ಪಾವಗಡ: ಪಾವಗಡ ತಾಲ್ಲೂಕಿನ ಮುರಾರಯನಹಳ್ಳಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿನಿಗೆ ಹೆಚ್ಚಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ವಿದ್ಯಾರ್ಥಿನಿ ಮನೆಗೆ ತೆರಳಿ ಆರ್ಥಿಕ ಹಣಕಾಸು ನೆರವು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿನಿ ಗೌತಮಿ ಪೋಷಕರು, ನನ್ನ ಮಗಳು ಪಿ ಯು ಸಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳಲು ಆಸಕ್ತಿ ವಹಿಸಿದ್ದು, ಮನೆಯಲ್ಲಿ ಅರ್ಥಿಕ ತೊಂದರೆಯಿಂದ ಪೋಷಕರಾದ ನಮಗೆ ಚಿಂತೆಗೀಡಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹೆಲ್ಪ್ ಸೊಸೈಟಿ ವಿದ್ಯಾಭ್ಯಾಸಕ್ಕೆ ಬಹಳಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದನ್ನು ಕಂಡು ನಾವು ಸಹ ಹೆಲ್ಪ್ ಸೊಸೈಟಿ ಅದ್ಯಕ್ಷರಲ್ಲಿ ಅರ್ಥಿಕ ಸಹಾಯಕ್ಕೆ ಮನವಿ ಮಾಡಲಾಗಿ ಕೂಡಲೇ ಸ್ಪಂದಿಸಿ ನಮ್ಮ ಮಗಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನಮ್ಮ ಮನೆಗೆ ಭೇಟಿ ನೀಡಿ ಅರ್ಥಿಕ ಹಣಕಾಸು ನೆರವನ್ನು ನೀಡಿ ವಿದ್ಯಾರ್ಥಿನಿಗೆ ದಾರಿದೀಪವಾಗಿದ್ದರೆ ಎಂದು ಕೃತಜ್ಞತೆ ಸಲ್ಲಿಸಿದರು
ಈ ಸಂದರ್ಭದಲ್ಲಿ ವೀರಮ್ಮನಹಳ್ಳಿ ಲೋಕೇಶ್, ಶ್ರೀಕಾಂತ್, ಗೌತಮ್ ಹಾಜರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy