಲ್ಲಿ ಬರುವ ರೋಗಗಳು ಪ್ರಾಥಮಿಕ ಅಂತದಲ್ಲಿ ಹೆಚ್ಚಿನ ಪ್ರಭಾವ ಬೀರದಿದ್ದರೂ ಅವುಗಳನ್ನು ಕಡೆಗಣಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಮಾರಣಾಂತಿಕವಾಗಿ ಜೀವಕ್ಕೆ ಕತ್ತು ತರಬಹುದು. ಇಂದಿನ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಟಿ.ವಿ. ಹಾಗೂ ಮೊಬೈಲ್ ಬಳಕೆಯಿಂದ ಕಣ್ಣಿನ ದೃಷ್ಟಿ ಅಪಾಯದ ಅಂಚಿಗೆ ತಲುಪುತ್ತಿದೆ. ಗ್ರಾಮೀಣ ಭಾಗದ ಜನರು ರೋಗಗಳ ಬಗ್ಗೆ ಅರಿವಿಲ್ಲದೆ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ನಿರ್ಲಕ್ಷ ತೋರುತ್ತಿದ್ದು, ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ರಕ್ಷಣೆ ಮಾಡಲು ಹೆಲ್ಪ್ ಸೊಸೈಟಿ ಸಂಸ್ಥೆ ಬಹಳಷ್ಟು ಶಿಬಿರಗಳನ್ನು ಆಯೋಜಿಸಿದ್ದು, ಈ ಬಾರಿ ಸೇವಾ ಟ್ರಸ್ಟ್ ಪ್ರಪ್ರಥಮವಾಗಿ ಶಿಬಿರ ಆಯೋಜಿಸಿದ್ದು, ಅತೀ ಹೆಚ್ಚು ಜನರು ಇದರ ಪ್ರಯೋಜನ ಪಡೆದುಕೊಂಡಿರುವುದಕ್ಕೆ ಶಿಬಿರ   ಯಶಸ್ಸು ಕಂಡಿದೆ ಹಾಗೂ ಮುಂದೆ ಮುಂದೆ ಮತ್ತಷ್ಟು ಶಿಬಿರ ನಡೆಸಲಿ ಎಂದು ತಿಳಿಸಿ ಸಾರ್ವಜನಿಕರು ಸಹ ಬ್ಯಾಂಕಿನ ಸೌಲಭ್ಯಗಳಾದ ಹಲವಾರು ವಿಮೆಗಳನ್ನು ಜಾರಿಗೆ ತಂದಿದ್ದು ಹದಿನೆಂಟರಿಂದ ಎಪ್ಪತ್ತು ವರ್ಷ ವಯಸ್ಸಿನ ಎಲ್ಲರಿಗೂ ಸಹ ಬ್ಯಾಂಕಿನ ಹಲವಾರು ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವತೆ ಕರೆ ನೀಡಿದರು.

    ಈ ಸಂದರ್ಭದಲ್ಲಿ ಎಸ್ ಬಿ ಐ ಬ್ಯಾಂಕಿನ ನಾಗಲಕ್ಷ್ಮಮ್ಮ ಮಾತನಾಡುತ್ತ, ಈ ಶಿಬಿರದಲ್ಲಿ ಆಯ್ಕೆಯಾದವರಿಗೆ ಅವರದೇ ಉಚಿತ ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ತಮ್ಮ ಗ್ರಾಮಗಳಿಗೆ ಕರೆ ತಂದು ಬಿಡುವ ಸೌಲಭ್ಯ ಕಲ್ಪಿಸಿದ್ದಾರೆ ಈ ಭಾಗದ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಹೇಳಿದರು.

    ಶಿಬಿರದ ಪ್ರಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸೇವಾ ಟ್ರಸ್ಟ್ ನಿರ್ದೇಶಕಿ ಸಂದ್ಯಾ, ನಿರ್ದೇಶಕರಾದ ಅಮಿಲಿನೇಣಿ ನರಸಿಂಹಮೂರ್ತಿ, ಅಮಿಲಿನೇಣಿ ನರೇಶ್, ರಘುಪತಿ ನಾಯ್ಡು, ಬೇಕರಿ ನಾಗರಾಜ್, ಮಾನಂ ಗೌತಮ್, ಭವ್ಯ, ಶಶಿಕಲಾ, ಶಂಕರ್ ಕಣ್ಣಿನ ಆಸ್ಪತ್ರೆಯ  ನೇತ್ರಾಧಿಕಾರಿ ಪವಿತ್ರ, ಶಂಕರ್ ಕಣ್ಣಿನ ಆಸ್ಪತ್ರೆ ವೈದ್ಯರಾದ ನಿಕಿತಾ, ಅರುಣ್ ಕುಮಾರ್, ಯೋಜನಾಧಿಕಾರಿ ಹರೀಶ್, ಸಾರ್ವಜನಿಕ ಆಸ್ಪತ್ರೆಯ ರಮೇಶ್, ಮಂಜುನಾಥ್, ಕೃಷ್ಟಪ್ಪ, ಓಂಕಾರ್, ಗುರುನಾಥ್ ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು, ಸೇವಾ ಟ್ರಸ್ಟ್ ಪದಾಧಿಕಾರಿಗಳು ಹಾಜರಿದ್ದರು.

    ಈ ಶಿಬಿರದಲ್ಲಿ 180 ರೋಗಿಗಳಿಗೆ  ತಪಾಸಣೆ ನಡೆಸಿದ್ದು, ಶಸ್ತ್ರ ಚಿಕಿತ್ಸೆಗೆ 65 ರೋಗಿಗಳು ಆಯ್ಕೆಯಾಗಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.