ತುಮಕೂರು: ನಾಡಿನಲ್ಲೆಡೆ ಶಿವರಾತ್ರಿ ಹಬ್ಬದ ಸಡಗರ ಗರಿಗೆದರಿದ್ದು ಹಿನ್ನೆಲೆಯಲ್ಲಿ ತುಮಕೂರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳು ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇರುವ ಕೋಟೆ ಆಂಜನೇಯ ಸ್ವಾಮಿಗೆ ಬೆಳಗ್ಗೆಯಿಂದ ವಿಶೇಷವಾದ ಪೂಜಾಕೈಂಕರ್ಯಗಳು ಜರುಗಿದವು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷವಾದ ಅಲಂಕಾರವನ್ನು ಏರ್ಪಡಿಸಲಾಗಿತ್ತು.
ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಪೇಟೆಯಲ್ಲಿರುವ ಪಾರ್ವತಿ ಸಮೇತ ಗಂಗಾಧರೇಶ್ವರ ದೇವಾಲಯದಲ್ಲಿ ಕೂಡ ವಿಶೇಷವಾದ ಪೂಜಾಕೈಂಕರ್ಯಗಳು ನಡೆದವು.ಸುಮಾರು 700 ವರ್ಷಗಳ ಇತಿಹಾಸವಿರುವ ಚಿಕ್ಕಪೇಟೆಯ ಪ್ರಸನ್ನ ಗಂಗಾಧರೇಶ್ವರ ದೇವಾಲಯವು ಮುಜರಾಯಿ ಇಲಾಖೆಯ ಅಡಿಯಲ್ಲಿದ್ದು, ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆಯಿಂದ ಗಂಗಾಧರೇಶ್ವರಸ್ವಾಮಿ ವಿಶೇಷವಾದ ಅಭಿಷೇಕಗಳು ವಿವಿಧ ಅಲಂಕಾರಗಳು ನಡೆದವು ಪಾರ್ವತಿ ಸಮೇತ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ಅನೇಕ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.
ವರದಿ: ಎ.ಎನ್.ಪೀರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB