ಕೊರಟಗೆರೆ: ನಮ್ಮ ದೇಶಕ್ಕೆ ದೊಡ್ಡ ಶಕ್ತಿ ಎಂದರೆ ಸ್ತ್ರೀಯರು, ಸ್ತ್ರೀಯರನ್ನು ನಾವುಗಳು ದೇವತೆಯ ರೂಪದಲ್ಲಿ ಕಾಣುತ್ತೇವೆ, ಶಕ್ತಿ ಯೋಜನೆಯು ಅತ್ಯದ್ಭುತ ಯೋಜನೆ ಎಂದು ತಹಸಿಲ್ದಾರ್ ಮುನಿಸ್ವಾಮಿ ರೆಡ್ಡಿ ತಿಳಿಸಿದರು.
ಪಟ್ಟಣದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಏರ್ಪಡಿಸಲಾದ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ತ್ರೀಯರನ್ನು ಭೂತಾಯಿ, ತಾಯಿಯ ರೂಪದಲ್ಲಿ ಪೂಜಿಸುತ್ತೇವೆ, ಪ್ರತಿಯೊಬ್ಬರ ಬಾಳಿನಲ್ಲೂ ಹೆಣ್ಣಿನ ಪಾತ್ರ ಪ್ರಮುಖವಾಗಿರುತ್ತದೆ. ಹೆಣ್ಣು ತನ್ನ ಮಗುವಿಗೆ ಪ್ರಾಥಮಿಕ ಶಿಕ್ಷಣವನ್ನು ಗರ್ಭದಲ್ಲೇ ನೀಡಿ, ಪ್ರಪಂಚಕ್ಕೆ ತಮ್ಮನ್ನು ಪರಿಚಯಿಸಿ ಜೀವನಕ್ಕೆ ದಾರಿದೀಪವಾಗಿ ನಿಂತಿರುತ್ತಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖವಾದ ಶಕ್ತಿ ಯೋಜನೆ ಜಾರಿಗೆ ತಂದು ರಾಜ್ಯದಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ವಿಶೇಷ ಗೌರವ ಸೂಚಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ, ಸರ್ಕಾರದ ನಿಯಮವನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನಕ್ಕೆ ಸದ್ಬಳಕೆ ಮಾಡಿಕೊಳ್ಳಿ ಎಂದರು.
ಕೃತಜ್ಞತೆ ಸಲ್ಲಿಸಿದ ಮಹಿಳೆಯರು:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಮಹಿಳೆಯರಿಗೆ ಶಕ್ತಿ ಯೋಜನೆಯ ಮುಖಾಂತರ ರಾಜ್ಯದಲ್ಲಿ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಮಹಿಳೆಯರಿಗೆ ವಿಶೇಷ ಗೌರವವನ್ನು ಸೂಚಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಓ ದೊಡ್ಡ ಸಿದ್ದಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಓಬಳರಾಜು, ನಾಗರಾಜು, ನಂದೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್, ಅರಕೆರೆ ಶಂಕರ್, ಪಪಂ ಮಾಜಿ ಅಧ್ಯಕ್ಷ ಸೈಫುಲ್ಲಾ, ಮೈಲಾರಪ್ಪ, ಘಟಕದ ವ್ಯವಸ್ಥಾಪಕ ನಟರಾಜ್, ಕಾನೂನು ಅಧಿಕಾರಿ ಸವಿತಾ, ರಾಜಶೇಖರ್, ವಸಂತಕುಮಾರ್, ಪೋಲಿಸ್ ಇಲಾಖೆಯ ಎ ಎಸ್ ಐ ಮಂಜುನಾಥ್ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA