ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ದೆಹಲಿ ಪೊಲೀಸರನ್ನು ಚುನಾವಣೆಯಲ್ಲಿ ಗೆಲ್ಲಲು ಬಳಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೋವನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ರೇವಂತ್ ರೆಡ್ಡಿ ಅವರ ಮನೆಗೆ ತೆರಳಿ ಮರುದಿನ ಎಲೆಕ್ಟ್ರಾನಿಕ್ ಸಾಧನಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ದೆಹಲಿ ಪೊಲೀಸರು ತನಿಖೆಯನ್ನು ತೆಲಂಗಾಣಕ್ಕೆ ವಿಸ್ತರಿಸಿದರು ಮತ್ತು ಇಡಿ ಮತ್ತು ಸಿಬಿಐ ನಂತರ ಪಿಸಿಸಿ ಪ್ರಧಾನ ಕಚೇರಿಯಲ್ಲಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ, ಚುನಾವಣಾ ಗೆಲುವಿಗೆ ದೆಹಲಿ ಪೊಲೀಸರನ್ನು ಅಮಿತ್ ಶಾ ಬಳಸಿಕೊಂಡಿದ್ದಾರೆ ಎಂದು ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ಮೀಸಲಾತಿ ರದ್ದುಪಡಿಸುವಂತೆ ಅಮಿತ್ ಶಾ ಹೇಳುತ್ತಿರುವಂತಹ ವಿಡಿಯೋ ಪ್ರಸಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ವಾರ್ ರೂಮ್ ಸಂಯೋಜಕ ರಿಥೋಮ್ ಸಿಂಗ್ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಈ ವಿಡಿಯೋ ದೇಶಾದ್ಯಂತ ಬಿಜೆಪಿ ವಿರುದ್ಧ ವ್ಯಾಪಕ ಆಕ್ರೋಶವನ್ನುಂಟು ಮಾಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296