nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ : ಬಸವರಾಜ ಬೊಮ್ಮಾಯಿ ಸಂಪೂರ್ಣ ಭಾಷಣ
    ರಾಜ್ಯ ಸುದ್ದಿ April 1, 2022

    ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ : ಬಸವರಾಜ ಬೊಮ್ಮಾಯಿ ಸಂಪೂರ್ಣ ಭಾಷಣ

    By adminApril 1, 2022No Comments2 Mins Read
    basavaraj bommai

    ತುಮಕೂರು: ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನ ಎಂದು  ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ  ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ  115ನೇ ಜಯಂತೋತ್ಸವ  ಹಾಗೂ “ ಗುರುವಂದನಾ ಮಹೋತ್ಸವದಲ್ಲಿ  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ  ಪಾಲ್ಗೊಂಡು  ಮಾತನಾಡಿದರು.


    Provided by
    Provided by

    ಆಡಳಿತಗಾರರು ಶ್ರೀ ಮಠವನ್ನು ಶ್ರದ್ಧಾ ಭಕ್ತಿಯಿಂದ ಕಂಡಿದ್ದಾರೆ. ನಮ್ಮ ಸರ್ಕಾರವೂ ಅತ್ಯಂತ ಶ್ರದ್ಧೆಯಿಂದ ಕಾಣುತ್ತಿದೆ. ಭಕ್ತಿಯಿಂದ ಬಸವಣ್ಣನವರ ದಾಸೋಹ, ಶಿಕ್ಷಣ, ಆರೋಗ್ಯ ತತ್ವಗಳಿಗೆ ನಮ್ಮ ಸರ್ಕಾರ ಮಹತ್ವ ನೀಡಿದೆ. ಸರ್ವೋದಯ ಕಾರ್ಯಕ್ರಮಕ್ಕೆ 60 ಸಾವಿರ ಕೋಟಿ ರೂ.ಗಳಿಗಿಂತ  ಹೆಚ್ಚು ಅನುದಾನವನ್ನು ಈ ವರ್ಷದ ಬಜೆಟ್ ನಲ್ಲಿ ಮೀಸಲಿರಿಸಿದೆ.  ಜನಕಲ್ಯಾಣಕ್ಕಾಗಿ ಹಾಗೂ ಜನರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ನಿಮ್ಮ ವಿಶ್ವಾಸ ಗಳಿಸುವ ರೀತಿಯಲ್ಲಿ  ಕೆಲಸ ಮಾಡುತ್ತದೆ . ಬಡವರು ದೀನದಲಿತರು, ಹೆಣ್ಣು ಮಕ್ಕಳಿಗೆ ಕಾರ್ಯಕ್ರಮಗಳ ಅನುಷ್ಠಾನ ಮಾಡಿ ನಿಮ್ಮ ಪ್ರೀತಿ ವಿಶ್ವಾಸವನ್ನು ಗಳಿಸಿ ನಿಮ್ಮ ಮುಂದೆ ಬರುತ್ತೇವೆ. ಕೇಂದ್ರ ಸಚಿವರ ಆಗಮನ ನಮ್ಮಲ್ಲಿ ಸಂಚಲನ ಮೂಡಿಸಿದೆ. ಜನರು ಅವರ ಮೇಲೆ ಪ್ರೀತಿ ಇರಿಸಿದ್ದಾರೆ ಎಂದರು.

    ಶಿವಕುಮಾರ ಸ್ವಾಮೀಜಿಗಳ ಸ್ಪೂರ್ತಿ:

    ಈ ನೆಲದಲ್ಲಿ ಅವರ ಸ್ಫೂರ್ತಿ, ಪ್ರೇರಣೆ ಇದೆ. ಇಲ್ಲಿ ಬಂದರೆ ಮನಸ್ಸಿಗೆ ಶಾಂತಿ, ಬದುಕಿಗೆ ದಾರಿ ಸಿಗುವ ಶಕ್ತಿ ಸಿದ್ದಗಂಗಾ ಕ್ಷೇತ್ರದಲ್ಲಿ ಇದೆ. ಅದೇ ದಾರಿಯಲ್ಲಿ  ಸಿದ್ದಲಿಂಗಸ್ವಾಮಿಗಳು ಶಿವಕುಮಾರ ಸ್ವಾಮಿಗಳ ಪರಂಪರೆಯನ್ನು ಅತ್ಯಂತ ಪ್ರಾಮಾಣಿಕವಾಗಿ ದಕ್ಷತೆಯಿಂದ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಯೋಗ್ಯವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

    ಅನನ್ಯ ಸೇವೆಯ ದಾಖಲೆ:

    ಶಿವಕುಮಾರ ಸ್ವಾಮೀಜಿ ಅವರು ಸುಮಾರು 88 ವರ್ಷಗಳ ಕಾಲ ಈ ನಾಡಿನ ಸೇವೆಯನ್ನು ಮಠದ ಮುಖಾಂತರ ಮಾಡಿರುವುದು ಒಂದು ದಾಖಲೆ. ಯಾವುದೇ ಪರಪೂಜ್ಯರು ಇಷ್ಟು ದೀರ್ಘಕಾಲದ ಸೇವೆಯನ್ನು ಇಡೀ ಭಾರತ ದೇಶದಲ್ಲಿ ಮಾಡಿಲ್ಲ ಎನ್ನುವುದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅದಕ್ಕಾಗಿಯೇ ಅವರಿಗೆ ನಡೆದಾಡುವ ದೇವರು ಎಂಬ ಬಿರುದು ಬಂದಿದೆ. ಅವರು ಹಚ್ಚಿದ  ಒಲೆಯ ಕಿಚ್ಚು ಸುಮಾರು 100 ವರ್ಷಕ್ಕಿಂತ ಹೆಚ್ಚಿನದಾಗಿದ್ದು, ಇಂದಿಗೂ ಉರಿಯುತ್ತಿದೆ. ಎಲ್ಲಿಯವರೆಗೆ ಈ ಅಡಿಗೆ ಒಲೆಯ ಕಿಚ್ಚು ಉರಿಯುತ್ತಿರುತ್ತದೆ, ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಾಗುತ್ತದೆ ಎಂದರು. ನಾವೆಲ್ಲರೂ ಕೋಟಿ ಕೋಟಿ ಗುರುವಂದನೆಗಳನ್ನು ಸದಾ ಸಲ್ಲಿಸಬೇಕು. ಅನ್ನ, ಅಕ್ಷರ, ಆಶ್ರಯಗಳನ್ನು ಅಕ್ಷರಶಃ ಪಾಲಿಸಿದ ದೇವರು ಶಿವಕುಮಾರ ಸ್ವಾಮೀಜಿ ಅವರು. ಅವರು ನಮ್ಮ ನಡುವೆ  ಜೀವಂತವಾಗಿದ್ದು, ಪ್ರೇರಣೆ, ಆಶೀರ್ವಾದ ನೀಡುತ್ತಿದ್ದಾರೆ ಎಂದರು.

    ಸರ್ವೋದಯ ಮತ್ತು ಅಂತ್ಯೋದಯ ಪರಿಕಲ್ಪನೆ:

    ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ನಿಜ ಸಾಧಕ ಎಂದು ಸ್ವಾಮಿ ವಿವೇಕಾನಂದರು ಹೇಳಿದಂತೆ ಅವರು ಬದುಕಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರು ಬದುಕಿನ ದಾರಿಯನ್ನು ಕಟ್ಟಿಕೊಟ್ಟಿರುವ ಸ್ವಾಮೀಜಿಗಳು. ದೂರದ ಉತ್ತರ ಕರ್ನಾಟಕದ ಮಕ್ಕಳು,  ಎಲ್ಲಾ ಸಮುದಾಯದ 10 ಸಾವಿರಕ್ಕೂ ಹೆಚ್ಚು  ಮಕ್ಕಳನ್ನು ಸಲಹುವುದು ಸುಲಭದ ಮಾತಲ್ಲ. ದೈವಶಕ್ತಿ  ನಮ್ಮೆಲ್ಲದಿಗೂ ಮಾರ್ಗದರ್ಶನ ಮಾಡುತ್ತಿದೆ. ಅವರ ಶ್ರದ್ಧೆ, ನಿಷ್ಠೆ ಮತ್ತು ಪರಿಶ್ರಮ ಅವರ ಧ್ಯೇಯ. ಅದರ ಪರಿಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಶಿವಕುಮಾರ ಸ್ವಾಮೀಜಿ ಅವರಿಗೆ ಜಾತಿ ಕುಲ ಎಂದು ನೋಡದೆ, ಎಲ್ಲ ವರ್ಗದ ಜನರನ್ನು ಪ್ರೀತಿ ಮಾಡಿ ಬದುಕನ್ನು ಕಟ್ಟಿಕೊಟ್ಟಿದ್ದಾರೆ.  ಸರ್ವೋದಯ ಮತ್ತು  ಅಂತ್ಯೋದಯ  ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಅಂತ್ಯೋದಯ ಪರಿಕಲ್ಪನೆಯಲ್ಲಿ ಅತ್ಯಂತ ಕಟ್ಟ ಕಡೆಯ ಮನುಷ್ಯನಿಗೆ  ಇಲ್ಲಿ ಸ್ಥಾನವಿದೆ. ಅವನು ತನ್ನ ಬದುಕು ಪ್ರಾರಂಭಿಸಲು ಎಲ್ಲ ರೀತಿಯ ವ್ಯವಸ್ಥೆ ಶ್ರೀ ಮಠದಲ್ಲಿದೆ ಎಂದು ಸಿಎಂ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!

    March 31, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.