nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಿವಮ್ಮ ಚಾಕಳ್ಳಿ ಕೃಷ್ಣ, ಉಪಾಧ್ಯಕ್ಷರಾಗಿ ಆಸಿಫ್ ಆಯ್ಕೆ
    ತುಮಕೂರು February 19, 2025

    ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಿವಮ್ಮ ಚಾಕಳ್ಳಿ ಕೃಷ್ಣ, ಉಪಾಧ್ಯಕ್ಷರಾಗಿ ಆಸಿಫ್ ಆಯ್ಕೆ

    By adminFebruary 19, 2025No Comments2 Mins Read
    purasabhe h d kote

    ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಜಾದಳ ಪಕ್ಷದ ಶಿವಮ್ಮ ಚಾಕಳ್ಳಿ ಕೃಷ್ಣ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಆಸಿಫ್ ಚುನಾಯಿತರಾಗಿದ್ದಾರೆ.
    ಪಟ್ಟಣದ ಪುರಸಭೆಯ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚಾಕಳ್ಳಿ ವಾರ್ಡಿನ ಸದಸ್ಯರಾದ ಶಿವಮ್ಮ ಚಾಕಹಳ್ಳಿ ಕೃಷ್ಣ ಮಾತ್ರ ನಾಮಪತ್ರ ಸಲ್ಲಿಸಿದರು.

    ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಒಂದನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಆಸಿಫ್, ವಡ್ಡರಗುಡಿಯ ವಾರ್ಡಿನ ಕಾಂಗ್ರೆಸ್ ಸದಸ್ಯ ಸೋಮಶೇಖರ್ ಯರೆಹಳ್ಳಿ, ಹ್ಯಾಂಡ್ ಪೋಸ್ಟಿನ ವಾರ್ಡಿನ ಜಾದಳ ಪಕ್ಷದ ಸದಸ್ಯ ಹರೀಶ್ ಗೌಡ ನಾಮಪತ್ರ ಸಲ್ಲಿಸಿದ್ದರು.


    Provided by
    Provided by

    ಕೊನೆ ಗಳಿಗೆಯಲ್ಲಿ ಸೋಮಶೇಖರ್ ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಆಸಿಫ್ ಮತ್ತು ಹರೀಶ್ ಗೌಡ ನಡುವೆ ಪೈಪೋಟಿ ಉಂಟಾಗಿತ್ತು. ಕಾಂಗ್ರೆಸ್ ಪಕ್ಷದ 13 ಜನ ಸದಸ್ಯರುಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಾಗಿ ಪಟ್ಟು ಹಿಡಿದರೂ ಜಾದಳ ಪಕ್ಷದ ಹತ್ತು ಜನ ಸದಸ್ಯರು ಗುಪ್ತ ಮತದಾನದ ಆಗಬೇಕೆಂದು ತಿಳಿಸಿ ಸಭೆಯಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ತಹಶೀಲ್ದಾರ್ ಶ್ರೀನಿವಾಸ್ ಮತ್ತು ಮುಖ್ಯ ಅಧಿಕಾರಿ ಸುರೇಶ್ ಅವರು ಪುರಸಭೆಯ ಕಾಯ್ದೆಯ ಪುಸ್ತಕ ನೋಡಿ ನಂತರ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಾಹಿತಿ ಪಡೆದುಕೊಂಡ ನಂತರ ಸದಸ್ಯರುಗಳು ಕೈ ಎತ್ತುವ ಮೂಲಕ ಅಭ್ಯರ್ಥಿಯ ಪರ ಮತದಾನ ಮಾಡಲು ಮಾತ್ರ ಅವಕಾಶ ಇದೆ ಎಂದು ತಿಳಿಸಿದರು.

    ನಂತರ ನಡೆದ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ಆಸಿಫ್ ಪರವಾಗಿ ಕಾಂಗ್ರೆಸ್ ಪಕ್ಷದ 13 ಜನ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಿದರು, ಹರೀಶ್ ಗೌಡ ಪರವಾಗಿ ಜಾದಳದ ಪಕ್ಷದ 10 ಜನ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಿದಾಗ ಚುನಾವಣಾಧಿಕಾರಿಗಳು ಆಸಿಫ್ ಅವರು ಅತಿ ಹೆಚ್ಚು ಮತ ಪಡೆದು ಗೆಲುವು ಸಾಧಿಸಿದ್ದಾರೆ ಹರೀಶ್ ಗೌಡ ಅವರು ಕಡಿಮೆ ಮತ ಪಡೆದು ಸೋಲು ಅನುಭವಿಸಿದ್ದಾರೆ ಎಂದರು.

    ಅಧ್ಯಕ್ಷ ಶಿವಮ್ಮ ಚಾಕಳ್ಳಿ ಕೃಷ್ಣ ಮತ್ತು ಉಪಾಧ್ಯಕ್ಷರು ಆಸಿಫ್ ಚುನಾಯಿತರಾಗುತ್ತಿದ್ದಂತೆ ಜಾದಳದ ಮತ್ತು ಕಾಂಗ್ರೆಸ್ ಜೆಡಿಎಸ್ ಕಚೇರಿ ಬಳಿ ಆ ಪಕ್ಷದ ಕಾರ್ಯಕರ್ತರ ಮುಖಂಡರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಜೈಕಾರ ಕೂಗಿದರು.

    ನೂತನ ಅಧ್ಯಕ್ಷರಾದ ಶಿವಮ್ಮ ಚಾಕಳ್ಳಿ ಕೃಷ್ಣ ಉಪಾಧ್ಯಕ್ಷರಾದ ಆಸಿಫ್ ಮಾತನಾಡಿ, ಕಳೆದ ಏಳು ಎಂಟು ತಿಂಗಳಿನಿಂದ ಆಡಳಿತ ಮಂಡಳಿ ಅಧಿಕಾರವಿಲ್ಲದೆ ಅನೇಕ ಮೂಲಭೂತ ಸೌಕರ್ಯಗಳು ಅಭಿವೃದ್ಧಿ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ, ಶಾಸಕರು ಮತ್ತು ಸಂಸದರ ಅವರ ಸಹಕಾರದೊಂದಿಗೆ ಎಲ್ಲಾ ಸದಸ್ಯರ ನಿರ್ದೇಶನದೊಂದಿಗೆ ಪುರಸಭೆ 23 ವಾರ್ಡ್ ಗಳಲ್ಲೂ ಅಭಿವೃದ್ಧಿ ಕೆಲಸಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುವುದು.

    ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಿ ಜನಸಾಮಾನ್ಯರಿಗೆ ಕಚೇರಿಯಲ್ಲಿ ಉತ್ತಮ ಸೇವೆ ಸಿಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು .

    ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಏಜಾಜ್ ಪಾಷಾ, ಜೆಡಿಎಸ್ ಪಕ್ಷದ ಅಧ್ಯಕ್ಷ ರಾಜೇಂದ್ರ, ಪುರಸಭಾ ಸದಸ್ಯರಾದ ಗೀತಾಗಿರಿ ಗೌಡ, ದರ್ಶಿನಿ ಯಶ್ವಂತ್, ಸರೋಜಮ್ಮ, ಮೆಕಾನಿಕ್ ಸೂರಿ, ನಾಗಮ್ಮ, ಸುವಾಸಿನಿ ದಿನೇಶ್, ಕವಿತಾ ಸುರೇಶ್, ಸಾಹಿರಾಬಾನು ಅನ್ಸರ್, ಅನಿತಾನಿಂಗ ನಾಯಕ, ನರಸಿಂಹಮೂರ್ತಿ, ಐಡಿಯಾ ವೆಂಕಟೇಶ್, ಮಧುಕುಮಾರ್, ರಾಜು ವಿಶ್ವಕರ್ಮ, ಲೋಕೇಶ್, ನಂಜಪ್ಪ, ನಂದಿನಿ ಸೋಮು, ಶಾಂತಮ್ಮ ಮಹೇಂದ್ರ, ಕರಾಟೆ ಪ್ರೇಮ್, ಪುಟ್ಟ ಬಸವ, ಮಿಲ್ಲು ನಾಗರಾಜು, ಮುಖಂಡರಾದ ಹೆಚ್ ಸಿ ಮಂಜುನಾಥ್, ಜಿ.ವಿ. ಮಧುಸೂದನ್, ಶಫೀ, ಫಯಾಜ್, ಸ್ಟುಡಿಯೋ ಪ್ರಕಾಶ್, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ…

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.