ಶಿವಮೊಗ್ಗ: ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ.
ಡಾ. ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.
ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296