nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಿವಮ್ಮ ಚಾಕಳ್ಳಿ ಕೃಷ್ಣ, ಉಪಾಧ್ಯಕ್ಷರಾಗಿ ಆಸಿಫ್ ಆಯ್ಕೆ
    ತುಮಕೂರು February 19, 2025

    ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಿವಮ್ಮ ಚಾಕಳ್ಳಿ ಕೃಷ್ಣ, ಉಪಾಧ್ಯಕ್ಷರಾಗಿ ಆಸಿಫ್ ಆಯ್ಕೆ

    By adminFebruary 19, 2025No Comments2 Mins Read
    purasabhe h d kote

    ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಜಾದಳ ಪಕ್ಷದ ಶಿವಮ್ಮ ಚಾಕಳ್ಳಿ ಕೃಷ್ಣ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಆಸಿಫ್ ಚುನಾಯಿತರಾಗಿದ್ದಾರೆ.
    ಪಟ್ಟಣದ ಪುರಸಭೆಯ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚಾಕಳ್ಳಿ ವಾರ್ಡಿನ ಸದಸ್ಯರಾದ ಶಿವಮ್ಮ ಚಾಕಹಳ್ಳಿ ಕೃಷ್ಣ ಮಾತ್ರ ನಾಮಪತ್ರ ಸಲ್ಲಿಸಿದರು.

    ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಒಂದನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಆಸಿಫ್, ವಡ್ಡರಗುಡಿಯ ವಾರ್ಡಿನ ಕಾಂಗ್ರೆಸ್ ಸದಸ್ಯ ಸೋಮಶೇಖರ್ ಯರೆಹಳ್ಳಿ, ಹ್ಯಾಂಡ್ ಪೋಸ್ಟಿನ ವಾರ್ಡಿನ ಜಾದಳ ಪಕ್ಷದ ಸದಸ್ಯ ಹರೀಶ್ ಗೌಡ ನಾಮಪತ್ರ ಸಲ್ಲಿಸಿದ್ದರು.

    ಕೊನೆ ಗಳಿಗೆಯಲ್ಲಿ ಸೋಮಶೇಖರ್ ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಆಸಿಫ್ ಮತ್ತು ಹರೀಶ್ ಗೌಡ ನಡುವೆ ಪೈಪೋಟಿ ಉಂಟಾಗಿತ್ತು. ಕಾಂಗ್ರೆಸ್ ಪಕ್ಷದ 13 ಜನ ಸದಸ್ಯರುಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಾಗಿ ಪಟ್ಟು ಹಿಡಿದರೂ ಜಾದಳ ಪಕ್ಷದ ಹತ್ತು ಜನ ಸದಸ್ಯರು ಗುಪ್ತ ಮತದಾನದ ಆಗಬೇಕೆಂದು ತಿಳಿಸಿ ಸಭೆಯಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ತಹಶೀಲ್ದಾರ್ ಶ್ರೀನಿವಾಸ್ ಮತ್ತು ಮುಖ್ಯ ಅಧಿಕಾರಿ ಸುರೇಶ್ ಅವರು ಪುರಸಭೆಯ ಕಾಯ್ದೆಯ ಪುಸ್ತಕ ನೋಡಿ ನಂತರ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಾಹಿತಿ ಪಡೆದುಕೊಂಡ ನಂತರ ಸದಸ್ಯರುಗಳು ಕೈ ಎತ್ತುವ ಮೂಲಕ ಅಭ್ಯರ್ಥಿಯ ಪರ ಮತದಾನ ಮಾಡಲು ಮಾತ್ರ ಅವಕಾಶ ಇದೆ ಎಂದು ತಿಳಿಸಿದರು.

    ನಂತರ ನಡೆದ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ಆಸಿಫ್ ಪರವಾಗಿ ಕಾಂಗ್ರೆಸ್ ಪಕ್ಷದ 13 ಜನ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಿದರು, ಹರೀಶ್ ಗೌಡ ಪರವಾಗಿ ಜಾದಳದ ಪಕ್ಷದ 10 ಜನ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಿದಾಗ ಚುನಾವಣಾಧಿಕಾರಿಗಳು ಆಸಿಫ್ ಅವರು ಅತಿ ಹೆಚ್ಚು ಮತ ಪಡೆದು ಗೆಲುವು ಸಾಧಿಸಿದ್ದಾರೆ ಹರೀಶ್ ಗೌಡ ಅವರು ಕಡಿಮೆ ಮತ ಪಡೆದು ಸೋಲು ಅನುಭವಿಸಿದ್ದಾರೆ ಎಂದರು.

    ಅಧ್ಯಕ್ಷ ಶಿವಮ್ಮ ಚಾಕಳ್ಳಿ ಕೃಷ್ಣ ಮತ್ತು ಉಪಾಧ್ಯಕ್ಷರು ಆಸಿಫ್ ಚುನಾಯಿತರಾಗುತ್ತಿದ್ದಂತೆ ಜಾದಳದ ಮತ್ತು ಕಾಂಗ್ರೆಸ್ ಜೆಡಿಎಸ್ ಕಚೇರಿ ಬಳಿ ಆ ಪಕ್ಷದ ಕಾರ್ಯಕರ್ತರ ಮುಖಂಡರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಜೈಕಾರ ಕೂಗಿದರು.

    ನೂತನ ಅಧ್ಯಕ್ಷರಾದ ಶಿವಮ್ಮ ಚಾಕಳ್ಳಿ ಕೃಷ್ಣ ಉಪಾಧ್ಯಕ್ಷರಾದ ಆಸಿಫ್ ಮಾತನಾಡಿ, ಕಳೆದ ಏಳು ಎಂಟು ತಿಂಗಳಿನಿಂದ ಆಡಳಿತ ಮಂಡಳಿ ಅಧಿಕಾರವಿಲ್ಲದೆ ಅನೇಕ ಮೂಲಭೂತ ಸೌಕರ್ಯಗಳು ಅಭಿವೃದ್ಧಿ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ, ಶಾಸಕರು ಮತ್ತು ಸಂಸದರ ಅವರ ಸಹಕಾರದೊಂದಿಗೆ ಎಲ್ಲಾ ಸದಸ್ಯರ ನಿರ್ದೇಶನದೊಂದಿಗೆ ಪುರಸಭೆ 23 ವಾರ್ಡ್ ಗಳಲ್ಲೂ ಅಭಿವೃದ್ಧಿ ಕೆಲಸಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುವುದು.

    ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಿ ಜನಸಾಮಾನ್ಯರಿಗೆ ಕಚೇರಿಯಲ್ಲಿ ಉತ್ತಮ ಸೇವೆ ಸಿಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು .

    ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಏಜಾಜ್ ಪಾಷಾ, ಜೆಡಿಎಸ್ ಪಕ್ಷದ ಅಧ್ಯಕ್ಷ ರಾಜೇಂದ್ರ, ಪುರಸಭಾ ಸದಸ್ಯರಾದ ಗೀತಾಗಿರಿ ಗೌಡ, ದರ್ಶಿನಿ ಯಶ್ವಂತ್, ಸರೋಜಮ್ಮ, ಮೆಕಾನಿಕ್ ಸೂರಿ, ನಾಗಮ್ಮ, ಸುವಾಸಿನಿ ದಿನೇಶ್, ಕವಿತಾ ಸುರೇಶ್, ಸಾಹಿರಾಬಾನು ಅನ್ಸರ್, ಅನಿತಾನಿಂಗ ನಾಯಕ, ನರಸಿಂಹಮೂರ್ತಿ, ಐಡಿಯಾ ವೆಂಕಟೇಶ್, ಮಧುಕುಮಾರ್, ರಾಜು ವಿಶ್ವಕರ್ಮ, ಲೋಕೇಶ್, ನಂಜಪ್ಪ, ನಂದಿನಿ ಸೋಮು, ಶಾಂತಮ್ಮ ಮಹೇಂದ್ರ, ಕರಾಟೆ ಪ್ರೇಮ್, ಪುಟ್ಟ ಬಸವ, ಮಿಲ್ಲು ನಾಗರಾಜು, ಮುಖಂಡರಾದ ಹೆಚ್ ಸಿ ಮಂಜುನಾಥ್, ಜಿ.ವಿ. ಮಧುಸೂದನ್, ಶಫೀ, ಫಯಾಜ್, ಸ್ಟುಡಿಯೋ ಪ್ರಕಾಶ್, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.