nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕ ಮಹೇಶ್ ಸರ್ವಾಧಿಕಾರಿ ಧೋರಣೆ ವಿರುದ್ಧ ಹಾಗಲವಾಡಿ ಗ್ರಾಮದಲ್ಲಿ ಪ್ರತಿಭಟನೆ
    ಗುಬ್ಬಿ January 28, 2022

    ಶಿಕ್ಷಕ ಮಹೇಶ್ ಸರ್ವಾಧಿಕಾರಿ ಧೋರಣೆ ವಿರುದ್ಧ ಹಾಗಲವಾಡಿ ಗ್ರಾಮದಲ್ಲಿ ಪ್ರತಿಭಟನೆ

    By adminJanuary 28, 2022No Comments2 Mins Read
    mahesh

    ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ಕೇಂದ್ರದಲ್ಲಿರುವ ಶ್ರೀವಿನಾಯಕ ಗ್ರಾಮಾಂತರ ಪ್ರೌಢಶಾಲೆಯು 1963ರಲ್ಲಿ ಪ್ರಾರಂಭವಾಗಿದ್ದು, 1983ರಲ್ಲಿ ಈ ಶಾಲೆಗೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ  9ಜನ ಆಯ್ಕೆಯಾಗಿದ್ದರು. ಅಂದಿನಿಂದ ಇಂದಿನವರೆಗೂ ಅದೇ ಕಮಿಟಿ ಮುಂದುವರಿದಿದ್ದು, ಕಮಿಟಿ ಸದಸ್ಯರೆಲ್ಲರೂ ತೀರಿಹೋಗಿದ್ದು ಕೇವಲ ಅಧ್ಯಕ್ಷರು ಮಾತ್ರ ಇದ್ದು, ಹೊಸದಾಗಿ ಸಮಿತಿ ರಚಿಸಲು ಗ್ರಾಮಸ್ಥರ ಒಪ್ಪಿಗೆ ಇಲ್ಲದೆ ತಮಗೆ ಬೇಕಾದವರನ್ನು ಹಿರಿಯ ಶಿಕ್ಷಕ ಮಹೇಶ್ ರವರು ನೇಮಿಸಿಕೊಂಡಿರುವುದರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದರು.

    ಗ್ರಾಮಸ್ಥರು ಸುಮಾರು ಬಾರಿ ಶಾಲೆಯಲ್ಲಿ ಸದಸ್ಯ ಮಂಡಳಿ ಇಲ್ಲದಿರುವ ಬಗ್ಗೆ ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡಿ ಕಳಿಸುತ್ತಿದ್ದ ಮಹೇಶ್ ಅವರು, ಜಿಲ್ಲಾ ನೋಂದಣಾಧಿಕಾರಿಗಳಿಗೆ ತಿಳಿಸದಂತೆ ಗ್ರಾಮಸ್ಥರ ಸಭೆಯನ್ನು ಕರೆಯದೆ ಸರ್ವಾಧಿಕಾರಿಯಂತೆ ಏಕಾಏಕಿ ತಮಗೆ ಬೇಕಾದ ಸದಸ್ಯರುಗಳನ್ನು ಆಯ್ಕೆ ಮಾಡಿಕೊಂಡು ಶಾಲೆಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುವಂತೆಮಾಡಿದ್ದು, ಇವರ ವಿರುದ್ಧ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟಿಸಿದ ನಂತರ ಗ್ರಾಮಸ್ಥರ ಒಪ್ಪಿಗೆಯಂತೆ ಮುಂದಿನ ಮಂಡಳಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆಂದು  ಎಂದು ಗ್ರಾಮಸ್ಥ ಜಗದೀಶ್ ಬಾಬು ತಿಳಿಸಿದರು.


    Provided by
    Provided by

    ಈ ಸಂಬಂಧ ಗ್ರಾಮದ ಹಿರಿಯ ಮುಖಂಡರಾದ ಎಚ್.ಎಸ್.ಪಾಂಡುರಂಗಯ್ಯ ಮಾತನಾಡಿ, ಮಹೇಶ್ ರವರ ದುರಾಡಳಿತಕ್ಕೆ ಕೈಗನ್ನಡಿಯಂತಿರುವ ಅವರೇ ಆಯ್ಕೆ ಮಾಡಿಕೊಂಡಿರುವ ಅಪರಿಚಿತ ವ್ಯಕ್ತಿಗಳ ಸದಸ್ಯರ ಡಳಿಯಾಗಿದೆ, ಆದ್ದರಿಂದ ಆಕ್ರೋಶಗೊಂಡ  ಗ್ರಾಮಸ್ಥರೆಲ್ಲಾ ಒಗ್ಗೂಡಿ ಗ್ರಾಮಸ್ಥರ ಸಮ್ಮುಖದಲ್ಲಿ ರಚನೆಯಾಗದ ಮಂಡಳಿ ವಜಾಮಾಡಿ ಸಾರ್ವಜನಿಕರೆದುರೆ ಸದಸ್ಯ ಮಂಡಳಿ ರಚನೆಯಾಗಬೇಕೆಂದು ಪಟ್ಟು ಹಿಡಿದು ಗ್ರಾಮಸ್ಥರೊಂದಿಗೆ ಶಾಲೆಗೆ ಮುತ್ತಿಗೆ ಹಾಕಿ  ಅಧ್ಯಕ್ಷರಲ್ಲಿ ಮನವಿ ಮಾಡಿದಾಗ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಹೊಸದಾಗಿ ಗ್ರಾಮಸ್ಥರು  ಹಾಗೂ ಅಕ್ಕಪಕ್ಕದ ಗ್ರಾಮಸ್ಥರನ್ನು ಸೇರಿಸಿ ಸದಸ್ಯಮಂಡಳಿಯನ್ನು ಆಯ್ಕೆ ಮಾಡುವುದಾಗಿ ಲಿಖಿತ ರೂಪದಲ್ಲಿ ಬರೆದು ಕೊಟ್ಟ ನಂತರ ಗ್ರಾಮಸ್ಥರು ಸಮಾಧಾನವಾಗಿದ್ದಾಗಿ ತಿಳಿಸಿದರು.

    ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಾಂಡುರಂಗಯ್ಯ ಮಾತನಾಡಿ, ಸುಮಾರು ವರ್ಷಗಳಿಂದ ಸರ್ವಾಧಿಕಾರಿಯಂತಿರುವ ಶಿಕ್ಷಕ ಮಹೇಶ್ ರವರು ಇನ್ನೂ ಮುಂದಾದರೂ ಗ್ರಾಮಸ್ಥರ ಸಲಹೆ ಸೂಚನೆಯಂತೆ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಅಧ್ಯಕ್ಷರು ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಹೊಸದಾಗಿ ಸಮಿತಿ ರಚನೆಯಾಗುವವರೆಗೂ ಈಗ ಇರುವ ಸಮಿತಿಯ ಸಭೆ ಕರೆಯಬಾರದು ಹಾಗೂ ಆದಷ್ಟು ಬೇಗ ಹೊಸ ಸಮಿತಿ ರಚನೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಹಾಗಲವಾಡಿ  ವಿನಾಯಕ ಗ್ರಾಮಾಂತರ ಪ್ರೌಢಶಾಲೆ ಅಧ್ಯಕ್ಷ ಕರಿಯಪ್ಪಜಟ್ಟಿ ಮಾತನಾಡಿ, ಈಗ ಇರುವ ಹಾಲಿ ಸಮಿತಿಯನ್ನ ತಿರಸ್ಕರಿಸಿ ಮುಂದಿನ ದಿನಗಳಲ್ಲಿ ಅಂದರೆ 10ನೇ ತರಗತಿ ಪರೀಕ್ಷಾ  ನಂತರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸೇರಿ ರೋಸ್ಟರ್ ಪದ್ಧತಿಯನ್ನು ಅನುಸರಿಸಿ ಹೊಸ ಆಡಳಿತ ಮಂಡಳಿ ರಚಿಸುತ್ತೇವೆ ಎಂದರು.

    ಪ್ರತಿಭಟನೆಯಲ್ಲಿ ಮೃತ್ಯುಂಜಯ ಮೂರ್ತಿ, ನಾಗೇಂದ್ರಪ್ಪ, ಭಕ್ತಯ್ಯ, ಅನಿಲ್ ಕುಮಾರ್, ಪಾಂಡುರಂಗಯ್ಯ, ಜಗದೀಶ್ ಕುಮಾರ್, ಎಚ್.ಎಸ್. ಪಾಂಡುರಂಗಯ್ಯ, ರಾಮಚಂದ್ರಯ್ಯ, ಮಹೇಶ್ ಶಿವರಾಜ್, ನರಸಿಂಹಮೂರ್ತಿ, ರೈತ ಸಂಘ ಸದಸ್ಯರು  ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಭಾಗವಹಿಸಿದ್ದರು.

    ವರದಿ: ಮಂಜುನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.