ತಿಪಟೂರು: ತಾಲ್ಲೂಕಿನ ಚಿಕ್ಕರಂಗಾಪುರ ಭೋವಿಕಾಲೊನಿಯ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 73 ನೇ ಗಣರಾಜ್ಯೋತ್ಸದ ಅಂಗವಾಗಿ ಗ್ರಾಮ ಪಂಚಾಯ್ತಿ ಸದಸ್ಯೆ ರೂಪ ಹರೀಶ್ ರವರು ಉಚಿತವಾಗಿ ಸಮವಸ್ತ್ರ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಉಳ್ಳವರು ಕೈಲಾದ ಸಹಾಯ ಮಾಡಿ ಮಕ್ಕಳನ್ನು ಪ್ರೋತ್ಸಾಹಿಸಿದರೆ,ನಮ್ಮ ಹಳ್ಳಿಯ ಮಕ್ಕಳು ಕೂಡ ಪಟ್ಟಣದ ಮಕ್ಕಳಿಗಿಂತ ಮುಂದೆ ಬರುತ್ತಾರೆ. ಮುಂದೊಂದು ದಿನ ಇದೆ ಮಕ್ಕಳು ದೇಶ ಮೆಚ್ಚುವ ಸತ್ಪ್ರೇಜೆಗಳಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಜೊತೆಗೆ ಉತ್ತಮ ಸಂಸ್ಕಾರವಂತರಾದಲ್ಲಿ ತಮ್ಮ ಕುಟುಂಬಕ್ಕೆ,ಸಮಾಜಕ್ಕೆ ಹೆಸರು ತರುವಂತ ಶ್ರೇಷ್ಠ ವ್ಯಕ್ತಿಗಳಾಗುವರು ಈ ನಿಟ್ಟಿಯಲ್ಲಿ ನಾವು ನಮ್ಮ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿರುವುದು ಸಂತೋಷ ತಂದಿದೆ ಎಂದರು.
ಇನ್ನೊರ್ವ ಗ್ರಾಮ ಪಂಚಾಯ್ತಿ ಸದಸ್ಯ ಶೇಖರಣ್ಣ ಮಕ್ಕಳಿಗೆ ಸಿಹಿ ವಿತರಿಸಿದರು. ಇದೆ ಸಂದರ್ಭದಲ್ಲಿ ನೂತನ ಧ್ವಜಸ್ತಂಭವನ್ನು ಕೂಡ ಶಾಲೆಗೆ ಕೊಡುಗೆಯಾಗಿ ನಿರ್ಮಾಣ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು
ಮುಖ್ಯ ಶಿಕ್ಷಕಿ ಹೇಮಲತಾ ಮಾತನಾಡಿ, ನಮ್ಮ ಶಾಲೆಯ ಮಕ್ಕಳಿಗೆ ಕಲಿಕೆ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಸ್ಥಳೀಯ ಗ್ರಾಮಪಂಚಾಯಿತಿ ಸದಸ್ಯರು,ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿಯು ಎಲ್ಲ ರೀತಿಯ ನೆರವು ನೀಡುತ್ತಿದ್ದು ಎಲ್ಲರ ಸಹಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷೆ ಸುಶೀಲಮ್ಮ, ಸಹಶಿಕ್ಷಕರಾದ ಲಿಂಗೇಶ್, ಅಂಗನವಾಡಿ ಶಿಕ್ಷಕಿ ರೂಪ ಸೇರಿದಂತೆ ಪೋಷಕರು, ಗ್ರಾಮಸ್ಥರು ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB