ಪಾವಗಡ: ಪಟ್ಟಣದ ಸುಪ್ರಸಿದ್ಧ ಶನಿ ಮಹಾತ್ಮ ದೇವಸ್ಥಾನದಲ್ಲಿ ಶನಿವಾರ ಮಧ್ಯಾಹ್ನ 12:15 ರ ಸಮಯದಲ್ಲಿ ಬ್ರಹ್ಮರಥೋತ್ಸವಕ್ಕೆ ಶನಿಮಹಾತ್ಮಕಾರಿ ನಿರ್ವಾಹಕ ಸಂಘದ ಅಧ್ಯಕ್ಷರಾದ ಸಿ ಎನ್ ಆನಂದ್ ರಾವ್ ಅವರು ಚಾಲನೆ ನೀಡಿದರು
ರಥವನ್ನು ಮತ್ತು ದೇವಸ್ಥಾನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು, ಈ ಬಾರಿಯ ವಿಶೇಷವೆಂದರೆ ರಥೋತ್ಸವದ ಸಮಯದಲ್ಲಿ ರಥಕ್ಕೆ ಮತ್ತು ದೇವಸ್ಥಾನಕ್ಕೆ ಆಕಾಶದೆತ್ತರದಿಂದ ಗರುಡ ಪಕ್ಷಿಯೊಂದು ಪ್ರದಕ್ಷಿಣ ಹಾಕಿ ಭಕ್ತರ ಅಚ್ಚರಿಗೆ ಕಾರಣವಾಯಿತು.
ವಿಷ್ಣುವಿನ ಅವತಾರವಾಗಿರುವ ಗರುಡ ಪಕ್ಷಿಯು ಇಂತಹ ಬ್ರಹ್ಮರಥೋತ್ಸವ ನಡೆಯುವ ಸಂದರ್ಭದಲ್ಲಿ ಆಗಮಿಸಿ ಪ್ರದಕ್ಷಣೆ ಹಾಕುವುದು ವಿಷ್ಣುದೇವ ಆಗಮಿಸಿದಷ್ಟೇ ಪುಣ್ಯ ಇಂದು ಜನರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು.
ರಥ ಎಳೆಯುವ ಸಂದರ್ಭದಲ್ಲಿ ಪಾವಗಡದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ರಾಮಕೃಷ್ಣ ರೆಡ್ಡಿ ಅವರ ಕಾಲಿನ ಮೇಲೆ ರಥದ ಚಕ್ರ ಹರಿದು ಗಂಭೀರ ಗಾಯ ಆಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ,
ರಥೋತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಪಾವಗಡ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಏರ್ಪಡಿಸಲಾಗಿತ್ತು, ಅದೇ ರೀತಿ ದೇವಸ್ಥಾನದ ವತಿಯಿಂದ ಭಕ್ತರಿಗೆ ಪ್ರಸಾದ ವಿನಿಯೋಗವನ್ನು ಮಾಡಲಾಯಿತು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಯ ಬ್ರಹ್ಮರಥೋತ್ಸವನ್ನು ಕಣ್ತುಂಬಿಕೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ